BREAKING NEWS

ಕಾಂಗ್ರೆಸ್ ನಾಯಕ ಚಿಂಚನಸೂರ ಕಾರು ಅಪಘಾತ

ಕಲಬುರಗಿ : ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ.

ಕಾರಿನಲ್ಲಿದ್ದ ಚಿಂಚನಸೂರ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದರು.

ತಡರಾತ್ರಿ ಎರಡು ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಎಲುಬು ಹಾಗೂ ನರಗಳಿಗೆ ಏಟು ಬಿದ್ದಿದೆ. ಆಸ್ಪತ್ರೆಯ ತಜ್ಞ ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಾಬುರಾವ ಅವರ ಮನೆ ಕಲಬುರಗಿಯ ಶಾಂತಿನಗರದಲ್ಲಿದೆ. ಕ್ಷೇತ್ರದಲ್ಲಿ ಪ್ರಚಾರ ಮುಗಿಸಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ ಎಂದು ಗೊತ್ತಾಗಿದೆ.

lokesh

Recent Posts

ಸರ್ಕಾರ ಮಕ್ಕಳಿಗೆ ವೈಚಾರಿಕ ಶಿಕ್ಷಣ ನೀಡಲಿ: ಪ್ರೊ.ಕೆ.ಎಸ್ ಭಗವಾನ್

ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…

49 mins ago

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

2 hours ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

3 hours ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

5 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

5 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

6 hours ago