BREAKING NEWS

ಕೋಲಾರದಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ

ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಆಲಿಯಾಸ್ ಕೌನ್ಸಲರ್ ಶ್ರೀನಿವಾಸ್ ಹತ್ಯೆಗೀಡಾದ ಘಟನೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನಡೆದಿದೆ.

ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದ ವೇಳೆ ಆರು ಜನ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ.

ಎದೆ, ತಲೆ ಸಹಿತ ದೇಹದ ಹಲವೆಡೆ ಗಂಭೀರ ಗಾಯಗಳಾಗಿದ್ದು, ಕೋಲಾರದ ಜಾಲಪ್ಪಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಗೃಹಸಚಿವ ಪರಮೇಶ್ವರ್ ಹಾಗೂ ರಮೇಶ್ ಕುಮಾರ್ ಅವರ ಆಪ್ತರಾಗಿದ್ದಾರೆ ಎನ್ನಲಾಗುತ್ತಿದೆ. ಬಾರ್ ಕಾಮಗಾರಿ ವೀಕ್ಷಣೆ ಮುಗಿಸಿ ವಾಪಸ್ ತೋಟದ ಮನೆಗೆ ಬಂದಿದ್ದೆವು. ಎರಡು ಬೈಕ್ ನಲ್ಲಿ ಆರು ಜನ ತೋಟದ ಮನೆಗೆ ಬಂದಿದ್ದರು. ಬಂದ ತಕ್ಷಣ ಅಂಕಲ್ ಚೆನ್ನಾಗಿದ್ದೀರ ಎಂದು ಮಾತನಾಡಿಸಿದ್ರು. ಶೇಕ್ ಹ್ಯಾಂಡ್ ಕೊಡುವ ನೆಪದಲ್ಲಿ ಏಕಾಏಕಿ ತಲವಾರಿನಿಂದ ದಾಳಿ ಮಾಡಿದ್ದಾರೆ.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago