BREAKING NEWS

ಮಾಜಿ ರಾಜ್ಯಪಾಲ ಸತ್ಯ‌ಪಾಲ್‌ ಮಲಿಕ್ ರ ಸಂದರ್ಶನ ನಡೆಸಿದ ಕಾಂಗ್ರೆಸ್ ನಾಯಕ ರಾಗಾ

ನವದೆಹಲಿ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರೊಂದಿಗಿನ ಸಂದರ್ಶನವೊಂದರಲ್ಲಿ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯ‌ ಪಾಲ್‌ ಮಲಿಕ್ ಅವರು 2019ರ ಪುಲ್ವಾಮ ದಾಳಿಯ ಕುರಿತು ಮತ್ತು ಕೆಲ ಇತರ ಮಹತ್ವದ ವಿಚಾರಗಳ ಕುರಿತು ಕೆಲವು ಆಸಕ್ತಿದಾಯಕ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದರೆ ರಾಹುಲ್‌ ಗಾಂಧಿ ಕೂಡ ಅಚ್ಚರಿಯ ಮಾಹಿತಿ ಹೊರಗೆಡಹಿದ್ದಾರೆ.

ಸರ್ಕಾರ ಪುಲ್ವಾಮ ದಾಳಿಯನ್ನು ನಿಭಾಯಿಸಿದ ರೀತಿಯನ್ನು ಟೀಕಿಸಿದ ರಾಹುಲ್‌, ಘಟನೆಯ ಬಗ್ಗೆ ತಿಳಿದಾಗ ಹುತಾತ್ಮರಿಗೆ ಗೌರವ ಸಲ್ಲಿಸಲು ವಿಮಾನ ನಿಲ್ದಾಣಕ್ಕೆ ಹೋಗಿದ್ದಾಗಿ ತಿಳಿಸಿದರು. “ಆದರೆ ನನ್ನನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಲಾಯಿತು. ಅಲ್ಲೊಂದು ಸಮಾರಂಭ ಇದ್ದಂತೆ ಕಂಡಿತು. ಪ್ರಧಾನಿ ಮೋದಿ ಅಲ್ಲಿದ್ದರು. ಕೊಠಡಿಯ ಹೊರಹೋಗಲು ನಾನು ಹರಸಾಹಸ ಪಡಬೇಕಾಯಿತು,” ಎಂದು ರಾಹುಲ್‌ ಹೇಳಿದರು.

ಸತ್ಯಪಾಲ್‌ ಮಲಿಕ್‌ ಮಾತನಾಡಿ “ಈ ದಾಳಿ ನಮ್ಮ ತಪ್ಪು ಎಂದು ನಾನು ಎರಡು ಚಾನಲ್‌ಗಳಿಗೆ ಹೇಳಿದೆ, ಇದನ್ನು ಬೇರೆಲ್ಲೂ ಹೇಳದಂತೆ ನನಗೆ ಸೂಚನೆ ನೀಡಲಾಯಿತು. ನನ್ನ ಹೇಳಿಕೆ ತನಿಖೆಯನ್ನು ಬಾಧಿಸಬಹುದು ಎಂದು ಅಂದುಕೊಂಡೆ, ಆದರೆ ಯಾವುದೇ ತನಿಖೆ ನಡೆಯಲಿಲ್ಲ. ದಾಳಿಯನ್ನು ಚುನಾವಣೆ ಉದ್ದೇಶಗಳಿಗೆ ಬಳಸಲಾಯಿತು ಹಾಗೂ ದಾಳಿ ನಡೆದ ಮೂರನೇ ದಿನ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಈ ದಾಳಿಯನ್ನು ರಾಜಕೀಯವಾಗಿ ಬಳಸಿಕೊಂಡರು,” ಎಂದು ಮಲಿಕ್‌ ಹೇಳಿದ್ದಾರೆ.

ಸಿಆರ್‌ಪಿಎಫ್‌ ಸಿಬ್ಬಂದಿಯನ್ನು ಸಾಗಿಸಲು ವಿಮಾನದ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದರೆ ಈ ದಾಳಿಯನ್ನು ತಡೆಯಬಹುದಾಗಿತ್ತು. ಸಿಬ್ಬಂದಿ ಅಪಾಯಕಾರಿ ಹಾದಿಯಲ್ಲಿ ಸಾಗಬೇಕಾಗಿ ಬಂತು ಎಂದು ಹೇಳಿದ ಮಲಿಕ್‌ ದಾಳಿಗೆ ಬಳಸಿದ ಸ್ಫೋಟಕಗಳು ಪಾಕಿಸ್ತಾನದಿಂದ ಬಂದಿದ್ದವು ಹಾಗೂ ದಾಳಿ ನಡೆಸಿದವರು ಉಗ್ರವಾದದ ಹಿನ್ನೆಲೆ ಹೊಂದಿದ್ದರು, ಇದು ಗುಪ್ತಚರ ವೈಫಲ್ಯಗಳ ಕುರಿತು ಪ್ರಶ್ನೆಗಳನ್ನೆತ್ತುತ್ತವೆ ಎಂದು ಅವರು ಹೇಳಿದರು.

“ಸಿಆರ್‌ಪಿಎಫ್‌ ವಾಹನದ ಮೇಲೆ ದಾಳಿ ನಡೆಸಿದ ಸ್ಫೋಟಕಗಳನ್ನು ತುಂಬಿದ್ದ ಟ್ರಕ್‌ ಆ ಪ್ರದೇಶದಲ್ಲಿ 10-12 ದಿನಗಳಿಂದ ಅಲೆದಾಡುತ್ತಿತ್ತು. ಈ ವಾಹನದ ಚಾಲಕ ಮತ್ತು ಮಾಲಕರಿಗೆ ಉಗ್ರವಾದದ ಹಿನ್ನೆಲೆಯಿತ್ತು. ಹಿಂದೆ ಹಲವಾರು ಬಾರಿ ಅವರನ್ನು ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು, ಆದರೂ ಗುಪ್ತಚರ ಇಲಾಖೆ ಅವರ ಮೇಲೆ ಕಣ್ಣಿಟ್ಟಿರಲಿಲ್ಲ,” ಎಂದು ಮಲಿಕ್‌ ಹೇಳಿದರು.

ಕೃಷಿ ಕ್ಷೇತ್ರದಲ್ಲಿ ಅದಾನಿ ಶಾಮೀಲಾತಿ ಕುರಿತು ಕೂಡ ರಾಹುಲ್‌ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡ ಮಲಿಕ್‌, ಕನಿಷ್ಠ ಬೆಂಬಲ ಬೆಲೆಯ ಭರವಸೆಯನ್ನು ಈಡೇರಿಸಲು ಸರ್ಕಾರ ವಿಫಲವಾಗಿದ್ದರಿಂದ ಕೃಷಿ ಉತ್ಪನ್ನ ಬೆಲೆಗಳನ್ನು ತನ್ನ ಪ್ರಯೋಜನಕ್ಕೆ ತಕ್ಕಂತೆ ಹೊಂದಲು ಅದಾನಿಗೆ ಸಾಧ್ಯವಾಯಿತು. ದೊಡ್ಡ ಗೋದಾಮುಗಳ ಸ್ಥಾಪನೆಯಿಂದ ಅದಾನಿ ಸಂಸ್ಥೆ ಬೆಳೆಗಳನ್ನು ಕಡಿಮೆ ಬೆಲೆಗೆ ಖರೀದಿಸಿ ನಂತರ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶವನ್ನಿಟ್ಟುಕೊಂಡಿದೆಎಂದು.

“ಮುಂದಿನ ವರ್ಷ ಬೆಲೆ ಏರಿಕೆಯಾದಾಗ ಅವರು ಮಾರಾಟ ಮಾಡುತ್ತಾರೆ. ಎಂಎಸ್‌ಪಿ ಜಾರಿಯಾದರೆ ರೈತರು ಕಡಿಮೆ ಬೆಲೆಗೆ ಅವರಿಗೆ ಮಾರಾಟ ಮಾಡುವುದಿಲ್ಲ,” ಎಂದು ಹೇಳಿದರು

https://x.com/shaandelhite/status/1717088507636887792?s=20

andolanait

Recent Posts

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

8 mins ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

12 mins ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

16 mins ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

26 mins ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

1 hour ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

2 hours ago