ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗಿನ ಸಂದರ್ಶನವೊಂದರಲ್ಲಿ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರು 2019ರ ಪುಲ್ವಾಮ ದಾಳಿಯ ಕುರಿತು ಮತ್ತು ಕೆಲ ಇತರ ಮಹತ್ವದ ವಿಚಾರಗಳ ಕುರಿತು ಕೆಲವು ಆಸಕ್ತಿದಾಯಕ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದರೆ ರಾಹುಲ್ ಗಾಂಧಿ ಕೂಡ ಅಚ್ಚರಿಯ ಮಾಹಿತಿ ಹೊರಗೆಡಹಿದ್ದಾರೆ.
ಸರ್ಕಾರ ಪುಲ್ವಾಮ ದಾಳಿಯನ್ನು ನಿಭಾಯಿಸಿದ ರೀತಿಯನ್ನು ಟೀಕಿಸಿದ ರಾಹುಲ್, ಘಟನೆಯ ಬಗ್ಗೆ ತಿಳಿದಾಗ ಹುತಾತ್ಮರಿಗೆ ಗೌರವ ಸಲ್ಲಿಸಲು ವಿಮಾನ ನಿಲ್ದಾಣಕ್ಕೆ ಹೋಗಿದ್ದಾಗಿ ತಿಳಿಸಿದರು. “ಆದರೆ ನನ್ನನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಲಾಯಿತು. ಅಲ್ಲೊಂದು ಸಮಾರಂಭ ಇದ್ದಂತೆ ಕಂಡಿತು. ಪ್ರಧಾನಿ ಮೋದಿ ಅಲ್ಲಿದ್ದರು. ಕೊಠಡಿಯ ಹೊರಹೋಗಲು ನಾನು ಹರಸಾಹಸ ಪಡಬೇಕಾಯಿತು,” ಎಂದು ರಾಹುಲ್ ಹೇಳಿದರು.
ಸತ್ಯಪಾಲ್ ಮಲಿಕ್ ಮಾತನಾಡಿ “ಈ ದಾಳಿ ನಮ್ಮ ತಪ್ಪು ಎಂದು ನಾನು ಎರಡು ಚಾನಲ್ಗಳಿಗೆ ಹೇಳಿದೆ, ಇದನ್ನು ಬೇರೆಲ್ಲೂ ಹೇಳದಂತೆ ನನಗೆ ಸೂಚನೆ ನೀಡಲಾಯಿತು. ನನ್ನ ಹೇಳಿಕೆ ತನಿಖೆಯನ್ನು ಬಾಧಿಸಬಹುದು ಎಂದು ಅಂದುಕೊಂಡೆ, ಆದರೆ ಯಾವುದೇ ತನಿಖೆ ನಡೆಯಲಿಲ್ಲ. ದಾಳಿಯನ್ನು ಚುನಾವಣೆ ಉದ್ದೇಶಗಳಿಗೆ ಬಳಸಲಾಯಿತು ಹಾಗೂ ದಾಳಿ ನಡೆದ ಮೂರನೇ ದಿನ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಈ ದಾಳಿಯನ್ನು ರಾಜಕೀಯವಾಗಿ ಬಳಸಿಕೊಂಡರು,” ಎಂದು ಮಲಿಕ್ ಹೇಳಿದ್ದಾರೆ.
ಸಿಆರ್ಪಿಎಫ್ ಸಿಬ್ಬಂದಿಯನ್ನು ಸಾಗಿಸಲು ವಿಮಾನದ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದರೆ ಈ ದಾಳಿಯನ್ನು ತಡೆಯಬಹುದಾಗಿತ್ತು. ಸಿಬ್ಬಂದಿ ಅಪಾಯಕಾರಿ ಹಾದಿಯಲ್ಲಿ ಸಾಗಬೇಕಾಗಿ ಬಂತು ಎಂದು ಹೇಳಿದ ಮಲಿಕ್ ದಾಳಿಗೆ ಬಳಸಿದ ಸ್ಫೋಟಕಗಳು ಪಾಕಿಸ್ತಾನದಿಂದ ಬಂದಿದ್ದವು ಹಾಗೂ ದಾಳಿ ನಡೆಸಿದವರು ಉಗ್ರವಾದದ ಹಿನ್ನೆಲೆ ಹೊಂದಿದ್ದರು, ಇದು ಗುಪ್ತಚರ ವೈಫಲ್ಯಗಳ ಕುರಿತು ಪ್ರಶ್ನೆಗಳನ್ನೆತ್ತುತ್ತವೆ ಎಂದು ಅವರು ಹೇಳಿದರು.
“ಸಿಆರ್ಪಿಎಫ್ ವಾಹನದ ಮೇಲೆ ದಾಳಿ ನಡೆಸಿದ ಸ್ಫೋಟಕಗಳನ್ನು ತುಂಬಿದ್ದ ಟ್ರಕ್ ಆ ಪ್ರದೇಶದಲ್ಲಿ 10-12 ದಿನಗಳಿಂದ ಅಲೆದಾಡುತ್ತಿತ್ತು. ಈ ವಾಹನದ ಚಾಲಕ ಮತ್ತು ಮಾಲಕರಿಗೆ ಉಗ್ರವಾದದ ಹಿನ್ನೆಲೆಯಿತ್ತು. ಹಿಂದೆ ಹಲವಾರು ಬಾರಿ ಅವರನ್ನು ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು, ಆದರೂ ಗುಪ್ತಚರ ಇಲಾಖೆ ಅವರ ಮೇಲೆ ಕಣ್ಣಿಟ್ಟಿರಲಿಲ್ಲ,” ಎಂದು ಮಲಿಕ್ ಹೇಳಿದರು.
ಕೃಷಿ ಕ್ಷೇತ್ರದಲ್ಲಿ ಅದಾನಿ ಶಾಮೀಲಾತಿ ಕುರಿತು ಕೂಡ ರಾಹುಲ್ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡ ಮಲಿಕ್, ಕನಿಷ್ಠ ಬೆಂಬಲ ಬೆಲೆಯ ಭರವಸೆಯನ್ನು ಈಡೇರಿಸಲು ಸರ್ಕಾರ ವಿಫಲವಾಗಿದ್ದರಿಂದ ಕೃಷಿ ಉತ್ಪನ್ನ ಬೆಲೆಗಳನ್ನು ತನ್ನ ಪ್ರಯೋಜನಕ್ಕೆ ತಕ್ಕಂತೆ ಹೊಂದಲು ಅದಾನಿಗೆ ಸಾಧ್ಯವಾಯಿತು. ದೊಡ್ಡ ಗೋದಾಮುಗಳ ಸ್ಥಾಪನೆಯಿಂದ ಅದಾನಿ ಸಂಸ್ಥೆ ಬೆಳೆಗಳನ್ನು ಕಡಿಮೆ ಬೆಲೆಗೆ ಖರೀದಿಸಿ ನಂತರ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶವನ್ನಿಟ್ಟುಕೊಂಡಿದೆಎಂದು.
“ಮುಂದಿನ ವರ್ಷ ಬೆಲೆ ಏರಿಕೆಯಾದಾಗ ಅವರು ಮಾರಾಟ ಮಾಡುತ್ತಾರೆ. ಎಂಎಸ್ಪಿ ಜಾರಿಯಾದರೆ ರೈತರು ಕಡಿಮೆ ಬೆಲೆಗೆ ಅವರಿಗೆ ಮಾರಾಟ ಮಾಡುವುದಿಲ್ಲ,” ಎಂದು ಹೇಳಿದರು
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…