BREAKING NEWS

ಮಾಜಿ ರಾಜ್ಯಪಾಲ ಸತ್ಯ‌ಪಾಲ್‌ ಮಲಿಕ್ ರ ಸಂದರ್ಶನ ನಡೆಸಿದ ಕಾಂಗ್ರೆಸ್ ನಾಯಕ ರಾಗಾ

ನವದೆಹಲಿ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರೊಂದಿಗಿನ ಸಂದರ್ಶನವೊಂದರಲ್ಲಿ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯ‌ ಪಾಲ್‌ ಮಲಿಕ್ ಅವರು 2019ರ ಪುಲ್ವಾಮ ದಾಳಿಯ ಕುರಿತು ಮತ್ತು ಕೆಲ ಇತರ ಮಹತ್ವದ ವಿಚಾರಗಳ ಕುರಿತು ಕೆಲವು ಆಸಕ್ತಿದಾಯಕ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದರೆ ರಾಹುಲ್‌ ಗಾಂಧಿ ಕೂಡ ಅಚ್ಚರಿಯ ಮಾಹಿತಿ ಹೊರಗೆಡಹಿದ್ದಾರೆ.

ಸರ್ಕಾರ ಪುಲ್ವಾಮ ದಾಳಿಯನ್ನು ನಿಭಾಯಿಸಿದ ರೀತಿಯನ್ನು ಟೀಕಿಸಿದ ರಾಹುಲ್‌, ಘಟನೆಯ ಬಗ್ಗೆ ತಿಳಿದಾಗ ಹುತಾತ್ಮರಿಗೆ ಗೌರವ ಸಲ್ಲಿಸಲು ವಿಮಾನ ನಿಲ್ದಾಣಕ್ಕೆ ಹೋಗಿದ್ದಾಗಿ ತಿಳಿಸಿದರು. “ಆದರೆ ನನ್ನನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಲಾಯಿತು. ಅಲ್ಲೊಂದು ಸಮಾರಂಭ ಇದ್ದಂತೆ ಕಂಡಿತು. ಪ್ರಧಾನಿ ಮೋದಿ ಅಲ್ಲಿದ್ದರು. ಕೊಠಡಿಯ ಹೊರಹೋಗಲು ನಾನು ಹರಸಾಹಸ ಪಡಬೇಕಾಯಿತು,” ಎಂದು ರಾಹುಲ್‌ ಹೇಳಿದರು.

ಸತ್ಯಪಾಲ್‌ ಮಲಿಕ್‌ ಮಾತನಾಡಿ “ಈ ದಾಳಿ ನಮ್ಮ ತಪ್ಪು ಎಂದು ನಾನು ಎರಡು ಚಾನಲ್‌ಗಳಿಗೆ ಹೇಳಿದೆ, ಇದನ್ನು ಬೇರೆಲ್ಲೂ ಹೇಳದಂತೆ ನನಗೆ ಸೂಚನೆ ನೀಡಲಾಯಿತು. ನನ್ನ ಹೇಳಿಕೆ ತನಿಖೆಯನ್ನು ಬಾಧಿಸಬಹುದು ಎಂದು ಅಂದುಕೊಂಡೆ, ಆದರೆ ಯಾವುದೇ ತನಿಖೆ ನಡೆಯಲಿಲ್ಲ. ದಾಳಿಯನ್ನು ಚುನಾವಣೆ ಉದ್ದೇಶಗಳಿಗೆ ಬಳಸಲಾಯಿತು ಹಾಗೂ ದಾಳಿ ನಡೆದ ಮೂರನೇ ದಿನ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಈ ದಾಳಿಯನ್ನು ರಾಜಕೀಯವಾಗಿ ಬಳಸಿಕೊಂಡರು,” ಎಂದು ಮಲಿಕ್‌ ಹೇಳಿದ್ದಾರೆ.

ಸಿಆರ್‌ಪಿಎಫ್‌ ಸಿಬ್ಬಂದಿಯನ್ನು ಸಾಗಿಸಲು ವಿಮಾನದ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದರೆ ಈ ದಾಳಿಯನ್ನು ತಡೆಯಬಹುದಾಗಿತ್ತು. ಸಿಬ್ಬಂದಿ ಅಪಾಯಕಾರಿ ಹಾದಿಯಲ್ಲಿ ಸಾಗಬೇಕಾಗಿ ಬಂತು ಎಂದು ಹೇಳಿದ ಮಲಿಕ್‌ ದಾಳಿಗೆ ಬಳಸಿದ ಸ್ಫೋಟಕಗಳು ಪಾಕಿಸ್ತಾನದಿಂದ ಬಂದಿದ್ದವು ಹಾಗೂ ದಾಳಿ ನಡೆಸಿದವರು ಉಗ್ರವಾದದ ಹಿನ್ನೆಲೆ ಹೊಂದಿದ್ದರು, ಇದು ಗುಪ್ತಚರ ವೈಫಲ್ಯಗಳ ಕುರಿತು ಪ್ರಶ್ನೆಗಳನ್ನೆತ್ತುತ್ತವೆ ಎಂದು ಅವರು ಹೇಳಿದರು.

“ಸಿಆರ್‌ಪಿಎಫ್‌ ವಾಹನದ ಮೇಲೆ ದಾಳಿ ನಡೆಸಿದ ಸ್ಫೋಟಕಗಳನ್ನು ತುಂಬಿದ್ದ ಟ್ರಕ್‌ ಆ ಪ್ರದೇಶದಲ್ಲಿ 10-12 ದಿನಗಳಿಂದ ಅಲೆದಾಡುತ್ತಿತ್ತು. ಈ ವಾಹನದ ಚಾಲಕ ಮತ್ತು ಮಾಲಕರಿಗೆ ಉಗ್ರವಾದದ ಹಿನ್ನೆಲೆಯಿತ್ತು. ಹಿಂದೆ ಹಲವಾರು ಬಾರಿ ಅವರನ್ನು ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು, ಆದರೂ ಗುಪ್ತಚರ ಇಲಾಖೆ ಅವರ ಮೇಲೆ ಕಣ್ಣಿಟ್ಟಿರಲಿಲ್ಲ,” ಎಂದು ಮಲಿಕ್‌ ಹೇಳಿದರು.

ಕೃಷಿ ಕ್ಷೇತ್ರದಲ್ಲಿ ಅದಾನಿ ಶಾಮೀಲಾತಿ ಕುರಿತು ಕೂಡ ರಾಹುಲ್‌ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡ ಮಲಿಕ್‌, ಕನಿಷ್ಠ ಬೆಂಬಲ ಬೆಲೆಯ ಭರವಸೆಯನ್ನು ಈಡೇರಿಸಲು ಸರ್ಕಾರ ವಿಫಲವಾಗಿದ್ದರಿಂದ ಕೃಷಿ ಉತ್ಪನ್ನ ಬೆಲೆಗಳನ್ನು ತನ್ನ ಪ್ರಯೋಜನಕ್ಕೆ ತಕ್ಕಂತೆ ಹೊಂದಲು ಅದಾನಿಗೆ ಸಾಧ್ಯವಾಯಿತು. ದೊಡ್ಡ ಗೋದಾಮುಗಳ ಸ್ಥಾಪನೆಯಿಂದ ಅದಾನಿ ಸಂಸ್ಥೆ ಬೆಳೆಗಳನ್ನು ಕಡಿಮೆ ಬೆಲೆಗೆ ಖರೀದಿಸಿ ನಂತರ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶವನ್ನಿಟ್ಟುಕೊಂಡಿದೆಎಂದು.

“ಮುಂದಿನ ವರ್ಷ ಬೆಲೆ ಏರಿಕೆಯಾದಾಗ ಅವರು ಮಾರಾಟ ಮಾಡುತ್ತಾರೆ. ಎಂಎಸ್‌ಪಿ ಜಾರಿಯಾದರೆ ರೈತರು ಕಡಿಮೆ ಬೆಲೆಗೆ ಅವರಿಗೆ ಮಾರಾಟ ಮಾಡುವುದಿಲ್ಲ,” ಎಂದು ಹೇಳಿದರು

https://x.com/shaandelhite/status/1717088507636887792?s=20

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

11 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

11 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

13 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

13 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

13 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

14 hours ago