BREAKING NEWS

ಮಾಜಿ ರಾಜ್ಯಪಾಲ ಸತ್ಯ‌ಪಾಲ್‌ ಮಲಿಕ್ ರ ಸಂದರ್ಶನ ನಡೆಸಿದ ಕಾಂಗ್ರೆಸ್ ನಾಯಕ ರಾಗಾ

ನವದೆಹಲಿ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರೊಂದಿಗಿನ ಸಂದರ್ಶನವೊಂದರಲ್ಲಿ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯ‌ ಪಾಲ್‌ ಮಲಿಕ್ ಅವರು 2019ರ ಪುಲ್ವಾಮ ದಾಳಿಯ ಕುರಿತು ಮತ್ತು ಕೆಲ ಇತರ ಮಹತ್ವದ ವಿಚಾರಗಳ ಕುರಿತು ಕೆಲವು ಆಸಕ್ತಿದಾಯಕ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದರೆ ರಾಹುಲ್‌ ಗಾಂಧಿ ಕೂಡ ಅಚ್ಚರಿಯ ಮಾಹಿತಿ ಹೊರಗೆಡಹಿದ್ದಾರೆ.

ಸರ್ಕಾರ ಪುಲ್ವಾಮ ದಾಳಿಯನ್ನು ನಿಭಾಯಿಸಿದ ರೀತಿಯನ್ನು ಟೀಕಿಸಿದ ರಾಹುಲ್‌, ಘಟನೆಯ ಬಗ್ಗೆ ತಿಳಿದಾಗ ಹುತಾತ್ಮರಿಗೆ ಗೌರವ ಸಲ್ಲಿಸಲು ವಿಮಾನ ನಿಲ್ದಾಣಕ್ಕೆ ಹೋಗಿದ್ದಾಗಿ ತಿಳಿಸಿದರು. “ಆದರೆ ನನ್ನನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಲಾಯಿತು. ಅಲ್ಲೊಂದು ಸಮಾರಂಭ ಇದ್ದಂತೆ ಕಂಡಿತು. ಪ್ರಧಾನಿ ಮೋದಿ ಅಲ್ಲಿದ್ದರು. ಕೊಠಡಿಯ ಹೊರಹೋಗಲು ನಾನು ಹರಸಾಹಸ ಪಡಬೇಕಾಯಿತು,” ಎಂದು ರಾಹುಲ್‌ ಹೇಳಿದರು.

ಸತ್ಯಪಾಲ್‌ ಮಲಿಕ್‌ ಮಾತನಾಡಿ “ಈ ದಾಳಿ ನಮ್ಮ ತಪ್ಪು ಎಂದು ನಾನು ಎರಡು ಚಾನಲ್‌ಗಳಿಗೆ ಹೇಳಿದೆ, ಇದನ್ನು ಬೇರೆಲ್ಲೂ ಹೇಳದಂತೆ ನನಗೆ ಸೂಚನೆ ನೀಡಲಾಯಿತು. ನನ್ನ ಹೇಳಿಕೆ ತನಿಖೆಯನ್ನು ಬಾಧಿಸಬಹುದು ಎಂದು ಅಂದುಕೊಂಡೆ, ಆದರೆ ಯಾವುದೇ ತನಿಖೆ ನಡೆಯಲಿಲ್ಲ. ದಾಳಿಯನ್ನು ಚುನಾವಣೆ ಉದ್ದೇಶಗಳಿಗೆ ಬಳಸಲಾಯಿತು ಹಾಗೂ ದಾಳಿ ನಡೆದ ಮೂರನೇ ದಿನ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಈ ದಾಳಿಯನ್ನು ರಾಜಕೀಯವಾಗಿ ಬಳಸಿಕೊಂಡರು,” ಎಂದು ಮಲಿಕ್‌ ಹೇಳಿದ್ದಾರೆ.

ಸಿಆರ್‌ಪಿಎಫ್‌ ಸಿಬ್ಬಂದಿಯನ್ನು ಸಾಗಿಸಲು ವಿಮಾನದ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದರೆ ಈ ದಾಳಿಯನ್ನು ತಡೆಯಬಹುದಾಗಿತ್ತು. ಸಿಬ್ಬಂದಿ ಅಪಾಯಕಾರಿ ಹಾದಿಯಲ್ಲಿ ಸಾಗಬೇಕಾಗಿ ಬಂತು ಎಂದು ಹೇಳಿದ ಮಲಿಕ್‌ ದಾಳಿಗೆ ಬಳಸಿದ ಸ್ಫೋಟಕಗಳು ಪಾಕಿಸ್ತಾನದಿಂದ ಬಂದಿದ್ದವು ಹಾಗೂ ದಾಳಿ ನಡೆಸಿದವರು ಉಗ್ರವಾದದ ಹಿನ್ನೆಲೆ ಹೊಂದಿದ್ದರು, ಇದು ಗುಪ್ತಚರ ವೈಫಲ್ಯಗಳ ಕುರಿತು ಪ್ರಶ್ನೆಗಳನ್ನೆತ್ತುತ್ತವೆ ಎಂದು ಅವರು ಹೇಳಿದರು.

“ಸಿಆರ್‌ಪಿಎಫ್‌ ವಾಹನದ ಮೇಲೆ ದಾಳಿ ನಡೆಸಿದ ಸ್ಫೋಟಕಗಳನ್ನು ತುಂಬಿದ್ದ ಟ್ರಕ್‌ ಆ ಪ್ರದೇಶದಲ್ಲಿ 10-12 ದಿನಗಳಿಂದ ಅಲೆದಾಡುತ್ತಿತ್ತು. ಈ ವಾಹನದ ಚಾಲಕ ಮತ್ತು ಮಾಲಕರಿಗೆ ಉಗ್ರವಾದದ ಹಿನ್ನೆಲೆಯಿತ್ತು. ಹಿಂದೆ ಹಲವಾರು ಬಾರಿ ಅವರನ್ನು ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು, ಆದರೂ ಗುಪ್ತಚರ ಇಲಾಖೆ ಅವರ ಮೇಲೆ ಕಣ್ಣಿಟ್ಟಿರಲಿಲ್ಲ,” ಎಂದು ಮಲಿಕ್‌ ಹೇಳಿದರು.

ಕೃಷಿ ಕ್ಷೇತ್ರದಲ್ಲಿ ಅದಾನಿ ಶಾಮೀಲಾತಿ ಕುರಿತು ಕೂಡ ರಾಹುಲ್‌ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡ ಮಲಿಕ್‌, ಕನಿಷ್ಠ ಬೆಂಬಲ ಬೆಲೆಯ ಭರವಸೆಯನ್ನು ಈಡೇರಿಸಲು ಸರ್ಕಾರ ವಿಫಲವಾಗಿದ್ದರಿಂದ ಕೃಷಿ ಉತ್ಪನ್ನ ಬೆಲೆಗಳನ್ನು ತನ್ನ ಪ್ರಯೋಜನಕ್ಕೆ ತಕ್ಕಂತೆ ಹೊಂದಲು ಅದಾನಿಗೆ ಸಾಧ್ಯವಾಯಿತು. ದೊಡ್ಡ ಗೋದಾಮುಗಳ ಸ್ಥಾಪನೆಯಿಂದ ಅದಾನಿ ಸಂಸ್ಥೆ ಬೆಳೆಗಳನ್ನು ಕಡಿಮೆ ಬೆಲೆಗೆ ಖರೀದಿಸಿ ನಂತರ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶವನ್ನಿಟ್ಟುಕೊಂಡಿದೆಎಂದು.

“ಮುಂದಿನ ವರ್ಷ ಬೆಲೆ ಏರಿಕೆಯಾದಾಗ ಅವರು ಮಾರಾಟ ಮಾಡುತ್ತಾರೆ. ಎಂಎಸ್‌ಪಿ ಜಾರಿಯಾದರೆ ರೈತರು ಕಡಿಮೆ ಬೆಲೆಗೆ ಅವರಿಗೆ ಮಾರಾಟ ಮಾಡುವುದಿಲ್ಲ,” ಎಂದು ಹೇಳಿದರು

https://x.com/shaandelhite/status/1717088507636887792?s=20

andolanait

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

23 mins ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

30 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

35 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

40 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

45 mins ago