BREAKING NEWS

ಕಾಂಗ್ರೆಸ್ ನಾಯಕರು ನಿಮ್ಮ ಬೆದರಿಕೆಗೆ ಹೆದರೋದಿಲ್ಲ : ಬಿಜೆಪಿಗೆ ಡಿಕೆಶಿ ತಿರುಗೇಟು

ಬೆಂಗಳೂರು : ಕಾಂಗ್ರೆಸ್ ನಾಯಕರು ನಿಮ್ಮ ಬೆದರಿಕೆಗೆ ಹೆದರೋದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದೆ ಇದ್ದರೆ ಕೇಂದ್ರದ ಯೋಜನೆಗಳನ್ನು ನಿಲ್ಲಿಸುತ್ತೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದರು.

ಸದಾಶಿವನಗರದಲ್ಲಿ ಸೋಮವಾರ ಮಾತನಾಡಿದ ಡಿಕೆಶಿ,‌ ಮಿಸ್ಟರ್ ನಡ್ಡಾಜಿ, ನಮ್ಮನ್ನು ಹೆದರಿಸಬೇಡಿ, ಏನು ಹೆದರಿಸ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದರು.
ಕೇಂದ್ರದ ಯೋಜನೆಗಳನ್ನು ನಿಲ್ಲಿಸ್ತೇವೆ ಅಂತ ಹೆದರಿಸ್ತೀರಾ? ನಿಮ್ಮ ಶಾಸಕರು ಮಕ್ಕಳ ತರಹ ಸುಮ್ಮನಿರಬಹುದು. ಆದರೆ ಕಾಂಗ್ರೆಸ್ ನಾಯಕರು ನಿಮ್ಮ ಬೆದರಿಕೆಗೆ ಹೆದರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ನಿಮ್ಮ ಪ್ರಧಾನಿಯನ್ನು ಬೀದಿ ಬೀದಿ ಅಲೆಯೋ ತರಹ ಮಾಡಿದ್ದೀರಲ್ಲ ಎಂದು ನರೇಂದ್ರ ಮೋದಿ ರೋಡ್ ಶೋಗೂ ತಿರುಗೇಟು ನೀಡಿದರು.
ಬಿಜೆಪಿ ಸರ್ಕಾರ ಕಾಂಗ್ರೆಸ್ ನ ಬ್ಲಾಕ್ ಮೇಲ್ ಮಾಡ್ತಾ ಇದ್ದಾರೆ.‌ ಇದು ಫೆಡರಲ್ ವ್ಯವಸ್ಥೆಯಾಗಿದೆ. ಕರ್ನಾಟಕದ ತೆರಿಗೆ ಪಾಲಿನಲ್ಲಿ 41% ದೆಹಲಿ ಕೊಡ್ತಾ ಇದೆ. ವಾಪಸ್ ಬರ್ತಾ ಇರೋದು 17, 18% ಮಾತ್ರ. ನಡ್ಡಾ ಅವರ ಬ್ಲ್ಯಾಕ್ ಮೇಲ್ ಗೆ ಹೆದರಲ್ಲ ನಾವು ಎಂದರು.

ಗೃಹ ಸಚಿವ ಅಮಿಶ್ ಶಾ ಹೇಳಿದ್ದರು ಶಾಂತಿ ಸುವ್ಯವಸ್ಥೆ ಹಾಳುಮಾಡುತ್ತಿದ್ದಾರೆ ಅಂತ. ಇದು ಕರ್ನಾಟಕದ ಸ್ವಾಭಿಮಾನದ ಚುನಾವಣೆ ಇದು.
ನಮಗೆ ಈ ರೀತಿ ಮಾಡೋಕೆ ಆಗಲ್ಲ. ಮೇಕೆದಾಟು ಪಾದಯಾತ್ರೆ ಮಾಡಿದ್ವಿ. ಬಿಜೆಪಿ ಒಂದು ಸಾವಿರ ಕೋಟಿ ಘೋಷಣೆ ಮಾಡಿದರು ಎಂದರು.

141 ಸೀಟ್ ಗೆಲ್ಲುವುದು ಪಕ್ಕಾ : ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನಗಳನ್ನು ಗೆಲ್ಲುತ್ತದೆ‌. ನಮ್ಮ ಕಾನ್ಫಿಡೆನ್ಸ್ 141, ನೀವು 113 ಅನ್ನಬಹುದು ಆದರೆ ನಾವು 141 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.15 ನೇ ತಾರಿಕು ಕ್ಯಾಬಿನೆಟ್ ನಲ್ಲಿ ನಾವು ಘೋಷಣೆ ಮಾಡಿರುವ ಗ್ಯಾರಂಟಿಯನ್ನು ಜಾರಿ ಮಾಡುತ್ತೇವೆ. ಯಾರ ನೇತೃತ್ವದ ಕ್ಯಾಬಿನೆಟ್ ಅನ್ನೊದನ್ನು ಮೇ 15 ರಂದು ಮಲ್ಲಿಕಾರ್ಜುನ ಖರ್ಗೆ ತಿಳಿಸುತ್ತಾರೆ ಎಂದರು.

lokesh

Recent Posts

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

16 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

1 hour ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

1 hour ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

1 hour ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

2 hours ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

2 hours ago