ಬೆಂಗಳೂರು : ಕಾಂಗ್ರೆಸ್ ನಾಯಕರು ನಿಮ್ಮ ಬೆದರಿಕೆಗೆ ಹೆದರೋದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದೆ ಇದ್ದರೆ ಕೇಂದ್ರದ ಯೋಜನೆಗಳನ್ನು ನಿಲ್ಲಿಸುತ್ತೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದರು.
ಸದಾಶಿವನಗರದಲ್ಲಿ ಸೋಮವಾರ ಮಾತನಾಡಿದ ಡಿಕೆಶಿ, ಮಿಸ್ಟರ್ ನಡ್ಡಾಜಿ, ನಮ್ಮನ್ನು ಹೆದರಿಸಬೇಡಿ, ಏನು ಹೆದರಿಸ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದರು.
ಕೇಂದ್ರದ ಯೋಜನೆಗಳನ್ನು ನಿಲ್ಲಿಸ್ತೇವೆ ಅಂತ ಹೆದರಿಸ್ತೀರಾ? ನಿಮ್ಮ ಶಾಸಕರು ಮಕ್ಕಳ ತರಹ ಸುಮ್ಮನಿರಬಹುದು. ಆದರೆ ಕಾಂಗ್ರೆಸ್ ನಾಯಕರು ನಿಮ್ಮ ಬೆದರಿಕೆಗೆ ಹೆದರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ನಿಮ್ಮ ಪ್ರಧಾನಿಯನ್ನು ಬೀದಿ ಬೀದಿ ಅಲೆಯೋ ತರಹ ಮಾಡಿದ್ದೀರಲ್ಲ ಎಂದು ನರೇಂದ್ರ ಮೋದಿ ರೋಡ್ ಶೋಗೂ ತಿರುಗೇಟು ನೀಡಿದರು.
ಬಿಜೆಪಿ ಸರ್ಕಾರ ಕಾಂಗ್ರೆಸ್ ನ ಬ್ಲಾಕ್ ಮೇಲ್ ಮಾಡ್ತಾ ಇದ್ದಾರೆ. ಇದು ಫೆಡರಲ್ ವ್ಯವಸ್ಥೆಯಾಗಿದೆ. ಕರ್ನಾಟಕದ ತೆರಿಗೆ ಪಾಲಿನಲ್ಲಿ 41% ದೆಹಲಿ ಕೊಡ್ತಾ ಇದೆ. ವಾಪಸ್ ಬರ್ತಾ ಇರೋದು 17, 18% ಮಾತ್ರ. ನಡ್ಡಾ ಅವರ ಬ್ಲ್ಯಾಕ್ ಮೇಲ್ ಗೆ ಹೆದರಲ್ಲ ನಾವು ಎಂದರು.
ಗೃಹ ಸಚಿವ ಅಮಿಶ್ ಶಾ ಹೇಳಿದ್ದರು ಶಾಂತಿ ಸುವ್ಯವಸ್ಥೆ ಹಾಳುಮಾಡುತ್ತಿದ್ದಾರೆ ಅಂತ. ಇದು ಕರ್ನಾಟಕದ ಸ್ವಾಭಿಮಾನದ ಚುನಾವಣೆ ಇದು.
ನಮಗೆ ಈ ರೀತಿ ಮಾಡೋಕೆ ಆಗಲ್ಲ. ಮೇಕೆದಾಟು ಪಾದಯಾತ್ರೆ ಮಾಡಿದ್ವಿ. ಬಿಜೆಪಿ ಒಂದು ಸಾವಿರ ಕೋಟಿ ಘೋಷಣೆ ಮಾಡಿದರು ಎಂದರು.
141 ಸೀಟ್ ಗೆಲ್ಲುವುದು ಪಕ್ಕಾ : ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನಗಳನ್ನು ಗೆಲ್ಲುತ್ತದೆ. ನಮ್ಮ ಕಾನ್ಫಿಡೆನ್ಸ್ 141, ನೀವು 113 ಅನ್ನಬಹುದು ಆದರೆ ನಾವು 141 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.15 ನೇ ತಾರಿಕು ಕ್ಯಾಬಿನೆಟ್ ನಲ್ಲಿ ನಾವು ಘೋಷಣೆ ಮಾಡಿರುವ ಗ್ಯಾರಂಟಿಯನ್ನು ಜಾರಿ ಮಾಡುತ್ತೇವೆ. ಯಾರ ನೇತೃತ್ವದ ಕ್ಯಾಬಿನೆಟ್ ಅನ್ನೊದನ್ನು ಮೇ 15 ರಂದು ಮಲ್ಲಿಕಾರ್ಜುನ ಖರ್ಗೆ ತಿಳಿಸುತ್ತಾರೆ ಎಂದರು.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…