BREAKING NEWS

ಕಾಂಗ್ರೆಸ್ ಪಕ್ಷ ಎಂದರೆ ಲೂಟಿಯ ಅಂಗಡಿ : ಪ್ರಧಾನಿ ನರೇಂದ್ರ ಮೋದಿ

ಜೈಪುರ : ಕಾಂಗ್ರೆಸ್ ಪಕ್ಷ ಎಂದರೆ ‘ಲೂಟ್ ಕಿ ದುಕಾನ್’ (ಲೂಟಿಯ ಅಂಗಡಿ) ಮತ್ತು ‘ಝೂತ್ ಕಾ ಬಜಾರ್’ (ಸುಳ್ಳಿನ ಮಾರುಕಟ್ಟೆ) ಎಂದು ವಾಗ್ದಾಳಿ ನಡೆಸಿದರು.

ಈ ಬಾರಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಿಂದ ಕೆಳಗಿಳಿಯುತ್ತದೆ ಎಂಬುದು ಎಂಬುದು ಸ್ಪಷ್ಟವಾಗಿದೆ, ಭ್ರಷ್ಟಾಚಾರ, ಅಪರಾಧ ಮತ್ತು ತುಷ್ಟೀಕರಣದ ರಾಜಕೀಯದ ವಿಚಾರಕ್ಕೆ ಬಂದಾಗ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವು ಹೊಸ ಛಾಪನ್ನು ರೂಪಿಸಿಕೊಂಡಿದೆ ಎಂದು ಪ್ರಧಾನಿ ಆರೋಪಿಸಿದರು.

ಇಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಜಲ ಜೀವನ್ ಮಿಷನ್ ಅನುಷ್ಠಾನದಲ್ಲಿ ರಾಜಸ್ಥಾನ ಅಗ್ರಸ್ಥಾನದಲ್ಲಿರಬೇಕಿತ್ತು. ಆದರೆ, ಇಂದು ಅದು ಹಿಂದುಳಿದ ರಾಜ್ಯಗಳಲ್ಲಿ ಒಂದಾಗಿದೆ. ‘ಮಹಿಳೆಯರ ಮೇಲಿನ ಅಪರಾಧದ ವಿಷಯದಲ್ಲಿ, ಅತ್ಯಾಚಾರ ಪ್ರಕರಣಗಳಲ್ಲಿ ರಾಜಸ್ಥಾನವು ಅಗ್ರಸ್ಥಾನದಲ್ಲಿದೆ. ಇಲ್ಲಿ ರಕ್ಷಕರು ಭಕ್ಷಕರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಇಡೀ ಸರ್ಕಾರವು ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ರಕ್ಷಿಸುವಲ್ಲಿ ನಿರತವಾಗಿದೆ’ ಎಂದು ದೂರಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರಿದರೆ ಅದು ದೇಶವನ್ನು ಟೊಳ್ಳು ಮಾಡುತ್ತದೆ ಮತ್ತು ಅಧಿಕಾರದಿಂದ ಹೊರನಡೆದಾಗ ಅದು ನಿಂದಿಸುವ ಮೂಲಕ ದೇಶಕ್ಕೆ ಹಾನಿಯುಂಟುಮಾಡುತ್ತದೆ. ಅವರ ನಾಯಕರು ವಿದೇಶಕ್ಕೆ ಹೋಗಿ ಭಾರತವನ್ನು ನಿಂದಿಸುತ್ತಾರೆ ಎಂದು ಹೇಳಿದರು.

‘ಕಾಂಗ್ರೆಸ್‌ಗೆ ಒಂದೇ ಒಂದು ಅರ್ಥವಿದೆ. ಅದು ‘ಲೂಟ್ ಕಿ ದುಕಾನ್’ ಮತ್ತು ‘ಝೂತ್ ಕಾ ಬಜಾರ್’ ಎಂದ ಅವರು, ‘ನಫರತ್ ಕಾ ಬಜಾರ್’ನಲ್ಲಿ ‘ಮೊಹಬ್ಬತ್ ಕಿ ದುಕಾನ್’ (ಧ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ) ಅನ್ನು ತೆರೆಯುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಸ್ಪಷ್ಟ ತಿರುಗೇಟು ನೀಡಿದರು.

ರಾಜಸ್ಥಾನ ಸರ್ಕಾರದ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಿದೆ ಮತ್ತು ಹೀಗಿರುವಾಗ ಅಧಿಕಾರದಲ್ಲಿರುವವರನ್ನು ಪದಚ್ಯುತಗೊಳಿಸಲು ಸಮಯ ತೆಗೆದುಕೊಳ್ಳುವುದಿಲ್ಲ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸೋಲು ಎಷ್ಟು ಖಚಿತವಾಗಿದೆ ಎಂದರೆ ಅದರ ಸರ್ಕಾರವು ಈಗಾಗಲೇ ‘ಬೈ-ಬೈ ಮೋಡ್’ ಅನ್ನು ಪ್ರವೇಶಿಸಿದೆ ಎಂದು ಮೋದಿ ಹೇಳಿದರು.

lokesh

Recent Posts

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

33 mins ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

44 mins ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

53 mins ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

1 hour ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

2 hours ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

2 hours ago