BREAKING NEWS

ಕಾಂಗ್ರೆಸ್ ಪಕ್ಷ ಎಂದರೆ ಲೂಟಿಯ ಅಂಗಡಿ : ಪ್ರಧಾನಿ ನರೇಂದ್ರ ಮೋದಿ

ಜೈಪುರ : ಕಾಂಗ್ರೆಸ್ ಪಕ್ಷ ಎಂದರೆ ‘ಲೂಟ್ ಕಿ ದುಕಾನ್’ (ಲೂಟಿಯ ಅಂಗಡಿ) ಮತ್ತು ‘ಝೂತ್ ಕಾ ಬಜಾರ್’ (ಸುಳ್ಳಿನ ಮಾರುಕಟ್ಟೆ) ಎಂದು ವಾಗ್ದಾಳಿ ನಡೆಸಿದರು.

ಈ ಬಾರಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಿಂದ ಕೆಳಗಿಳಿಯುತ್ತದೆ ಎಂಬುದು ಎಂಬುದು ಸ್ಪಷ್ಟವಾಗಿದೆ, ಭ್ರಷ್ಟಾಚಾರ, ಅಪರಾಧ ಮತ್ತು ತುಷ್ಟೀಕರಣದ ರಾಜಕೀಯದ ವಿಚಾರಕ್ಕೆ ಬಂದಾಗ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವು ಹೊಸ ಛಾಪನ್ನು ರೂಪಿಸಿಕೊಂಡಿದೆ ಎಂದು ಪ್ರಧಾನಿ ಆರೋಪಿಸಿದರು.

ಇಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಜಲ ಜೀವನ್ ಮಿಷನ್ ಅನುಷ್ಠಾನದಲ್ಲಿ ರಾಜಸ್ಥಾನ ಅಗ್ರಸ್ಥಾನದಲ್ಲಿರಬೇಕಿತ್ತು. ಆದರೆ, ಇಂದು ಅದು ಹಿಂದುಳಿದ ರಾಜ್ಯಗಳಲ್ಲಿ ಒಂದಾಗಿದೆ. ‘ಮಹಿಳೆಯರ ಮೇಲಿನ ಅಪರಾಧದ ವಿಷಯದಲ್ಲಿ, ಅತ್ಯಾಚಾರ ಪ್ರಕರಣಗಳಲ್ಲಿ ರಾಜಸ್ಥಾನವು ಅಗ್ರಸ್ಥಾನದಲ್ಲಿದೆ. ಇಲ್ಲಿ ರಕ್ಷಕರು ಭಕ್ಷಕರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಇಡೀ ಸರ್ಕಾರವು ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ರಕ್ಷಿಸುವಲ್ಲಿ ನಿರತವಾಗಿದೆ’ ಎಂದು ದೂರಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರಿದರೆ ಅದು ದೇಶವನ್ನು ಟೊಳ್ಳು ಮಾಡುತ್ತದೆ ಮತ್ತು ಅಧಿಕಾರದಿಂದ ಹೊರನಡೆದಾಗ ಅದು ನಿಂದಿಸುವ ಮೂಲಕ ದೇಶಕ್ಕೆ ಹಾನಿಯುಂಟುಮಾಡುತ್ತದೆ. ಅವರ ನಾಯಕರು ವಿದೇಶಕ್ಕೆ ಹೋಗಿ ಭಾರತವನ್ನು ನಿಂದಿಸುತ್ತಾರೆ ಎಂದು ಹೇಳಿದರು.

‘ಕಾಂಗ್ರೆಸ್‌ಗೆ ಒಂದೇ ಒಂದು ಅರ್ಥವಿದೆ. ಅದು ‘ಲೂಟ್ ಕಿ ದುಕಾನ್’ ಮತ್ತು ‘ಝೂತ್ ಕಾ ಬಜಾರ್’ ಎಂದ ಅವರು, ‘ನಫರತ್ ಕಾ ಬಜಾರ್’ನಲ್ಲಿ ‘ಮೊಹಬ್ಬತ್ ಕಿ ದುಕಾನ್’ (ಧ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ) ಅನ್ನು ತೆರೆಯುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಸ್ಪಷ್ಟ ತಿರುಗೇಟು ನೀಡಿದರು.

ರಾಜಸ್ಥಾನ ಸರ್ಕಾರದ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಿದೆ ಮತ್ತು ಹೀಗಿರುವಾಗ ಅಧಿಕಾರದಲ್ಲಿರುವವರನ್ನು ಪದಚ್ಯುತಗೊಳಿಸಲು ಸಮಯ ತೆಗೆದುಕೊಳ್ಳುವುದಿಲ್ಲ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸೋಲು ಎಷ್ಟು ಖಚಿತವಾಗಿದೆ ಎಂದರೆ ಅದರ ಸರ್ಕಾರವು ಈಗಾಗಲೇ ‘ಬೈ-ಬೈ ಮೋಡ್’ ಅನ್ನು ಪ್ರವೇಶಿಸಿದೆ ಎಂದು ಮೋದಿ ಹೇಳಿದರು.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

3 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

3 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

3 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

3 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

3 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

4 hours ago