ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಆಗುವ ಮೊದಲೇ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ನಗರದಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದೆ ಇದ್ದರೆ ಗ್ಯಾರಂಟಿಗಳು ರದ್ದು ಕುರಿತ ಮಾಗಡಿಯ ಕಾಂಗ್ರೆಸ್ ಶಾಸಕರ ಹೇಳಿಕೆಯನ್ನು ಗಮನಿಸಿದ್ದೇನೆ ಎಂದರು.
ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದರು. ವಾಸ್ತವ ಸ್ಥಿತಿ ಅವರಿಗೆ ಈಗ ಅರ್ಥ ಆಗಿದೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಒಗ್ಗೂಡಿ 28ರಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರಲ್ಲೂ ತಮ್ಮ ಹೇಳಿಕೆ ಕುರಿತು ಅನುಮಾನ ಶುರುವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಡ ಚುನಾವಣಾ ಫಲಿತಾಂಶ ಹಾಗೂ ಬಿಜೆಪಿ ಗೆಲುವು, ಮತ್ತೊಂದು ಕಡೆ ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಆದ ನಂತರ ಇಡೀ ದೇಶದಲ್ಲಿ, ಕರ್ನಾಟಕ ರಾಜ್ಯದಲ್ಲೂ ಸಹ ನಿರ್ಮಾಣವಾದ ವಾತಾವರಣದಿಂದ ಕಾಂಗ್ರೆಸ್ಸಿಗರು ಭಯಭೀತರಾಗಿದ್ದಾರೆ ಎಂದರು.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…