BREAKING NEWS

ಕಾಂಗ್ರೆಸ್‌ ಪಕ್ಷದ ಮುಖಂಡರು ಸೋಲನ್ನು ಒಪ್ಪಿಕೊಂಡಿದ್ದಾರೆ : ಬಿ.ವೈ.ವಿಜಯೇಂದ್ರ !

 ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಆಗುವ ಮೊದಲೇ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ನಗರದಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದೆ ಇದ್ದರೆ ಗ್ಯಾರಂಟಿಗಳು ರದ್ದು ಕುರಿತ ಮಾಗಡಿಯ ಕಾಂಗ್ರೆಸ್ ಶಾಸಕರ ಹೇಳಿಕೆಯನ್ನು ಗಮನಿಸಿದ್ದೇನೆ ಎಂದರು.

ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದರು. ವಾಸ್ತವ ಸ್ಥಿತಿ ಅವರಿಗೆ ಈಗ ಅರ್ಥ ಆಗಿದೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಒಗ್ಗೂಡಿ 28ರಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರಲ್ಲೂ ತಮ್ಮ ಹೇಳಿಕೆ ಕುರಿತು ಅನುಮಾನ ಶುರುವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಡ ಚುನಾವಣಾ ಫಲಿತಾಂಶ ಹಾಗೂ ಬಿಜೆಪಿ ಗೆಲುವು, ಮತ್ತೊಂದು ಕಡೆ ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಆದ ನಂತರ ಇಡೀ ದೇಶದಲ್ಲಿ, ಕರ್ನಾಟಕ ರಾಜ್ಯದಲ್ಲೂ ಸಹ ನಿರ್ಮಾಣವಾದ ವಾತಾವರಣದಿಂದ ಕಾಂಗ್ರೆಸ್ಸಿಗರು ಭಯಭೀತರಾಗಿದ್ದಾರೆ ಎಂದರು.

andolanait

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

8 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

10 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

13 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

17 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

21 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

21 hours ago