BREAKING NEWS

ಕಾಂಗ್ರೆಸ್‌ ರಿವರ್ಸ್‌ ಎಂಜಿನ್‌ ಪಕ್ಷ : ಅಣ್ಣಾಮಲೈ

ತೀರ್ಥಹಳ್ಳಿ : ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರ ಮಾಡಿದ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ರದ್ದು ಪಡಿಸಲಾಗುವುದು ಎಂದು ಹೇಳುವ ಮೂಲಕ ಕಾಂಗ್ರೆಸ್‌ ರಿವರ್ಸ್‌ ಎಂಜಿನ್‌ ಪಕ್ಷ ಎಂಬುದನ್ನು ಸ್ವತಃ ಆ ಪಕ್ಷದವರೇ ಘೋಷಿಸಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಸಹ ಉಸ್ತುವಾರಿ ಅಣ್ಣಾಮಲೈ ಟೀಕಿಸಿದರು.

ಬಾಳೇಬೈಲಿನಲ್ಲಿ ನಡೆದ ಬಿಜೆಪಿ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿ,ಆರಗ ಜ್ಞಾನೇಂದ್ರ ಸೈದ್ಧಾಂತಿಕ ಬದ್ಧತೆ ಹೊಂದಿದ್ದು ವೈಯಕ್ತಿಕ ಛಾಪು ಹೊಂದಿದ್ದಾರೆ. ಕನಿಷ್ಠ 40 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನಮಗಿದೆ. ಬಿಜೆಪಿ ಸಾಮಾಜಿಕ ನ್ಯಾಯ ನೀಡುವ ಜೊತೆಗೆ ದೇಶದ ಅಭಿವೃದ್ದಿಗೆ ವೇಗ ನೀಡಿದೆ ಎಂದು ಅವರು ಹೇಳಿದರು.

‘ಬಿಜೆಪಿ 10ನೇ ಬಾರಿ ಸ್ಪರ್ಧೆಗೆ ಅವಕಾಶ ಕೊಟ್ಟಿದೆ. ಸ್ಪರ್ಧೆಗೆ ಅವಕಾಶ ಸಿಕ್ಕಿಲ್ಲವೆಂದಿದ್ದರೂ ಬೇಸರ ಇರಲಿಲ್ಲ. ವಿಧಾನಸಭೆ ಚುನಾವನೆಯಲ್ಲಿ ಒಂದೇ ಪಕ್ಷ ಒಂದೇ ಚಿಹ್ನೆಯಡಿ ಸ್ಪರ್ಧಿಸುತ್ತಿದ್ದೇನೆ. ಕ್ಷೇತ್ರದಲ್ಲಿ ಸೈದ್ಧಾಂತಿಕ ರಾಜಕಾರಣ ಮಾಡಿದ ವಿಶ್ವಾಸ ನನಗಿದೆ’ ಎಂದು ಗೃಹಸಚಿವ, ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹೇಳಿದರು.

ಕ್ಷೇತ್ರದಲ್ಲಿ ನನನ್ನು ಸೋಲಿಸಲು ಇಬ್ಬರು ಒಟ್ಟಾಗಿದ್ದಾರೆ. ಆದರೆ ಜನರೇ ಅವರನ್ನು ಸೋಲಿಸುತ್ತಾರೆ. ಎದುರಾಳಿ ಯಾವೆಲ್ಲಾ ಪಕ್ಷ ಸುತ್ತಾಡಿದ್ದಾರೆ ಎಂದು ನನಗೆ ತಿಳಿದಿದೆ ಎಂದು
ಕುಟುಕಿದರು.

ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸ ಮೆಚ್ಚಿ ಜನರು ಈ ಬಾರಿ ಬೆಂಬಲಿಸುತ್ತಾರೆ. ಕ್ಷೇತ್ರದ ಅಭಿವೃದ್ಧಿಗೆ 3254 ಕೋಟಿ ಮಂಜೂರಾಗಿದೆ. ಮಾಜಿ ಶಾಸಕರ ಅವಧಿಯಲ್ಲಿ ಕ್ಷೇತ್ರದ ತುಂಬ ಕಳಪೆ ಕಾಮಗಾರಿ ನಡೆದಿತ್ತು. ನನ್ನ ಅವಧಿಯಲ್ಲಿ ಎಲ್ಲಿಯೂ ಕಳಪೆ ಕಾಮಗಾರಿ ನಡೆದಿಲ್ಲ. ಅಂತಹ ಕಳಪೆ ಕಾಮಗಾರಿ ನಡೆದಿದ್ದರೆ ಕಿಮ್ಮನೆ ರತ್ನಾಕರ ಬಹಿರಂಗ ಪಡಿಸಲಿ ಎಂದು ಸವಾಲೆಸೆದರು.

ಸುದೀರ್ಘ ರಾಜಕಾರಣದಲ್ಲಿ ಆರಗ ಜ್ಞಾನೇಂದ್ರ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆ ಅಂಟಿಸಿಕೊಂಡಿಲ್ಲ. ಅಧಿಕಾರದಲ್ಲಿ ಜನರಿಗಾಗಿ ಹಗಲಿರುಳು ಕೆಲಸ ಮಾಡಿದ್ದಾರೆ. ಸಭೆಯಲ್ಲಿ ಸೇರಿದ ಜನರ ಉತ್ಸಾಹ ಕಂಡರೆ ಈ ಸಮಾವೇಶ ಆರಗ ಜ್ಞಾನೇಂದ್ರರ ವಿಜಯೋತ್ಸವದಂತೆ ಕಾಣಿಸುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸಂತೋಷ ವ್ಯಕ್ತಪಡಿಸಿದರು.

ಮಾಜಿ ಶಾಸಕ ಬಿ. ಸ್ವಾಮಿರಾವ್‌, ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೋಡ್ಗಿ ಮಾತನಾಡಿದರು. ವೇದಿಕೆಯಲ್ಲಿ ವಿಧಾನ ಪರಿಷತ್‌ ಸದಸ್ಯೆ ಭಾರತಿಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್‌ರು ಇದ್ದರು. ತಾಲ್ಲೂಕು ಅಧ್ಯಕ್ಷ ಬಾಳೇಬೈಲು ರಾಘವೇಂದ್ರ ಪ್ರಾಸ್ತಾವಿಕವಾಗಿ
ಮಾತನಾಡಿದರು.

lokesh

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

22 mins ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

37 mins ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

44 mins ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

47 mins ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

54 mins ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

1 hour ago