BREAKING NEWS

ಕಾಂಗ್ರೆಸ್‌ ಎರಡನೇ ಪಟ್ಟಿ ಮಂಗಳವಾರ ಇತ್ಯರ್ಥವಾಗಲಿದೆ : ಸಿದ್ದರಾಮಯ್ಯ

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಲು ಬಿಜೆಪಿ, ಜೆಡಿಎಸ್‌ ರಣತಂತ್ರ ರೂಪಿಸುತ್ತಿವೆ. ಈ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ. ವರುಣಾದಲ್ಲಿ ಯಾರೇ ಎದುರಾಳಿ ನಿಂತರೂ ನನಗೆ ತೊಂದರೆ ಇಲ್ಲ. ಯಾರು ಯಾರನ್ನು ಕಟ್ಟಿಹಾಕಲು ಸಾಧ್ಯವಿಲ್ಲ ಎಂದಿದ್ದಾರೆ.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಯಾರನ್ನೂ ಯಾವ ಕ್ಷೇತ್ರದಲ್ಲೂ ಯಾರು ಕಟ್ಟಿ ಹಾಕಲು ಆಗಲ್ಲ. ಕಟ್ಟಿ ಹಾಕೋದು ಮತ್ತೊಂದು ನಾಯಕರ ಕೈಯಲ್ಲಿ ಇಲ್ಲ. ಮತದಾರ ಮಾತ್ರ ಆ ಕೆಲಸ ಮಾಡಬಹುದು ಅಷ್ಟೇ. ಸೋಲಿಸುವುದು, ಗೆಲ್ಲಿಸುವುದು ಜನರ ಕೈಯಲ್ಲಿದೆ. ನಾನು ವರುಣಾಕ್ಕೆ ಈಗಲೂ ಪ್ರಚಾರಕ್ಕೆ ಹೋಗುವುದಿಲ್ಲ. ನಾಮಪತ್ರ ಸಲ್ಲಿಕೆಗೆ ಮಾತ್ರ ಹೋಗುತ್ತೇನೆ. ನನ್ನ ಮಗ ಯತೀಂದ್ರ ಶಾಸಕ ಇದ್ದಾರೆ, ಎಲ್ಲವನ್ನೂ ಅವರೇ ನೋಡಿಕೊಳ್ತಾರೆ ಎಂದು ಹೇಳಿದರು.
ಕಾಂಗ್ರೆಸ್‌ ಎರಡನೇ ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿ, ಚಾಮರಾಜ, ಚಾಮುಂಡೇಶ್ವರಿ ಟಿಕೆಟ್ ಮಂಗಳವಾರ ಇತ್ಯರ್ಥವಾಗಲಿದೆ. ಮಂಗಳವಾರದ ಸಭೆ ಬಳಿಕ ಎರಡನೇ ಪಟ್ಟಿ ಬಿಡುಗಡೆ ಆಗಲಿದೆ. ನಾನು ಕೋಲಾರಕ್ಕೆ‌ ಹೋಗುವುದು, ಬಿಡುವುದು ಹೈಕಮಾಂಡ್ ತೀರ್ಮಾನವಾಗಿದೆ ಎಂದು ತಮ್ಮ ಎರಡನೇ ಕ್ಷೇತ್ರದ ಸ್ಪರ್ಧೆ ಬಗ್ಗೆ ಗೋಡೆ ಮೇಲೆ ದೀಪವಿಟ್ಟಂತೆ ಉತ್ತರ ನೀಡಿದರು.
ಮೀಸಲಾತಿ ವಿಚಾರ ಕೋರ್ಟ್‌ನಲ್ಲಿ ನಿಲ್ಲಲ್ಲ! : ಮೀಸಲಾತಿ ಪರಿಷ್ಕರಣೆಯಿಂದ ಬಿಜೆಪಿಗೆ ಅನುಕೂಲ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಮೀಸಲಾತಿ ಯಾವುದೇ ಪೂರ್ವತಯಾರಿ ಇಲ್ಲದೆ ಚುನಾವಣೆಗಾಗಿ ತಂದಿರುವ ವಿಷಯ. ಶೇ.50ಕ್ಕಿಂತ ಹೆಚ್ಚಿರಬಾರದು ಎಂಬ ನಿಮಯ ಮೀರಿ ಶೇ.6ರಷ್ಟು‌ ಮೀಸಲಾತಿ ಹೆಚ್ಚಳವಿದೆ. ಇದಕ್ಕೆ ಸಂವಿಧಾನದ ತಿದ್ದುಪಡಿ ಆಗಬೇಕಿತ್ತು. ಸದನದಲ್ಲಿ ಇದರ‌ ಬಗ್ಗೆ ಚರ್ಚೆ ನಡೆಯಬೇಕಿತ್ತು. ಇದ್ಯಾವುದನ್ನೂ ಇವರು ಮಾಡಿಯೇ ಇಲ್ಲ. ಈ ಕಾರಣದಿಂದ ಇದು ಕೋರ್ಟ್‌ನಲ್ಲಿ ನಿಲ್ಲುವುದಿಲ್ಲ ಎಂದರು.

lokesh

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

2 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

2 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

2 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

2 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

3 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

3 hours ago