BREAKING NEWS

ಮೋದಿ, ಅಮಿತ್ ಶಾ ಕುರಿತಾದ ವಿಡಿಯೋ ಹಂಚಿಕೊಂಡ ಕಾಂಗ್ರೆಸ್: ರಾಹುಲ್ ಗಾಂಧಿ ಬಗ್ಗೆ ಹೇಳಿದ್ದೇನು?

ಬೆಂಗಳೂರು: 2024 ರ ಸಾರ್ವತ್ರಿಕ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಪ್ರಾರಂಭಿಸಿವೆ. ಮಂಗಳವಾರ ಅನಿಮೇಟೆಡ್ ವಿಡಿಯೋವನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿ ವಿಭಜನೆಯ ತಂತ್ರಗಳನ್ನು ಹೂಡುತ್ತಿದೆ ಮತ್ತು ರಾಹುಲ್ ಗಾಂಧಿ ‘ನಫ್ರತ್ ಕಾ ಬಜಾರ್’ ಅನ್ನು ತೊಡೆದುಹಾಕಿ ಅದನ್ನು ‘ಮೊಹಬ್ಬತ್ ಕಿ ದುಕಾನ್’ ನೊಂದಿಗೆ ಬದಲಾಯಿಸುತ್ತಿದ್ದಾರೆ ಎಂಬ ಸಂದೇಶ ಸಾರಿದೆ.

ಬಿಜೆಪಿಯು ಒಂದು ಚಿಕ್ಕ ಆನಿಮೇಟೆಡ್ ವಿಡಿಯೋವನ್ನು ಬಿಡುಗಡೆ ಮಾಡಿದ ತಿಂಗಳ ನಂತರ ಬಂದಿರುವ ಕಾಂಗ್ರೆಸ್‌ನ ವಿಡಿಯೋ, ತನ್ನ ಭಾರತ್ ಜೋಡೋ ಯಾತ್ರೆಯ ಮೂಲಕ ರಾಹುಲ್ ಗಾಂಧಿಯವರು ದೇಶವನ್ನು ಒಂದುಗೂಡಿಸುವ ಅಂಶವೆಂದು ಬಿಂಬಿಸುತ್ತದೆ.

ಕರ್ನಾಟಕ ಕಾಂಗ್ರೆಸ್ ಈ ಕುರಿತಾದ ವಿಡಿಯೋವನ್ನು ಹಂಚಿಕೊಂಡಿದ್ದು, ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನಗಳ ಮೌಲ್ಯಗಳನ್ನು ನಾಶ ಮಾಡಿ, ದ್ವೇಷವನ್ನು ಬಿತ್ತಿ, ಸರ್ವಾಧಿಕಾರವನ್ನು ಸ್ಥಾಪಿಸಲು ಹೊರಟಿರುವ ಬಿಜೆಪಿಯ ಪ್ರಯತ್ನಗಳನ್ನು ಪ್ರೀತಿ, ಸಹಬಾಳ್ವೆಯ ಸಂದೇಶಗಳ ಮೂಲಕ ರಾಹುಲ್ ಗಾಂಧಿ ಅವರು ಸೋಲಿಸಲಿದ್ದಾರೆ. ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ ಎಂದು ಬರೆದಿದೆ.

1:43 ನಿಮಿಷಗಳ ವೀಡಿಯೊದಲ್ಲಿ, ಪ್ರಧಾನಿ ಮೋದಿಯವರ ಅನಿಮೇಟೆಡ್ ಪಾತ್ರವು ವಾಹನದ ಮೇಲೆ ಪ್ರಜಾಪ್ರಭುತ್ವ, ಮಾಧ್ಯಮ ಮತ್ತು ಅಧಿಕಾರವನ್ನು ಹಿಡಿತದಲ್ಲಿಟ್ಟುಕೊಂಡು ರಥವನ್ನು ಓಡಿಸುತ್ತಿದೆ. ಗೃಹ ಸಚಿವ ಅಮಿತ್ ಶಾ ಅವರು ಹಿಂದೂ ಮತ್ತು ಮುಸ್ಲಿಂ ವ್ಯಕ್ತಿಗಳ ನಡುವೆ ಬಿರುಕು ಉಂಟುಮಾಡುವ ಮತ್ತು ರಾಹುಲ್ ಗಾಂಧಿ ಪ್ರವೇಶಿಸಿ ಎರಡು ಸಮುದಾಯಗಳ ವ್ಯಕ್ತಿಗಳನ್ನು ಒಗ್ಗೂಡಿಸುವ ಅನಿಮೇಟೆಡ್ ಪಾತ್ರವನ್ನು ವಿಡಿಯೋ ತೋರಿಸುತ್ತದೆ.

ಭಾರತ್ ಜೋಡೋ ಯಾತ್ರೆಯ ಮೂಲಕ ಜನರನ್ನು ಒಗ್ಗೂಡಿಸುತ್ತಾ ರಾಹುಲ್ ಗಾಂಧಿ ನಡೆದುಕೊಂಡು ಹೋಗುವ, ಎಲ್ಲಾ ವರ್ಗದ ಜನರೊಂದಿಗೆ ಬೆರೆಯುವ ಚಿತ್ರಣಗಳನ್ನು ಕಟ್ಟಿಕೊಡಲಾಗಿದೆ. ರಾಹುಲ್ ಗಾಂಧಿ ಟ್ರಕ್‌ನಲ್ಲಿ ಪ್ರಯಾಣಿಸುತ್ತಿರುವುದನ್ನು ತೋರಿಸುತ್ತದೆ ಮತ್ತು ಅವರು ‘ನಫ್ರತ್ ಕಾ ಬಜಾರ್’ ಬೋರ್ಡ್ ಅನ್ನು ಹಾದುಹೋಗುವಾಗ, ಅದು ಕೆಳಗೆ ಬೀಳುತ್ತದೆ ಮತ್ತು ‘ಮೊಹಾಬತ್ ಕಿ ದುಕಾನ್’ ಹಿನ್ನೆಲೆಯಲ್ಲಿರುತ್ತದೆ.

andolanait

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago