ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿರುದ್ಧ ಸೆಣಸಲು ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ಸೋಮವಾರ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಆಮ್ ಆದ್ಮಿ ಪಾರ್ಟಿ ಭಾನುವಾರ ಘೋಷಿಸಿದೆ.
ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು ಬೆಂಬಲಿಸಲು ಕಾಂಗ್ರೆಸ್ ಒಪ್ಪಿದ ಬೆನ್ನಲ್ಲೇ ಈ ನಿರ್ಧಾರ ಪ್ರಕಟಿಸಲಾಗಿದೆ. ಇದಕ್ಕೂ ಮುನ್ನ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರವನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದರು.
ಎಎಪಿಯ ರಾಜಕೀಯ ಕ್ರಿಯಾ ಸಮಿತಿ ಸಭೆ ಇಂದು ನಡೆಯಿತು. ಪ್ರತಿಯೊಂದು ಅಂಶವನ್ನು ವಿವರವಾಗಿ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯು ಸ್ಪಷ್ಟವಾಗಿ ರಾಷ್ಟ್ರವಿರೋಧಿಯಾಗಿದೆ ಎಂದು ಎಎಪಿ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ನಿಂದ ತೊಡಗಿ ಆರ್ಜೆಡಿ, ಜೆಡಿಯು, ಎನ್ಸಿಪಿ, ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ ಶಿವಸೇನೆ ಎಲ್ಲರೂ ಈ ದೇಶವಿರೋಧಿ ಸುಗ್ರೀವಾಜ್ಞೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಇದನ್ನು ಸೋಲಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ರಾಘವ್ ಹೇಳಿದ್ದಾರೆ.
ಜೂನ್ 23 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷಗಳ ಸಮಾವೇಶದ ನಂತರ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರ ಮತ್ತು ಎಎಪಿಯನ್ನು ಬೆಂಬಲಿಸದ ಪ್ರತಿಪಕ್ಷಗಳ ವಿರುದ್ಧ ಕೇಜ್ರಿವಾಲ್ ಪಕ್ಷ ಆಕ್ರೋಶ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್ ಹೊರತುಪಡಿಸಿ ಎಲ್ಲಾ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸುಗ್ರೀವಾಜ್ಞೆ ವಿರುದ್ಧ ಹೋರಾಟಕ್ಕೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡಿದ್ದವು. ಇದೀಗ ಕಾಂಗ್ರೆಸ್ ಸಹ ಅದೇ ಹಾದಿ ಹಿಡಿದಿದ್ದು, ಎಎಪಿ ಕೂಡ ಪ್ರತಿಪಕ್ಷಗಳ ಒಕ್ಕೂಟ ಸೇರಲು ಕಾರಣವಾಗಿದೆ.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…