ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿರುದ್ಧ ಸೆಣಸಲು ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ಸೋಮವಾರ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಆಮ್ ಆದ್ಮಿ ಪಾರ್ಟಿ ಭಾನುವಾರ ಘೋಷಿಸಿದೆ.
ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು ಬೆಂಬಲಿಸಲು ಕಾಂಗ್ರೆಸ್ ಒಪ್ಪಿದ ಬೆನ್ನಲ್ಲೇ ಈ ನಿರ್ಧಾರ ಪ್ರಕಟಿಸಲಾಗಿದೆ. ಇದಕ್ಕೂ ಮುನ್ನ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರವನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದರು.
ಎಎಪಿಯ ರಾಜಕೀಯ ಕ್ರಿಯಾ ಸಮಿತಿ ಸಭೆ ಇಂದು ನಡೆಯಿತು. ಪ್ರತಿಯೊಂದು ಅಂಶವನ್ನು ವಿವರವಾಗಿ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯು ಸ್ಪಷ್ಟವಾಗಿ ರಾಷ್ಟ್ರವಿರೋಧಿಯಾಗಿದೆ ಎಂದು ಎಎಪಿ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ನಿಂದ ತೊಡಗಿ ಆರ್ಜೆಡಿ, ಜೆಡಿಯು, ಎನ್ಸಿಪಿ, ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ ಶಿವಸೇನೆ ಎಲ್ಲರೂ ಈ ದೇಶವಿರೋಧಿ ಸುಗ್ರೀವಾಜ್ಞೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಇದನ್ನು ಸೋಲಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ರಾಘವ್ ಹೇಳಿದ್ದಾರೆ.
ಜೂನ್ 23 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷಗಳ ಸಮಾವೇಶದ ನಂತರ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರ ಮತ್ತು ಎಎಪಿಯನ್ನು ಬೆಂಬಲಿಸದ ಪ್ರತಿಪಕ್ಷಗಳ ವಿರುದ್ಧ ಕೇಜ್ರಿವಾಲ್ ಪಕ್ಷ ಆಕ್ರೋಶ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್ ಹೊರತುಪಡಿಸಿ ಎಲ್ಲಾ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸುಗ್ರೀವಾಜ್ಞೆ ವಿರುದ್ಧ ಹೋರಾಟಕ್ಕೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡಿದ್ದವು. ಇದೀಗ ಕಾಂಗ್ರೆಸ್ ಸಹ ಅದೇ ಹಾದಿ ಹಿಡಿದಿದ್ದು, ಎಎಪಿ ಕೂಡ ಪ್ರತಿಪಕ್ಷಗಳ ಒಕ್ಕೂಟ ಸೇರಲು ಕಾರಣವಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…