BREAKING NEWS

ಎಎಪಿಯ ಸುಗ್ರೀವಾಜ್ಞೆ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ: ಪ್ರತಿಪಕ್ಷಗಳ ಸಭೆಗೆ ಬರಲು ಆಪ್ ಸಮ್ಮತಿ

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿರುದ್ಧ ಸೆಣಸಲು ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ಸೋಮವಾರ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಆಮ್ ಆದ್ಮಿ ಪಾರ್ಟಿ ಭಾನುವಾರ ಘೋಷಿಸಿದೆ.

ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು ಬೆಂಬಲಿಸಲು ಕಾಂಗ್ರೆಸ್ ಒಪ್ಪಿದ ಬೆನ್ನಲ್ಲೇ ಈ ನಿರ್ಧಾರ ಪ್ರಕಟಿಸಲಾಗಿದೆ. ಇದಕ್ಕೂ ಮುನ್ನ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರವನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದರು.

ಎಎಪಿಯ ರಾಜಕೀಯ ಕ್ರಿಯಾ ಸಮಿತಿ ಸಭೆ ಇಂದು ನಡೆಯಿತು. ಪ್ರತಿಯೊಂದು ಅಂಶವನ್ನು ವಿವರವಾಗಿ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯು ಸ್ಪಷ್ಟವಾಗಿ ರಾಷ್ಟ್ರವಿರೋಧಿಯಾಗಿದೆ ಎಂದು ಎಎಪಿ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್‌ನಿಂದ ತೊಡಗಿ ಆರ್‌ಜೆಡಿ, ಜೆಡಿಯು, ಎನ್‌ಸಿಪಿ, ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ ಶಿವಸೇನೆ ಎಲ್ಲರೂ ಈ ದೇಶವಿರೋಧಿ ಸುಗ್ರೀವಾಜ್ಞೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಇದನ್ನು ಸೋಲಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ರಾಘವ್ ಹೇಳಿದ್ದಾರೆ.

ಜೂನ್ 23 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷಗಳ ಸಮಾವೇಶದ ನಂತರ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರ ಮತ್ತು ಎಎಪಿಯನ್ನು ಬೆಂಬಲಿಸದ ಪ್ರತಿಪಕ್ಷಗಳ ವಿರುದ್ಧ ಕೇಜ್ರಿವಾಲ್ ಪಕ್ಷ ಆಕ್ರೋಶ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್ ಹೊರತುಪಡಿಸಿ ಎಲ್ಲಾ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸುಗ್ರೀವಾಜ್ಞೆ ವಿರುದ್ಧ ಹೋರಾಟಕ್ಕೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡಿದ್ದವು. ಇದೀಗ ಕಾಂಗ್ರೆಸ್ ಸಹ ಅದೇ ಹಾದಿ ಹಿಡಿದಿದ್ದು, ಎಎಪಿ ಕೂಡ ಪ್ರತಿಪಕ್ಷಗಳ ಒಕ್ಕೂಟ ಸೇರಲು ಕಾರಣವಾಗಿದೆ.

andolanait

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

2 mins ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

11 mins ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

17 mins ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

8 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

8 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

8 hours ago