BREAKING NEWS

ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟ ಆಗಲಿದೆ : ಆರ್‌ ಅಶೋಕ್‌ ಆಕ್ರೋಶ

ರಾಮನಗರ : ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಆರೋಪಿಸಿರುವ ಸಚಿವ ಆರ್. ಅಶೋಕ, ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿಯಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ. ಇದು ಇಡೀ ಕಾಂಗ್ರೆಸನ್ನೇ ಸುಟ್ಟು ಸರ್ವನಾಶ ಮಾಡುತ್ತದೆ ಎಂದು ಹೇಳಿದ್ದಾರೆ.

ಕನಕಪುರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪ್ರನಾಳಿಕೆಯಲ್ಲಿ ಬಜರಂಗದಳ ಬ್ಯಾನ್ ವಿಚಾರವನ್ನು ಖಂಡಿಸಿದರು. ಬಜರಂಗದಳ ಬ್ಯಾನ್ ವಿಚಾರದಿಂದ ಕಾಂಗ್ರೆಸ್ ಇನ್ನಷ್ಟು ಸ್ಥಾನ ಕಳೆದುಕೊಳ್ತಾರೆ. ಹಿಂದೂ ರಕ್ಷಣೆ ಮಾಡುವವವರು ಬಜರಂಗದಳದವರು. ದೇಶ, ದೇವಸ್ಥಾನಗಳನ್ನು ರಕ್ಷಣೆ ಮಾಡೋದು ಬಜರಂಗದಳ. ಕಾಂಗ್ರೆಸ್ ಅವರು ಬಜರಂಗದಳವನ್ನು ಪಿಎಫ್ಐಗೆ ಹೋಲಿಸುವುದನ್ನು ನಾನು ಖಂಡಿಸುತ್ತೇನೆ ಎಂದರು.

ಸಿದ್ದರಾಮಯ್ಯ ಅವರು ಮೊದಲಿನಿಂದಲೂ ಕುಂಕುಮವನ್ನು ವಿರೋಧ ಮಾಡ್ತಾರೆ. ಟಿಪ್ಪು ಸುಲ್ತಾನ್ ಅವರನ್ನು ಹೊಗಳುತ್ತಾರೆ. ಹಿಂದೂ ವಿರೋಧಿ ಭಾವನೆಯನ್ನು ಕಾಂಗ್ರೆಸ್ ತೋರಿಸಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಎಲ್ಲ ಕಡೆ ಪ್ರತಿಭಟನೆ ನಡೆಯುತ್ತಿದೆ. ಇದೇ ಕಾರಣಕ್ಕೆ ಎಲ್ಲಾ ಕಡೆ ಹನುಮಾನ್ ಚಾಲಿಸಾ ಪಠಣೆ ಮಾಡಲಾಗುತ್ತದೆ. ಕಾಂಗ್ರೇಸ್ ದೇಶದಲ್ಲಿ ಸರ್ವನಾಶವಾಗುತ್ತದೆ. ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ‌. ಚುನಾವಣೆ ಸಂದರ್ಭದಲ್ಲಿ ಇದೆಲ್ಲವೂ ಕಾಂಗ್ರೆಸ್ ಗೆ ವ್ಯತಿರಿಕ್ತವಾಗುತ್ತದೆ‌. ಇದೆಲ್ಲವನ್ನೂ ನೋಡಿದ್ರೆ ಹಿಂದೂ ವಿರೋಧಿ ಕಾಂಗ್ರೆಸ್ ಅನ್ನುವುದು ಗೊತ್ತಾಗುತ್ತದೆ ಎಂದರು.

ನಾನೂ ಬಜರಂಗದಳ, ಬನ್ನಿ ನಮ್ಮ ಮನೆ ಹತ್ತಿರ : ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಸಚಿವ ಆರ್.ಅಶೋಕ್ ಅವರು “ನಾನು ಕೂಡ ಬಜರಂಗದಳ. ನೋಡೊಣ ಬನ್ನಿ ನಮ್ಮ ಮನೆ ಹತ್ತಿರ. ಬಂದು ಏನು ಮಾಡ್ತೀರಿ ನೋಡೊಣ” ಎಂದು ಬಹಿರಂಗ ಸವಾಲ್ ಹಾಕಿದರು. ಎಲ್ಲರೂ ಕೂಡ ಆರ್.ಎಸ್.ಎಸ್ ಬಜರಂಗದಳದಿಂದಲೇ ಬಂದಿರೋದು. ನಿಮಗೆ ತಾಕತ್ತು, ಧಮ್ ಇದೆಯಾ ಬ್ಯಾನ್ ಮಾಡೋಕೆ? ಪಾಕಿಸ್ತಾನಕ್ಕೆ ಜೈ ಅನ್ನೋ ಸಂಸ್ಕಾರ ನಮ್ಮದಲ್ಲ. ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ. ಇದು ಇಡೀ ಕಾಂಗ್ರೆಸನ್ನೇ ಸುಟ್ಟು ಸರ್ವನಾಶ ಮಾಡುತ್ತೆ‌ ಎಂದರು.‌

ಕನಕಪುರದಲ್ಲಿ‌ಮುನೇಶ್ವರ ಬೆಟ್ಟವನ್ನು ಯೇಸು ಶಿಲುಬೆ ಮಾಡೋಕೆ ಹೊರಟಿದ್ರಿ. ಇದೀಗ ಆಂಜನೇಯನ ಸುದ್ದಿಗೆ ಬಂದಿದ್ದೀರಿ. ಮುಂದಿನ ದಿನಗಳಲ್ಲಿ ಮಹಿಳೆಯರು ಕುಂಕುಮ ಇಡೋದಕ್ಕೂ ಬಿಡೊಲ್ಲ. ಈಗಾಗಲೇ ಇದಕ್ಕೆಲ್ಲಾ ಸಿದ್ದರಾಮಯ್ಯ ಅವರು ವಿರೋಧ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಲ್ಲಿಕಾರ್ಜುನ ಖರ್ಗೆ ಮೋದಿ ಅವರನ್ನು ವಿಷದ ಹಾವು ಎಂದಿದ್ದಾರೆ. ಒಬ್ಬ ಪ್ರಧಾನಿ ಬಗ್ಗೆ ಮಾತನಾಡಬೇಕಾದರೆ ಯೋಚನೆ ಮಾಡಬೇಕು. ಇಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಬಾರದು‌. ವಿಷವನ್ನು ನೆಕ್ಕಿದ್ದೇನೆ ಎಂದು ಖರ್ಗೆ ಹೇಳಿದ್ದಾರೆ‌. ಯಾರಾದರೂ ಕೂಡ ವಿಷವನ್ನು ನೆಕ್ಕುತ್ತಾರಾ ಹೇಳಿ? ಈ ಎಲ್ಲಾ ಕಾಂಗ್ರೇಸ್ ನಾಯಕರ ಹೇಳಿಕೆಯಿಂದ ಕಾಂಗ್ರೆಸ್ ಅದೋಗತಿಗೆ ಬಂದಿದೆ. ದೇಶದಲ್ಲಿ ಕಾಂಗ್ರೇಸ್ ತೊಲಗಿದೆ. ಕಾಂಗ್ರೇಸ್ ಮುಕ್ತ ಭಾರತ ಆಗಲಿದೆ ಎಂದರು.

lokesh

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

11 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

11 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

12 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

12 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

13 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

13 hours ago