BREAKING NEWS

ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟ ಆಗಲಿದೆ : ಆರ್‌ ಅಶೋಕ್‌ ಆಕ್ರೋಶ

ರಾಮನಗರ : ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಆರೋಪಿಸಿರುವ ಸಚಿವ ಆರ್. ಅಶೋಕ, ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿಯಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ. ಇದು ಇಡೀ ಕಾಂಗ್ರೆಸನ್ನೇ ಸುಟ್ಟು ಸರ್ವನಾಶ ಮಾಡುತ್ತದೆ ಎಂದು ಹೇಳಿದ್ದಾರೆ.

ಕನಕಪುರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪ್ರನಾಳಿಕೆಯಲ್ಲಿ ಬಜರಂಗದಳ ಬ್ಯಾನ್ ವಿಚಾರವನ್ನು ಖಂಡಿಸಿದರು. ಬಜರಂಗದಳ ಬ್ಯಾನ್ ವಿಚಾರದಿಂದ ಕಾಂಗ್ರೆಸ್ ಇನ್ನಷ್ಟು ಸ್ಥಾನ ಕಳೆದುಕೊಳ್ತಾರೆ. ಹಿಂದೂ ರಕ್ಷಣೆ ಮಾಡುವವವರು ಬಜರಂಗದಳದವರು. ದೇಶ, ದೇವಸ್ಥಾನಗಳನ್ನು ರಕ್ಷಣೆ ಮಾಡೋದು ಬಜರಂಗದಳ. ಕಾಂಗ್ರೆಸ್ ಅವರು ಬಜರಂಗದಳವನ್ನು ಪಿಎಫ್ಐಗೆ ಹೋಲಿಸುವುದನ್ನು ನಾನು ಖಂಡಿಸುತ್ತೇನೆ ಎಂದರು.

ಸಿದ್ದರಾಮಯ್ಯ ಅವರು ಮೊದಲಿನಿಂದಲೂ ಕುಂಕುಮವನ್ನು ವಿರೋಧ ಮಾಡ್ತಾರೆ. ಟಿಪ್ಪು ಸುಲ್ತಾನ್ ಅವರನ್ನು ಹೊಗಳುತ್ತಾರೆ. ಹಿಂದೂ ವಿರೋಧಿ ಭಾವನೆಯನ್ನು ಕಾಂಗ್ರೆಸ್ ತೋರಿಸಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಎಲ್ಲ ಕಡೆ ಪ್ರತಿಭಟನೆ ನಡೆಯುತ್ತಿದೆ. ಇದೇ ಕಾರಣಕ್ಕೆ ಎಲ್ಲಾ ಕಡೆ ಹನುಮಾನ್ ಚಾಲಿಸಾ ಪಠಣೆ ಮಾಡಲಾಗುತ್ತದೆ. ಕಾಂಗ್ರೇಸ್ ದೇಶದಲ್ಲಿ ಸರ್ವನಾಶವಾಗುತ್ತದೆ. ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ‌. ಚುನಾವಣೆ ಸಂದರ್ಭದಲ್ಲಿ ಇದೆಲ್ಲವೂ ಕಾಂಗ್ರೆಸ್ ಗೆ ವ್ಯತಿರಿಕ್ತವಾಗುತ್ತದೆ‌. ಇದೆಲ್ಲವನ್ನೂ ನೋಡಿದ್ರೆ ಹಿಂದೂ ವಿರೋಧಿ ಕಾಂಗ್ರೆಸ್ ಅನ್ನುವುದು ಗೊತ್ತಾಗುತ್ತದೆ ಎಂದರು.

ನಾನೂ ಬಜರಂಗದಳ, ಬನ್ನಿ ನಮ್ಮ ಮನೆ ಹತ್ತಿರ : ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಸಚಿವ ಆರ್.ಅಶೋಕ್ ಅವರು “ನಾನು ಕೂಡ ಬಜರಂಗದಳ. ನೋಡೊಣ ಬನ್ನಿ ನಮ್ಮ ಮನೆ ಹತ್ತಿರ. ಬಂದು ಏನು ಮಾಡ್ತೀರಿ ನೋಡೊಣ” ಎಂದು ಬಹಿರಂಗ ಸವಾಲ್ ಹಾಕಿದರು. ಎಲ್ಲರೂ ಕೂಡ ಆರ್.ಎಸ್.ಎಸ್ ಬಜರಂಗದಳದಿಂದಲೇ ಬಂದಿರೋದು. ನಿಮಗೆ ತಾಕತ್ತು, ಧಮ್ ಇದೆಯಾ ಬ್ಯಾನ್ ಮಾಡೋಕೆ? ಪಾಕಿಸ್ತಾನಕ್ಕೆ ಜೈ ಅನ್ನೋ ಸಂಸ್ಕಾರ ನಮ್ಮದಲ್ಲ. ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ. ಇದು ಇಡೀ ಕಾಂಗ್ರೆಸನ್ನೇ ಸುಟ್ಟು ಸರ್ವನಾಶ ಮಾಡುತ್ತೆ‌ ಎಂದರು.‌

ಕನಕಪುರದಲ್ಲಿ‌ಮುನೇಶ್ವರ ಬೆಟ್ಟವನ್ನು ಯೇಸು ಶಿಲುಬೆ ಮಾಡೋಕೆ ಹೊರಟಿದ್ರಿ. ಇದೀಗ ಆಂಜನೇಯನ ಸುದ್ದಿಗೆ ಬಂದಿದ್ದೀರಿ. ಮುಂದಿನ ದಿನಗಳಲ್ಲಿ ಮಹಿಳೆಯರು ಕುಂಕುಮ ಇಡೋದಕ್ಕೂ ಬಿಡೊಲ್ಲ. ಈಗಾಗಲೇ ಇದಕ್ಕೆಲ್ಲಾ ಸಿದ್ದರಾಮಯ್ಯ ಅವರು ವಿರೋಧ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಲ್ಲಿಕಾರ್ಜುನ ಖರ್ಗೆ ಮೋದಿ ಅವರನ್ನು ವಿಷದ ಹಾವು ಎಂದಿದ್ದಾರೆ. ಒಬ್ಬ ಪ್ರಧಾನಿ ಬಗ್ಗೆ ಮಾತನಾಡಬೇಕಾದರೆ ಯೋಚನೆ ಮಾಡಬೇಕು. ಇಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಬಾರದು‌. ವಿಷವನ್ನು ನೆಕ್ಕಿದ್ದೇನೆ ಎಂದು ಖರ್ಗೆ ಹೇಳಿದ್ದಾರೆ‌. ಯಾರಾದರೂ ಕೂಡ ವಿಷವನ್ನು ನೆಕ್ಕುತ್ತಾರಾ ಹೇಳಿ? ಈ ಎಲ್ಲಾ ಕಾಂಗ್ರೇಸ್ ನಾಯಕರ ಹೇಳಿಕೆಯಿಂದ ಕಾಂಗ್ರೆಸ್ ಅದೋಗತಿಗೆ ಬಂದಿದೆ. ದೇಶದಲ್ಲಿ ಕಾಂಗ್ರೇಸ್ ತೊಲಗಿದೆ. ಕಾಂಗ್ರೇಸ್ ಮುಕ್ತ ಭಾರತ ಆಗಲಿದೆ ಎಂದರು.

lokesh

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

13 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

16 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

17 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

18 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

23 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

23 hours ago