ಬೆಂಗಳೂರು : ಕಾಂಗ್ರೆಸ್ಸಿಗರು ಈಗ ವಸೂಲಿ ದಂಧೆಯಲ್ಲಿ 100% ಮುಳುಗಿ ಹೋಗಿದ್ದಾರೆ ಎಂದು ಶಿಕಾರಿಪುರದ ಶಾಸಕ, ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಕಾಲು ವರ್ಷವೂ ಕಳೆದಿಲ್ಲ ಆಗಲೇ ಕಂಟ್ರಾಕ್ಟ್ ಕಮೀಷನ್, ವರ್ಗಾವಣೆ ವ್ಯಾಪಾರದ ಹೊಲಸು ಮೈಗೆಲ್ಲಾ ಮೆತ್ತಿಸಿಕೊಳ್ಳುತ್ತಿದೆ. ಬಿಜೆಪಿ ಸರ್ಕಾರದ ಮೇಲೆ ಪರ್ಸೆಂಟೇಜ್ ಆರೋಪ ಹೊರಿಸುತ್ತಿದ್ದ ಕಾಂಗ್ರೆಸ್ಸಿಗರು ಇದೀಗ ವಸೂಲಿ ದಂಧೆಯಲ್ಲಿ 100% ಮುಳುಗಿ ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿ, ಕಲುಷಿತ ನೀರು ಸೇವಿಸಿ ಸಾರ್ವಜನಿಕರು ಸತ್ತರೆ ನಮ್ಮನ್ನು ಕೇಳಬೇಡಿ. ಆತ್ಮಹತ್ಯೆಯಿಂದ ರೈತರು ಸತ್ತರೆ ಚಿಂತಿಸಬೇಡಿ. ಭ್ರಷ್ಟಾಚಾರ ಮಾಡಿ ಕಮಿಷನ್ ಪಡೆಯಲು ನಾವ್ ರೆಡಿ, ನಾವ್ ರೆಡಿ. ಇದು #ATMSarkara ದ ನಿತ್ಯಗೀತೆ ಎಂದು ಬರೆದು ಟೀಕಿಸಿದೆ.
ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು 40% ಕಮಿಷನ್ ಆರೋಪ ಮಾಡಿದ್ದರು. ಈಗ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ 100% ಕಮಿಷನ್ ಆರೋಪ ಮಾಡಲು ಆರಂಭಿಸಿದ್ದಾರೆ.
ಮಂಗಳೂರು: ಮಾರ್ಚ್.3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…
ಬೆಂಗಳೂರು: ಕಾಂಗ್ರೆಸ್ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…
ಬೆಂಗಳೂರು: ಮಾರ್ಚ್.3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…
ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ…
ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…