BREAKING NEWS

ಕಾಂಗ್ರೆಸ್ಸಿಗರು ವಸೂಲಿ ದಂಧೆಯಲ್ಲಿ ಮುಳುಗಿಹೋಗಿದ್ದಾರೆ : ವಿಜಯೇಂದ್ರ ಕಿಡಿ

ಬೆಂಗಳೂರು : ಕಾಂಗ್ರೆಸ್ಸಿಗರು ಈಗ ವಸೂಲಿ ದಂಧೆಯಲ್ಲಿ 100% ಮುಳುಗಿ ಹೋಗಿದ್ದಾರೆ ಎಂದು ಶಿಕಾರಿಪುರದ ಶಾಸಕ, ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಕಾಲು ವರ್ಷವೂ ಕಳೆದಿಲ್ಲ ಆಗಲೇ ಕಂಟ್ರಾಕ್ಟ್ ಕಮೀಷನ್, ವರ್ಗಾವಣೆ ವ್ಯಾಪಾರದ ಹೊಲಸು ಮೈಗೆಲ್ಲಾ ಮೆತ್ತಿಸಿಕೊಳ್ಳುತ್ತಿದೆ. ಬಿಜೆಪಿ ಸರ್ಕಾರದ ಮೇಲೆ ಪರ್ಸೆಂಟೇಜ್ ಆರೋಪ ಹೊರಿಸುತ್ತಿದ್ದ ಕಾಂಗ್ರೆಸ್ಸಿಗರು ಇದೀಗ ವಸೂಲಿ ದಂಧೆಯಲ್ಲಿ 100% ಮುಳುಗಿ ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಕರ್ನಾಟಕ ಟ್ವೀಟ್‌ ಮಾಡಿ, ಕಲುಷಿತ ನೀರು ಸೇವಿಸಿ ಸಾರ್ವಜನಿಕರು ಸತ್ತರೆ ನಮ್ಮನ್ನು ಕೇಳಬೇಡಿ. ಆತ್ಮಹತ್ಯೆಯಿಂದ ರೈತರು ಸತ್ತರೆ ಚಿಂತಿಸಬೇಡಿ. ಭ್ರಷ್ಟಾಚಾರ ಮಾಡಿ ಕಮಿಷನ್ ಪಡೆಯಲು ನಾವ್ ರೆಡಿ, ನಾವ್ ರೆಡಿ. ಇದು #ATMSarkara ದ ನಿತ್ಯಗೀತೆ ಎಂದು ಬರೆದು ಟೀಕಿಸಿದೆ.

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕರು 40% ಕಮಿಷನ್‌ ಆರೋಪ ಮಾಡಿದ್ದರು. ಈಗ ಬಿಜೆಪಿ ನಾಯಕರು ಕಾಂಗ್ರೆಸ್‌ ಸರ್ಕಾರದ ವಿರುದ್ಧ 100% ಕಮಿಷನ್‌ ಆರೋಪ ಮಾಡಲು ಆರಂಭಿಸಿದ್ದಾರೆ.

 

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

8 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

8 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

8 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

8 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

8 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago