ಬೆಂಗಳೂರು : ಕಾಂಗ್ರೆಸ್ಸಿಗರು ಈಗ ವಸೂಲಿ ದಂಧೆಯಲ್ಲಿ 100% ಮುಳುಗಿ ಹೋಗಿದ್ದಾರೆ ಎಂದು ಶಿಕಾರಿಪುರದ ಶಾಸಕ, ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಕಾಲು ವರ್ಷವೂ ಕಳೆದಿಲ್ಲ ಆಗಲೇ ಕಂಟ್ರಾಕ್ಟ್ ಕಮೀಷನ್, ವರ್ಗಾವಣೆ ವ್ಯಾಪಾರದ ಹೊಲಸು ಮೈಗೆಲ್ಲಾ ಮೆತ್ತಿಸಿಕೊಳ್ಳುತ್ತಿದೆ. ಬಿಜೆಪಿ ಸರ್ಕಾರದ ಮೇಲೆ ಪರ್ಸೆಂಟೇಜ್ ಆರೋಪ ಹೊರಿಸುತ್ತಿದ್ದ ಕಾಂಗ್ರೆಸ್ಸಿಗರು ಇದೀಗ ವಸೂಲಿ ದಂಧೆಯಲ್ಲಿ 100% ಮುಳುಗಿ ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿ, ಕಲುಷಿತ ನೀರು ಸೇವಿಸಿ ಸಾರ್ವಜನಿಕರು ಸತ್ತರೆ ನಮ್ಮನ್ನು ಕೇಳಬೇಡಿ. ಆತ್ಮಹತ್ಯೆಯಿಂದ ರೈತರು ಸತ್ತರೆ ಚಿಂತಿಸಬೇಡಿ. ಭ್ರಷ್ಟಾಚಾರ ಮಾಡಿ ಕಮಿಷನ್ ಪಡೆಯಲು ನಾವ್ ರೆಡಿ, ನಾವ್ ರೆಡಿ. ಇದು #ATMSarkara ದ ನಿತ್ಯಗೀತೆ ಎಂದು ಬರೆದು ಟೀಕಿಸಿದೆ.
ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು 40% ಕಮಿಷನ್ ಆರೋಪ ಮಾಡಿದ್ದರು. ಈಗ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ 100% ಕಮಿಷನ್ ಆರೋಪ ಮಾಡಲು ಆರಂಭಿಸಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…