BREAKING NEWS

ನನ್ನ ವಿರುದ್ದ ನಡೆಯುವ ಷಡ್ಯಂತ್ರಗಳಿಗೆ ಫಲ ದೊರಕುವುದಿಲ್ಲ: ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ಖಾತೆಯ ಸಚಿವನಾಗಿ ರಾಜ್ಯದಲ್ಲಿ ಮಾಡಬಹುದಾದ ಬಹಳಷ್ಟು ಕೆಲಸವಿದ್ದು ಆ ಬಗ್ಗೆ ನನಗೆ ನನ್ನದೇ ಆದ ಕನಸುಗಳಿವೆ. ನನ್ನ ಖಾತೆಯ ಇತಿ ಮಿತಿಯೊಳಗೆ ನಾನು ರೈತರಿಗೆ ನೆರವಾಗಬಹುದಾದ ಅನೇಕ ಕಾರ್ಯಕ್ರಮಗಳನ್ನು ಮಾಡಲು ಯೋಜಿಸಲಾಗಿದೆ.

ಇಂತಹ ಸಂದರ್ಭದಲ್ಲಿ ನನಗೆ ಮತ್ತಷ್ಟು ಹೆಸರು ಬರುವುದೆಂಬ ಭಯ ಮತ್ತು ಹತಾಶೆಯಿಂದ ಕೆಲವರು ಈ ಷಡ್ಯಂತ್ರದ ರಾಜಕಾರಣ ನಡೆಸುತ್ತಿದ್ದಾರೆ. ಸತ್ಯಕ್ಕೆ ದೂರವಾಗಿರುವ  ಅವರ ಈ ಯಾವ ಕುತಂತ್ರಗಳು ಫಲ ನೀಡುವುದಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಲಂಚ ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ಅವರು,  ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಕೃಷಿಯನ್ನೇ ನಂಬಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಶೇ.70 ರಷ್ಟು ಜನರು ಜೀವನ ನಡೆಸುತ್ತಿದ್ದಾರೆ. ಇಂತಹ ಮಹತ್ವದ ಕ್ಷೇತ್ರದಲ್ಲಿ ಒಂದಷ್ಟು ಸೇವೆ ಮಾಡುವ ಅವಕಾಶ ನನಗೆ ರಾಜಕೀಯವಾಗಿ ದೊರೆತಿದೆ.

ನಾನೂ ಸಹ ಕೃಷಿಕ ಕುಟುಂಬದ ಒಬ್ಬ ರೈತನ ಮಗನಾಗಿ ಬಂದವನಾಗಿದ್ದು ನನಗೆ ಲಭಿಸಿರುವ ಉತ್ತಮ ಅವಕಾಶವನ್ನು ಬಳಸಿಕೊಂಡು ಕರ್ನಾಟಕದ ರೈತರಿಗೆ ಕೃಷಿ ಮಂತ್ರಿಯಾಗಿ ಏನೆಲ್ಲಾ ಸೇವೆ ಮಾಡಲು ಸಾಧ್ಯವಿದೆಯೋ ಆ ಎಲ್ಲಾ ಸೇವೆ ಸಲ್ಲಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಹೇಗಾದರೂ ಮಾಡಿ ನನ್ನನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ಬಹಳ ವ್ಯವಸ್ಥಿತವಾಗಿ ಷಡ್ಯಂತ್ರ ಮತ್ತು ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ನನ್ನನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿರುವ ಈ ಕುತಂತ್ರದ ಹಿಂದೆ ಯಾರಿರಬಹುದು ಎನ್ನುವ ಬಗ್ಗೆ ಹೆಸರು ಹೇಳುವ ಅವಶ್ಯಕತೆಯಿಲ್ಲ ನಿಮಗೆ ತಿಳಿದಿದೆ. ಜನರು ರಾಜಕೀಯವಾಗಿ ಪ್ರಬುದ್ಧರಿದ್ದು ನನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವುದು ಯಾರೆಂದು ಅವರೇ ನಿರ್ಧಾರ ಮಾಡುತ್ತಾರೆ. ಸರ್ಕಾರಗಳ ಬದಲಾವಣೆ ಆದಾಗ ಸರ್ಕಾರಿ ನೌಕರರ ವರ್ಗಾವಣೆ ಒಂದು ಸಾಮಾನ್ಯ ಪ್ರಕ್ರಿಯೆ. ಇದು ಎಲ್ಲಾ ಹೊಸ ಸರ್ಕಾರಗಳು ಬಂದಾಗಲೂ ಸಹಜವಾಗಿ ನಡೆದಿವೆ. ಆದರೆ ವೈಯಕ್ತಿಕವಾಗಿ ನಾನು ಮೊದಲಿನಿಂದಲೂ ಈ ಪ್ರಕ್ರಿಯೆಯಲ್ಲಿ ಈ ಬಗ್ಗೆ ಹೆಚ್ಚಿನ ಗಮನ ಕೊಟ್ಟಿಲ್ಲ ಎಂದಿದ್ದಾರೆ.

ನನ್ನ ಬಗ್ಗೆ ಬಹಳ ದ್ವೇಷ ಹೊಂದಿರುವ ಜನ ಹೇಗಾದರೂ ಸರಿ ನನ್ನ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತರುವ ಪ್ರಯತ್ನದ ಭಾಗವಾಗಿ ನಕಲಿ ಪತ್ರಗಳನ್ನು ಸೃಷ್ಟಿಸಿ ಸದರಿ ನಕಲಿ ಪತ್ರಗಳ ಆಧಾರದ ಮೇಲೆ ನೌಕರರನ್ನು ನೆಪವಾಗಿಸಿ ಷಡ್ಯಂತ್ರ ರೂಪಿಸುತ್ತಿದ್ದಾರೆ.

ಈ ಷಡ್ಯಂತ್ರದ ಹಿಂದಿರುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಲಿದೆ. ಈಗಾಗಲೇ ರಾಜ್ಯದ ಜನತೆಗೆ ನನ್ನ ವಿರುದ್ಧ ಯಾರೆಲ್ಲ ಏನೇನು ರಾಜಕೀಯ ಮಸಲತ್ತು ನಡೆಸಿದ್ದಾರೆಂಬುದು ತಿಳಿದಿದೆ. ಇದು ಸಹ ಅಂತಹುದೇ ಮುಂದುವರಿದ ಭಾಗ ಭಾಗವಷ್ಟೇ. ನೇರವಾಗಿ ನನ್ನನ್ನು ಎದುರಿಸಲಾಗದೆ ನನ್ನ ವಿರುದ್ಧ ಈ ರೀತಿಯ ಕ್ಷುಲ್ಲಕ ರಾಜಕೀಯ ಮಾಡಲಾಗುತ್ತಿದೆ ಎಂದು ಸಚಿವರು ವಿವರಣೆ ನೀಡಿದ್ದಾರೆ.

andolanait

Recent Posts

ಹಲಗೂರು: ಬೆಂಕಿಗೆ ಆಹುತಿಯಾದ ತೆಂಗಿನ ತೋಟ

ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿ ರಸ್ತೆಯ ಬೈಪಾಸ್ ಬಳಿ ಭೀಮಾನದಿ ಸೇತುವೆಯ ಬಫರ್ ಜೋನ್ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ…

17 mins ago

ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಚಿರತೆ ಸೆರೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ…

1 hour ago

ತಂಬಾಕು ಬೆಳೆಗಾರರ ಸಮಸ್ಯೆ: ಜಿಎಸ್‌ಟಿ ಮೂಲಕ ತೆರಿಗೆ ಹಾಕುವ ಕೇಂದ್ರವು ಪರಿಹಾರ ನೀಡಲಿ ಎಂದ ಎಂ.ಲಕ್ಷ್ಮಣ್

ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ…

2 hours ago

RSS ವಿಷ ಸರ್ಪ ಎಂಬ ಖರ್ಗೆ ಹೇಳಿಕೆ ವಿಚಾರ: ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ

ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ…

2 hours ago

ಗ್ಯಾಸ್ ಸಿಲಿಂಡರ್‌ ಅಭಾವ: ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಎಂ ಲಕ್ಷ್ಮಣ್ ಕಿಡಿ

ಮೈಸೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…

2 hours ago

ಏಪ್ರಿಲ್.‌5ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.‌15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…

2 hours ago