BREAKING NEWS

ನನ್ನ ವಿರುದ್ದ ನಡೆಯುವ ಷಡ್ಯಂತ್ರಗಳಿಗೆ ಫಲ ದೊರಕುವುದಿಲ್ಲ: ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ಖಾತೆಯ ಸಚಿವನಾಗಿ ರಾಜ್ಯದಲ್ಲಿ ಮಾಡಬಹುದಾದ ಬಹಳಷ್ಟು ಕೆಲಸವಿದ್ದು ಆ ಬಗ್ಗೆ ನನಗೆ ನನ್ನದೇ ಆದ ಕನಸುಗಳಿವೆ. ನನ್ನ ಖಾತೆಯ ಇತಿ ಮಿತಿಯೊಳಗೆ ನಾನು ರೈತರಿಗೆ ನೆರವಾಗಬಹುದಾದ ಅನೇಕ ಕಾರ್ಯಕ್ರಮಗಳನ್ನು ಮಾಡಲು ಯೋಜಿಸಲಾಗಿದೆ.

ಇಂತಹ ಸಂದರ್ಭದಲ್ಲಿ ನನಗೆ ಮತ್ತಷ್ಟು ಹೆಸರು ಬರುವುದೆಂಬ ಭಯ ಮತ್ತು ಹತಾಶೆಯಿಂದ ಕೆಲವರು ಈ ಷಡ್ಯಂತ್ರದ ರಾಜಕಾರಣ ನಡೆಸುತ್ತಿದ್ದಾರೆ. ಸತ್ಯಕ್ಕೆ ದೂರವಾಗಿರುವ  ಅವರ ಈ ಯಾವ ಕುತಂತ್ರಗಳು ಫಲ ನೀಡುವುದಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಲಂಚ ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ಅವರು,  ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಕೃಷಿಯನ್ನೇ ನಂಬಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಶೇ.70 ರಷ್ಟು ಜನರು ಜೀವನ ನಡೆಸುತ್ತಿದ್ದಾರೆ. ಇಂತಹ ಮಹತ್ವದ ಕ್ಷೇತ್ರದಲ್ಲಿ ಒಂದಷ್ಟು ಸೇವೆ ಮಾಡುವ ಅವಕಾಶ ನನಗೆ ರಾಜಕೀಯವಾಗಿ ದೊರೆತಿದೆ.

ನಾನೂ ಸಹ ಕೃಷಿಕ ಕುಟುಂಬದ ಒಬ್ಬ ರೈತನ ಮಗನಾಗಿ ಬಂದವನಾಗಿದ್ದು ನನಗೆ ಲಭಿಸಿರುವ ಉತ್ತಮ ಅವಕಾಶವನ್ನು ಬಳಸಿಕೊಂಡು ಕರ್ನಾಟಕದ ರೈತರಿಗೆ ಕೃಷಿ ಮಂತ್ರಿಯಾಗಿ ಏನೆಲ್ಲಾ ಸೇವೆ ಮಾಡಲು ಸಾಧ್ಯವಿದೆಯೋ ಆ ಎಲ್ಲಾ ಸೇವೆ ಸಲ್ಲಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಹೇಗಾದರೂ ಮಾಡಿ ನನ್ನನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ಬಹಳ ವ್ಯವಸ್ಥಿತವಾಗಿ ಷಡ್ಯಂತ್ರ ಮತ್ತು ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ನನ್ನನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿರುವ ಈ ಕುತಂತ್ರದ ಹಿಂದೆ ಯಾರಿರಬಹುದು ಎನ್ನುವ ಬಗ್ಗೆ ಹೆಸರು ಹೇಳುವ ಅವಶ್ಯಕತೆಯಿಲ್ಲ ನಿಮಗೆ ತಿಳಿದಿದೆ. ಜನರು ರಾಜಕೀಯವಾಗಿ ಪ್ರಬುದ್ಧರಿದ್ದು ನನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವುದು ಯಾರೆಂದು ಅವರೇ ನಿರ್ಧಾರ ಮಾಡುತ್ತಾರೆ. ಸರ್ಕಾರಗಳ ಬದಲಾವಣೆ ಆದಾಗ ಸರ್ಕಾರಿ ನೌಕರರ ವರ್ಗಾವಣೆ ಒಂದು ಸಾಮಾನ್ಯ ಪ್ರಕ್ರಿಯೆ. ಇದು ಎಲ್ಲಾ ಹೊಸ ಸರ್ಕಾರಗಳು ಬಂದಾಗಲೂ ಸಹಜವಾಗಿ ನಡೆದಿವೆ. ಆದರೆ ವೈಯಕ್ತಿಕವಾಗಿ ನಾನು ಮೊದಲಿನಿಂದಲೂ ಈ ಪ್ರಕ್ರಿಯೆಯಲ್ಲಿ ಈ ಬಗ್ಗೆ ಹೆಚ್ಚಿನ ಗಮನ ಕೊಟ್ಟಿಲ್ಲ ಎಂದಿದ್ದಾರೆ.

ನನ್ನ ಬಗ್ಗೆ ಬಹಳ ದ್ವೇಷ ಹೊಂದಿರುವ ಜನ ಹೇಗಾದರೂ ಸರಿ ನನ್ನ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತರುವ ಪ್ರಯತ್ನದ ಭಾಗವಾಗಿ ನಕಲಿ ಪತ್ರಗಳನ್ನು ಸೃಷ್ಟಿಸಿ ಸದರಿ ನಕಲಿ ಪತ್ರಗಳ ಆಧಾರದ ಮೇಲೆ ನೌಕರರನ್ನು ನೆಪವಾಗಿಸಿ ಷಡ್ಯಂತ್ರ ರೂಪಿಸುತ್ತಿದ್ದಾರೆ.

ಈ ಷಡ್ಯಂತ್ರದ ಹಿಂದಿರುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಲಿದೆ. ಈಗಾಗಲೇ ರಾಜ್ಯದ ಜನತೆಗೆ ನನ್ನ ವಿರುದ್ಧ ಯಾರೆಲ್ಲ ಏನೇನು ರಾಜಕೀಯ ಮಸಲತ್ತು ನಡೆಸಿದ್ದಾರೆಂಬುದು ತಿಳಿದಿದೆ. ಇದು ಸಹ ಅಂತಹುದೇ ಮುಂದುವರಿದ ಭಾಗ ಭಾಗವಷ್ಟೇ. ನೇರವಾಗಿ ನನ್ನನ್ನು ಎದುರಿಸಲಾಗದೆ ನನ್ನ ವಿರುದ್ಧ ಈ ರೀತಿಯ ಕ್ಷುಲ್ಲಕ ರಾಜಕೀಯ ಮಾಡಲಾಗುತ್ತಿದೆ ಎಂದು ಸಚಿವರು ವಿವರಣೆ ನೀಡಿದ್ದಾರೆ.

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

47 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

1 hour ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago