ಬೆಂಗಳೂರು : ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಿಂಗಾಪುರದಲ್ಲಿ ಪಿತೂರಿ ನಡೆಸುತ್ತಿರುವ ಮಾಹಿತಿ ನಮಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು ಸಿಂಗಾಪುರಕ್ಕೆ ಹೋಗುತ್ತಿದ್ದಾರೆ. ಇದೆಲ್ಲದರ ಬಗ್ಗೆಯೂ ನಮಗೆ ಮಾಹಿತಿ ಇದೆ. ಅವರ ತಂತ್ರಗಳೇನು ಎಂಬುದು ಗೊತ್ತಿದೆ ಎಂದರು.
ವಿದೇಶದಲ್ಲಿ ಕಾರ್ಯತಂತ್ರ : ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಾಕಷ್ಟು ಸಂಚುಗಳು ನಡೆಯುತ್ತಿವೆ ಎಂಬ ಅಸಮಧಾನ ಕಾಂಗ್ರೆಸ್ ವಲಯದಲ್ಲಿ ಆತಂಕ ಮೂಡಿಸಿವೆ.
ಇತ್ತೀಚೆಗೆ ಕಾಂಗ್ರೆಸ್ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಸಂಚಲನ ಮೂಡಿಸುತ್ತಿದೆ. ಅದರ ಜತೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಕೆಲ ನಾಯಕರು ಕಾಂಗ್ರೆಸ್ನ ಅತೃಪ್ತ ಮತ್ತು ಅಸಮಾಧಾನಿತ ಶಾಸಕರ ಜತೆ ಸಂಪರ್ಕದಲ್ಲಿರುವುದು ಚರ್ಚೆಗೆ ಗ್ರಾಸವಾಗಿತ್ತು.
ಒಟ್ಟು 138 ಶಾಸಕರ ಸಂಖ್ಯಾಬಲ ಹೊಂದಿರುವ ಸ್ಪಷ್ಟ ಬಹುಮತದ ಸರ್ಕಾರವನ್ನು ಪತನಗೊಳಿಸಲು ಅಸಾಧ್ಯ ಎಂಬ ವಿಶ್ವಾಸದ ನಡುವೆಯೂ ಕೆಲವು ಚಟುವಟಿಕೆಗಳು ಅನುಮಾನ ಹುಟ್ಟಿಸುತ್ತಿವೆ. ಚುನಾವಣಾ ಫಲಿತಾಂಶ ಪ್ರಕಟಗೊಳ್ಳುವ ಸಂದರ್ಭದಲ್ಲಿ ಜೆಡಿಎಸ್ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಆಪ್ತರೊಂದಿಗೆ ಸಿಂಗಾಪುರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.
ರಾಜಕೀಯ ಲೆಕ್ಕಾಚಾರಗಳು ತಲೆಕೆಳಗಾಗಿಸಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದುಕೊಂಡಿತು. ನಂತರದ ಬೆಳವಣಿಗೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪರಸ್ಪರ ಕೈ ಜೋಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಸ್ವರೂಪದ ಹೋರಾಟ ನಡೆಸುತ್ತಿವೆ. ಬೆಂಗಳೂರಿನಲ್ಲಿ ನಡೆದ ಇಂಡಿಯಾ ಸಭೆಯಲ್ಲಿ ಭಾಗವಹಿಸಿದ್ದ ರಾಜಕೀಯ ಪ್ರಮುಖರ ಶಿಷ್ಟಾಚಾರ ಪಾಲನೆಗೆ ಐಎಎಸ್ ಅಕಾರಿಗಳನ್ನು ನೇಮಿಸಿರುವುದರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಿದ್ದವು.
ಅದರ ಬಳಿಕ ಎರಡು ಪಕ್ಷಗಳ ನಡುವೆ ಮೈತ್ತಿಯಾಗಲಿವೆ ಎಂಬ ಚರ್ಚೆಗಳಿಗೂ ರೆಕ್ಕೆ-ಪುಕ್ಕ ಬಂದಿತ್ತು. ಅದಕ್ಕೆ ಅನುಗುಣವಾಗಿ ಜೆಡಿಎಸ್ ಜಾತ್ಯತೀತ ನಿಲುವಿನ ರಾಜಕೀಯ ಪಕ್ಷಗಳ ಕೂಟವಾಗಿರುವ ಇಂಡಿಯಾ ಸಭೆಯಿಂದ ದೂರ ಉಳಿದಿತ್ತು. ಅತ್ತ ಬಿಜೆಪಿ ನೇತೃತ್ವದ ಎನ್ಡಿಎ ಕೂಟದ ಸಭೆಯಲ್ಲೂ ಜೆಡಿಎಸ್ ಕಾಣಿಸಿಕೊಳ್ಳಲಿಲ್ಲ. ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸಿದ ಜೆಡಿಎಸ್ನ ಶಾಸಕರು ಮತ್ತು ಪ್ರಮುಖರು ನಮ್ಮ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಅಂತರ ಕಾಯ್ದುಕೊಳ್ಳಲಿದೆ. ಸಮಾನಾಂತರ ಶಕ್ತಿಯಾಗಿ ಹೋರಾಟ ನಡೆಸಲಿದೆ ಎಂದು ಘೋಷಿಸಿದ್ದರು.
ಆದರೆ ನಂತರದಲ್ಲೂ ತೆರೆಮರೆಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ. ಆಪರೇಷನ್ ಕಮಲಕ್ಕೆ ಪೂರಕವಾಗಿ ಮಾತುಕತೆಗಳಾಗುತ್ತಿವೆ ಎಂಬ ವದಂತಿಗಳಿವೆ. ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೂಡ ಖಚಿತ ಪಡಿಸಿದ್ದು, ವಿದೇಶದಲ್ಲಿ ಸರ್ಕಾರದ ಪತನಕ್ಕೆ ಸಂಚು ನಡೆದಿರುವ ಮಾಹಿತಿ ಇದೇ ಎಂದಿದ್ದಾರೆ.
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…
ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್ಗೆ ಪ್ರಯಾಣಿಸಲಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…