BREAKING NEWS

ರಾಜ್ಯ ಸರ್ಕಾರ ಪತನಗೊಳಿಸಲು ಸಿಂಗಾಪುರದಲ್ಲಿ ಪಿತೂರಿ: ಡಿಸಿಎಂ ಡಿಕೆಶಿ

ಬೆಂಗಳೂರು : ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಿಂಗಾಪುರದಲ್ಲಿ ಪಿತೂರಿ ನಡೆಸುತ್ತಿರುವ ಮಾಹಿತಿ ನಮಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು ಸಿಂಗಾಪುರಕ್ಕೆ ಹೋಗುತ್ತಿದ್ದಾರೆ. ಇದೆಲ್ಲದರ ಬಗ್ಗೆಯೂ ನಮಗೆ ಮಾಹಿತಿ ಇದೆ. ಅವರ ತಂತ್ರಗಳೇನು ಎಂಬುದು ಗೊತ್ತಿದೆ ಎಂದರು.

ವಿದೇಶದಲ್ಲಿ ಕಾರ್ಯತಂತ್ರ : ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಾಕಷ್ಟು ಸಂಚುಗಳು ನಡೆಯುತ್ತಿವೆ ಎಂಬ ಅಸಮಧಾನ ಕಾಂಗ್ರೆಸ್ ವಲಯದಲ್ಲಿ ಆತಂಕ ಮೂಡಿಸಿವೆ.

ಇತ್ತೀಚೆಗೆ ಕಾಂಗ್ರೆಸ್‍ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಸಂಚಲನ ಮೂಡಿಸುತ್ತಿದೆ. ಅದರ ಜತೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಕೆಲ ನಾಯಕರು ಕಾಂಗ್ರೆಸ್‍ನ ಅತೃಪ್ತ ಮತ್ತು ಅಸಮಾಧಾನಿತ ಶಾಸಕರ ಜತೆ ಸಂಪರ್ಕದಲ್ಲಿರುವುದು ಚರ್ಚೆಗೆ ಗ್ರಾಸವಾಗಿತ್ತು.

ಒಟ್ಟು 138 ಶಾಸಕರ ಸಂಖ್ಯಾಬಲ ಹೊಂದಿರುವ ಸ್ಪಷ್ಟ ಬಹುಮತದ ಸರ್ಕಾರವನ್ನು ಪತನಗೊಳಿಸಲು ಅಸಾಧ್ಯ ಎಂಬ ವಿಶ್ವಾಸದ ನಡುವೆಯೂ ಕೆಲವು ಚಟುವಟಿಕೆಗಳು ಅನುಮಾನ ಹುಟ್ಟಿಸುತ್ತಿವೆ. ಚುನಾವಣಾ ಫಲಿತಾಂಶ ಪ್ರಕಟಗೊಳ್ಳುವ ಸಂದರ್ಭದಲ್ಲಿ ಜೆಡಿಎಸ್ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಆಪ್ತರೊಂದಿಗೆ ಸಿಂಗಾಪುರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

ರಾಜಕೀಯ ಲೆಕ್ಕಾಚಾರಗಳು ತಲೆಕೆಳಗಾಗಿಸಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದುಕೊಂಡಿತು. ನಂತರದ ಬೆಳವಣಿಗೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪರಸ್ಪರ ಕೈ ಜೋಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಸ್ವರೂಪದ ಹೋರಾಟ ನಡೆಸುತ್ತಿವೆ. ಬೆಂಗಳೂರಿನಲ್ಲಿ ನಡೆದ ಇಂಡಿಯಾ ಸಭೆಯಲ್ಲಿ ಭಾಗವಹಿಸಿದ್ದ ರಾಜಕೀಯ ಪ್ರಮುಖರ ಶಿಷ್ಟಾಚಾರ ಪಾಲನೆಗೆ ಐಎಎಸ್ ಅಕಾರಿಗಳನ್ನು ನೇಮಿಸಿರುವುದರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಿದ್ದವು.

ಅದರ ಬಳಿಕ ಎರಡು ಪಕ್ಷಗಳ ನಡುವೆ ಮೈತ್ತಿಯಾಗಲಿವೆ ಎಂಬ ಚರ್ಚೆಗಳಿಗೂ ರೆಕ್ಕೆ-ಪುಕ್ಕ ಬಂದಿತ್ತು. ಅದಕ್ಕೆ ಅನುಗುಣವಾಗಿ ಜೆಡಿಎಸ್ ಜಾತ್ಯತೀತ ನಿಲುವಿನ ರಾಜಕೀಯ ಪಕ್ಷಗಳ ಕೂಟವಾಗಿರುವ ಇಂಡಿಯಾ ಸಭೆಯಿಂದ ದೂರ ಉಳಿದಿತ್ತು. ಅತ್ತ ಬಿಜೆಪಿ ನೇತೃತ್ವದ ಎನ್‍ಡಿಎ ಕೂಟದ ಸಭೆಯಲ್ಲೂ ಜೆಡಿಎಸ್ ಕಾಣಿಸಿಕೊಳ್ಳಲಿಲ್ಲ. ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸಿದ ಜೆಡಿಎಸ್‍ನ ಶಾಸಕರು ಮತ್ತು ಪ್ರಮುಖರು ನಮ್ಮ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್‍ನಿಂದ ಅಂತರ ಕಾಯ್ದುಕೊಳ್ಳಲಿದೆ. ಸಮಾನಾಂತರ ಶಕ್ತಿಯಾಗಿ ಹೋರಾಟ ನಡೆಸಲಿದೆ ಎಂದು ಘೋಷಿಸಿದ್ದರು.

ಆದರೆ ನಂತರದಲ್ಲೂ ತೆರೆಮರೆಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ. ಆಪರೇಷನ್ ಕಮಲಕ್ಕೆ ಪೂರಕವಾಗಿ ಮಾತುಕತೆಗಳಾಗುತ್ತಿವೆ ಎಂಬ ವದಂತಿಗಳಿವೆ. ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು  ಕೂಡ ಖಚಿತ ಪಡಿಸಿದ್ದು, ವಿದೇಶದಲ್ಲಿ ಸರ್ಕಾರದ ಪತನಕ್ಕೆ ಸಂಚು ನಡೆದಿರುವ ಮಾಹಿತಿ ಇದೇ ಎಂದಿದ್ದಾರೆ.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

5 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

6 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

7 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

13 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

20 hours ago