ಬೆಂಗಳೂರು : ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಿಂಗಾಪುರದಲ್ಲಿ ಪಿತೂರಿ ನಡೆಸುತ್ತಿರುವ ಮಾಹಿತಿ ನಮಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು ಸಿಂಗಾಪುರಕ್ಕೆ ಹೋಗುತ್ತಿದ್ದಾರೆ. ಇದೆಲ್ಲದರ ಬಗ್ಗೆಯೂ ನಮಗೆ ಮಾಹಿತಿ ಇದೆ. ಅವರ ತಂತ್ರಗಳೇನು ಎಂಬುದು ಗೊತ್ತಿದೆ ಎಂದರು.
ವಿದೇಶದಲ್ಲಿ ಕಾರ್ಯತಂತ್ರ : ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಾಕಷ್ಟು ಸಂಚುಗಳು ನಡೆಯುತ್ತಿವೆ ಎಂಬ ಅಸಮಧಾನ ಕಾಂಗ್ರೆಸ್ ವಲಯದಲ್ಲಿ ಆತಂಕ ಮೂಡಿಸಿವೆ.
ಇತ್ತೀಚೆಗೆ ಕಾಂಗ್ರೆಸ್ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಸಂಚಲನ ಮೂಡಿಸುತ್ತಿದೆ. ಅದರ ಜತೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಕೆಲ ನಾಯಕರು ಕಾಂಗ್ರೆಸ್ನ ಅತೃಪ್ತ ಮತ್ತು ಅಸಮಾಧಾನಿತ ಶಾಸಕರ ಜತೆ ಸಂಪರ್ಕದಲ್ಲಿರುವುದು ಚರ್ಚೆಗೆ ಗ್ರಾಸವಾಗಿತ್ತು.
ಒಟ್ಟು 138 ಶಾಸಕರ ಸಂಖ್ಯಾಬಲ ಹೊಂದಿರುವ ಸ್ಪಷ್ಟ ಬಹುಮತದ ಸರ್ಕಾರವನ್ನು ಪತನಗೊಳಿಸಲು ಅಸಾಧ್ಯ ಎಂಬ ವಿಶ್ವಾಸದ ನಡುವೆಯೂ ಕೆಲವು ಚಟುವಟಿಕೆಗಳು ಅನುಮಾನ ಹುಟ್ಟಿಸುತ್ತಿವೆ. ಚುನಾವಣಾ ಫಲಿತಾಂಶ ಪ್ರಕಟಗೊಳ್ಳುವ ಸಂದರ್ಭದಲ್ಲಿ ಜೆಡಿಎಸ್ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಆಪ್ತರೊಂದಿಗೆ ಸಿಂಗಾಪುರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.
ರಾಜಕೀಯ ಲೆಕ್ಕಾಚಾರಗಳು ತಲೆಕೆಳಗಾಗಿಸಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದುಕೊಂಡಿತು. ನಂತರದ ಬೆಳವಣಿಗೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪರಸ್ಪರ ಕೈ ಜೋಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಸ್ವರೂಪದ ಹೋರಾಟ ನಡೆಸುತ್ತಿವೆ. ಬೆಂಗಳೂರಿನಲ್ಲಿ ನಡೆದ ಇಂಡಿಯಾ ಸಭೆಯಲ್ಲಿ ಭಾಗವಹಿಸಿದ್ದ ರಾಜಕೀಯ ಪ್ರಮುಖರ ಶಿಷ್ಟಾಚಾರ ಪಾಲನೆಗೆ ಐಎಎಸ್ ಅಕಾರಿಗಳನ್ನು ನೇಮಿಸಿರುವುದರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಿದ್ದವು.
ಅದರ ಬಳಿಕ ಎರಡು ಪಕ್ಷಗಳ ನಡುವೆ ಮೈತ್ತಿಯಾಗಲಿವೆ ಎಂಬ ಚರ್ಚೆಗಳಿಗೂ ರೆಕ್ಕೆ-ಪುಕ್ಕ ಬಂದಿತ್ತು. ಅದಕ್ಕೆ ಅನುಗುಣವಾಗಿ ಜೆಡಿಎಸ್ ಜಾತ್ಯತೀತ ನಿಲುವಿನ ರಾಜಕೀಯ ಪಕ್ಷಗಳ ಕೂಟವಾಗಿರುವ ಇಂಡಿಯಾ ಸಭೆಯಿಂದ ದೂರ ಉಳಿದಿತ್ತು. ಅತ್ತ ಬಿಜೆಪಿ ನೇತೃತ್ವದ ಎನ್ಡಿಎ ಕೂಟದ ಸಭೆಯಲ್ಲೂ ಜೆಡಿಎಸ್ ಕಾಣಿಸಿಕೊಳ್ಳಲಿಲ್ಲ. ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸಿದ ಜೆಡಿಎಸ್ನ ಶಾಸಕರು ಮತ್ತು ಪ್ರಮುಖರು ನಮ್ಮ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಅಂತರ ಕಾಯ್ದುಕೊಳ್ಳಲಿದೆ. ಸಮಾನಾಂತರ ಶಕ್ತಿಯಾಗಿ ಹೋರಾಟ ನಡೆಸಲಿದೆ ಎಂದು ಘೋಷಿಸಿದ್ದರು.
ಆದರೆ ನಂತರದಲ್ಲೂ ತೆರೆಮರೆಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ. ಆಪರೇಷನ್ ಕಮಲಕ್ಕೆ ಪೂರಕವಾಗಿ ಮಾತುಕತೆಗಳಾಗುತ್ತಿವೆ ಎಂಬ ವದಂತಿಗಳಿವೆ. ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೂಡ ಖಚಿತ ಪಡಿಸಿದ್ದು, ವಿದೇಶದಲ್ಲಿ ಸರ್ಕಾರದ ಪತನಕ್ಕೆ ಸಂಚು ನಡೆದಿರುವ ಮಾಹಿತಿ ಇದೇ ಎಂದಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…