ಬೆಂಗಳೂರು : ಶಿವಮೊಗ್ಗವನ್ನು ಮತ್ತೊಂದು ಪಾಕಿಸ್ತಾನ ಮಾಡಲು ಸಂಚು ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ. ಕೋಮು ಶಕ್ತಿಗಳನ್ನು ರಾಜಕೀಯವಾಗಿ ಬಳಸಿಕೊಂಡು ವಿಭಜನೆ ಮಾಡಲು ಪ್ರಯತ್ನ ನಡೆಯುತ್ತಿದೆ. ಇಂತಹ ದೇಶ ವಿರೋಧಿ ಶಕ್ತಿಗಳ ವಿರುದ್ಧ ನಾವೆಲ್ಲ ಒಂದಾಗಿ ನಿಲ್ಲಬೇಕು ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ಹೇಳಿದ್ದಾರೆ.
ಶಿವಮೊಗ್ಗದ ಗಲಭೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗದ ಘಟನೆ ದುರಾದೃಷ್ಟಕರ. ಅಮಾಯಕರನ್ನು ಗುರಿಯಾಗಿಸಿಕೊಂಡು ಗಲಭೆ ಉಂಟು ಮಾಡಬೇಕೆಂಬ ಉದ್ದೇಶ ಪೂರ್ವಯೋಜಿತ ಘಟನೆ ಅನ್ನೋದು ಸ್ಪಷ್ಟವಾಗಿದೆ. ಶಿವಮೊಗ್ಗ ಜಿಲ್ಲೆ ಸೂಕ್ಷ್ಮ ಜಿಲ್ಲೆಯಾಗಿದೆ. ಇದು ಗೊತ್ತಿದ್ದೂ ಅಲ್ಲಿ ಹಿಂದೂಗಳ ಮಾರಣ ಹೋಮ ನಡೆಸಿದವನ ಆರಾಧನೆಗೆ, ಪ್ರತಿಕೃತಿ ಹಾಕುವುದಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸರು ಯಾಕೆ ಅವಕಾಶ ಕೊಟ್ರು? ಶಿವಮೊಗ್ಗದಲ್ಲಿ ನಡೆದಿದ್ದು ಈದ್ ಮೀಲಾದೋ? ಟಿಪ್ಪು ಜಯಂತಿಯೋ? ಔರಂಗಜೇಬ್ ಜಯಂತಿಯೋ? ಎಂದು ಪ್ರಶ್ನೆ ಮಾಡಿದ್ದಾರೆ.
ಟಿಪ್ಪು, ಔರಂಗಜೇಬ್ ಹಿಂದೂಗಳ ಮಾರಣ ಹೋಮ ನಡೆಸಿದವರು. ಟಿಪ್ಪು ಮೈಸೂರು ಒಡೆಯರ್ ಆಡಳಿತ ಪತನ ಮಾಡಿದವನು. ಕನ್ನಡ ಭಾಷೆಯ ಬದಲು, ಪರ್ಶಿಯನ್ ಭಾಷೆ ಆಡಳಿತ ಭಾಷೆಯಾಗಿ ಹೇರಿದವನು. ಅವನನ್ನು ವಿಜೃಂಭಿಸಲು ಅವಕಾಶ ಕೊಟ್ಟಿದ್ದಾರೆ. ಅಲ್ಲದೇ ಹಾಡಹಗಲೇ ತಲ್ವಾರ್ ಹಿಡಿದು ಬೆದರಿಸುವ ಕೆಲಸ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದಾರೆ, ಅಲ್ಲಿ ಹಾಕಿದ್ದ ಜಿಹಾದ್ ಬರವಣಿಗೆಗಳು ಇವೆಲ್ಲವೂ ಪ್ರಚೋದಿಸುವ ಸಂಗತಿಗಳೇ ಆಗಿವೆ. ಇದೆಲ್ಲವನ್ನೂ ಮೊದಲೇ ಜಿಲ್ಲಾಡಳಿತ ತೆರವು ಮಾಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…