ಬೆಂಗಳೂರು : ಶಿವಮೊಗ್ಗವನ್ನು ಮತ್ತೊಂದು ಪಾಕಿಸ್ತಾನ ಮಾಡಲು ಸಂಚು ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ. ಕೋಮು ಶಕ್ತಿಗಳನ್ನು ರಾಜಕೀಯವಾಗಿ ಬಳಸಿಕೊಂಡು ವಿಭಜನೆ ಮಾಡಲು ಪ್ರಯತ್ನ ನಡೆಯುತ್ತಿದೆ. ಇಂತಹ ದೇಶ ವಿರೋಧಿ ಶಕ್ತಿಗಳ ವಿರುದ್ಧ ನಾವೆಲ್ಲ ಒಂದಾಗಿ ನಿಲ್ಲಬೇಕು ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ಹೇಳಿದ್ದಾರೆ.
ಶಿವಮೊಗ್ಗದ ಗಲಭೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗದ ಘಟನೆ ದುರಾದೃಷ್ಟಕರ. ಅಮಾಯಕರನ್ನು ಗುರಿಯಾಗಿಸಿಕೊಂಡು ಗಲಭೆ ಉಂಟು ಮಾಡಬೇಕೆಂಬ ಉದ್ದೇಶ ಪೂರ್ವಯೋಜಿತ ಘಟನೆ ಅನ್ನೋದು ಸ್ಪಷ್ಟವಾಗಿದೆ. ಶಿವಮೊಗ್ಗ ಜಿಲ್ಲೆ ಸೂಕ್ಷ್ಮ ಜಿಲ್ಲೆಯಾಗಿದೆ. ಇದು ಗೊತ್ತಿದ್ದೂ ಅಲ್ಲಿ ಹಿಂದೂಗಳ ಮಾರಣ ಹೋಮ ನಡೆಸಿದವನ ಆರಾಧನೆಗೆ, ಪ್ರತಿಕೃತಿ ಹಾಕುವುದಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸರು ಯಾಕೆ ಅವಕಾಶ ಕೊಟ್ರು? ಶಿವಮೊಗ್ಗದಲ್ಲಿ ನಡೆದಿದ್ದು ಈದ್ ಮೀಲಾದೋ? ಟಿಪ್ಪು ಜಯಂತಿಯೋ? ಔರಂಗಜೇಬ್ ಜಯಂತಿಯೋ? ಎಂದು ಪ್ರಶ್ನೆ ಮಾಡಿದ್ದಾರೆ.
ಟಿಪ್ಪು, ಔರಂಗಜೇಬ್ ಹಿಂದೂಗಳ ಮಾರಣ ಹೋಮ ನಡೆಸಿದವರು. ಟಿಪ್ಪು ಮೈಸೂರು ಒಡೆಯರ್ ಆಡಳಿತ ಪತನ ಮಾಡಿದವನು. ಕನ್ನಡ ಭಾಷೆಯ ಬದಲು, ಪರ್ಶಿಯನ್ ಭಾಷೆ ಆಡಳಿತ ಭಾಷೆಯಾಗಿ ಹೇರಿದವನು. ಅವನನ್ನು ವಿಜೃಂಭಿಸಲು ಅವಕಾಶ ಕೊಟ್ಟಿದ್ದಾರೆ. ಅಲ್ಲದೇ ಹಾಡಹಗಲೇ ತಲ್ವಾರ್ ಹಿಡಿದು ಬೆದರಿಸುವ ಕೆಲಸ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದಾರೆ, ಅಲ್ಲಿ ಹಾಕಿದ್ದ ಜಿಹಾದ್ ಬರವಣಿಗೆಗಳು ಇವೆಲ್ಲವೂ ಪ್ರಚೋದಿಸುವ ಸಂಗತಿಗಳೇ ಆಗಿವೆ. ಇದೆಲ್ಲವನ್ನೂ ಮೊದಲೇ ಜಿಲ್ಲಾಡಳಿತ ತೆರವು ಮಾಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್ಪೋಸ್ಟ್ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…