BREAKING NEWS

ಶಿವಮೊಗ್ಗವನ್ನು ಪಾಕಿಸ್ತಾನ ಮಾಡಲು ಸಂಚು ಮಾಡಿದ್ದಾರೆ : ಸಿ.ಟಿ ರವಿ

ಬೆಂಗಳೂರು : ಶಿವಮೊಗ್ಗವನ್ನು ಮತ್ತೊಂದು ಪಾಕಿಸ್ತಾನ ಮಾಡಲು ಸಂಚು ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ. ಕೋಮು ಶಕ್ತಿಗಳನ್ನು ರಾಜಕೀಯವಾಗಿ ಬಳಸಿಕೊಂಡು ವಿಭಜನೆ ಮಾಡಲು ಪ್ರಯತ್ನ ನಡೆಯುತ್ತಿದೆ. ಇಂತಹ ದೇಶ ವಿರೋಧಿ ಶಕ್ತಿಗಳ ವಿರುದ್ಧ ನಾವೆಲ್ಲ ಒಂದಾಗಿ ನಿಲ್ಲಬೇಕು ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ಹೇಳಿದ್ದಾರೆ.

ಶಿವಮೊಗ್ಗದ ಗಲಭೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗದ ಘಟನೆ ದುರಾದೃಷ್ಟಕರ. ಅಮಾಯಕರನ್ನು ಗುರಿಯಾಗಿಸಿಕೊಂಡು ಗಲಭೆ ಉಂಟು ಮಾಡಬೇಕೆಂಬ ಉದ್ದೇಶ ಪೂರ್ವಯೋಜಿತ ಘಟನೆ ಅನ್ನೋದು ಸ್ಪಷ್ಟವಾಗಿದೆ. ಶಿವಮೊಗ್ಗ ಜಿಲ್ಲೆ ಸೂಕ್ಷ್ಮ ಜಿಲ್ಲೆಯಾಗಿದೆ. ಇದು ಗೊತ್ತಿದ್ದೂ ಅಲ್ಲಿ ಹಿಂದೂಗಳ ಮಾರಣ ಹೋಮ ನಡೆಸಿದವನ ಆರಾಧನೆಗೆ, ಪ್ರತಿಕೃತಿ ಹಾಕುವುದಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸರು ಯಾಕೆ ಅವಕಾಶ ಕೊಟ್ರು? ಶಿವಮೊಗ್ಗದಲ್ಲಿ ನಡೆದಿದ್ದು ಈದ್ ಮೀಲಾದೋ? ಟಿಪ್ಪು ಜಯಂತಿಯೋ? ಔರಂಗಜೇಬ್ ಜಯಂತಿಯೋ? ಎಂದು ಪ್ರಶ್ನೆ ಮಾಡಿದ್ದಾರೆ.

ಟಿಪ್ಪು, ಔರಂಗಜೇಬ್ ಹಿಂದೂಗಳ ಮಾರಣ ಹೋಮ ನಡೆಸಿದವರು. ಟಿಪ್ಪು ಮೈಸೂರು ಒಡೆಯರ್ ಆಡಳಿತ ಪತನ ಮಾಡಿದವನು. ಕನ್ನಡ ಭಾಷೆಯ ಬದಲು, ಪರ್ಶಿಯನ್ ಭಾಷೆ ಆಡಳಿತ ಭಾಷೆಯಾಗಿ ಹೇರಿದವನು. ಅವನನ್ನು ವಿಜೃಂಭಿಸಲು ಅವಕಾಶ ಕೊಟ್ಟಿದ್ದಾರೆ. ಅಲ್ಲದೇ ಹಾಡಹಗಲೇ ತಲ್ವಾರ್ ಹಿಡಿದು ಬೆದರಿಸುವ ಕೆಲಸ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದಾರೆ, ಅಲ್ಲಿ ಹಾಕಿದ್ದ ಜಿಹಾದ್ ಬರವಣಿಗೆಗಳು ಇವೆಲ್ಲವೂ ಪ್ರಚೋದಿಸುವ ಸಂಗತಿಗಳೇ ಆಗಿವೆ. ಇದೆಲ್ಲವನ್ನೂ ಮೊದಲೇ ಜಿಲ್ಲಾಡಳಿತ ತೆರವು ಮಾಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

lokesh

Recent Posts

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

9 mins ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…

27 mins ago

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ಪ್ರಕರಣ ರದ್ದು…

2 hours ago

ಹಾಸನ| ಫೈನಾನ್ಸ್‌ ಸಿಬ್ಬಂದಿ ಕಿರುಕುಳ ಆರೋಪ: ವಿಷ ಕುಡಿದು ರೈತ ಆತ್ಮಹತ್ಯೆ

ಹಾಸನ: ಮನೆ ಸೀಜ್‌ ಮಾಡುವುದಾಗಿ ಫೈನಾನ್ಸ್‌ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…

2 hours ago

ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಹೊತ್ತೊಯ್ದ ಚಿರತೆ

ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…

3 hours ago

4 ಲಕ್ಷ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌

ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…

3 hours ago