BREAKING NEWS

ಶಿವಮೊಗ್ಗವನ್ನು ಪಾಕಿಸ್ತಾನ ಮಾಡಲು ಸಂಚು ಮಾಡಿದ್ದಾರೆ : ಸಿ.ಟಿ ರವಿ

ಬೆಂಗಳೂರು : ಶಿವಮೊಗ್ಗವನ್ನು ಮತ್ತೊಂದು ಪಾಕಿಸ್ತಾನ ಮಾಡಲು ಸಂಚು ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ. ಕೋಮು ಶಕ್ತಿಗಳನ್ನು ರಾಜಕೀಯವಾಗಿ ಬಳಸಿಕೊಂಡು ವಿಭಜನೆ ಮಾಡಲು ಪ್ರಯತ್ನ ನಡೆಯುತ್ತಿದೆ. ಇಂತಹ ದೇಶ ವಿರೋಧಿ ಶಕ್ತಿಗಳ ವಿರುದ್ಧ ನಾವೆಲ್ಲ ಒಂದಾಗಿ ನಿಲ್ಲಬೇಕು ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ಹೇಳಿದ್ದಾರೆ.

ಶಿವಮೊಗ್ಗದ ಗಲಭೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗದ ಘಟನೆ ದುರಾದೃಷ್ಟಕರ. ಅಮಾಯಕರನ್ನು ಗುರಿಯಾಗಿಸಿಕೊಂಡು ಗಲಭೆ ಉಂಟು ಮಾಡಬೇಕೆಂಬ ಉದ್ದೇಶ ಪೂರ್ವಯೋಜಿತ ಘಟನೆ ಅನ್ನೋದು ಸ್ಪಷ್ಟವಾಗಿದೆ. ಶಿವಮೊಗ್ಗ ಜಿಲ್ಲೆ ಸೂಕ್ಷ್ಮ ಜಿಲ್ಲೆಯಾಗಿದೆ. ಇದು ಗೊತ್ತಿದ್ದೂ ಅಲ್ಲಿ ಹಿಂದೂಗಳ ಮಾರಣ ಹೋಮ ನಡೆಸಿದವನ ಆರಾಧನೆಗೆ, ಪ್ರತಿಕೃತಿ ಹಾಕುವುದಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸರು ಯಾಕೆ ಅವಕಾಶ ಕೊಟ್ರು? ಶಿವಮೊಗ್ಗದಲ್ಲಿ ನಡೆದಿದ್ದು ಈದ್ ಮೀಲಾದೋ? ಟಿಪ್ಪು ಜಯಂತಿಯೋ? ಔರಂಗಜೇಬ್ ಜಯಂತಿಯೋ? ಎಂದು ಪ್ರಶ್ನೆ ಮಾಡಿದ್ದಾರೆ.

ಟಿಪ್ಪು, ಔರಂಗಜೇಬ್ ಹಿಂದೂಗಳ ಮಾರಣ ಹೋಮ ನಡೆಸಿದವರು. ಟಿಪ್ಪು ಮೈಸೂರು ಒಡೆಯರ್ ಆಡಳಿತ ಪತನ ಮಾಡಿದವನು. ಕನ್ನಡ ಭಾಷೆಯ ಬದಲು, ಪರ್ಶಿಯನ್ ಭಾಷೆ ಆಡಳಿತ ಭಾಷೆಯಾಗಿ ಹೇರಿದವನು. ಅವನನ್ನು ವಿಜೃಂಭಿಸಲು ಅವಕಾಶ ಕೊಟ್ಟಿದ್ದಾರೆ. ಅಲ್ಲದೇ ಹಾಡಹಗಲೇ ತಲ್ವಾರ್ ಹಿಡಿದು ಬೆದರಿಸುವ ಕೆಲಸ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದಾರೆ, ಅಲ್ಲಿ ಹಾಕಿದ್ದ ಜಿಹಾದ್ ಬರವಣಿಗೆಗಳು ಇವೆಲ್ಲವೂ ಪ್ರಚೋದಿಸುವ ಸಂಗತಿಗಳೇ ಆಗಿವೆ. ಇದೆಲ್ಲವನ್ನೂ ಮೊದಲೇ ಜಿಲ್ಲಾಡಳಿತ ತೆರವು ಮಾಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

lokesh

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

1 hour ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

3 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

4 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

4 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

4 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

8 hours ago