BREAKING NEWS

ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ, ಚಿತ್ರರಂಗಕ್ಕೆ ಸಿಎಂ ಕೊಡುಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿಯ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.

ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಚಿತ್ರನಗರಿ ಕುರಿತು ಈ ಬಾರಿಯೂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಮೈಸೂರಿನಲ್ಲಿ ಚಿತ್ರನಗರಿ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.

2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿ ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ, ಇಲ್ಲಿವರೆಗೂ ಅನುಷ್ಠಾನಗೊಂಡಿಲ್ಲ. ಈ ಬಾರಿ ಮೈಸೂರು ಜಿಲ್ಲೆಯಲ್ಲೇ ಚಿತ್ರನಗರಿ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರವೇ ಮೈಸೂರಿನಲ್ಲಿ ಚಿತ್ರನಗರಿ ಮಾಡುವುದಾಗಿ ತಿಳಿಸಿತ್ತು. ಆ ಘೋಷಣೆಯಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲು ಮತ್ತೆ ಮುಂದಾಗಿದೆ. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಈ ಮೂಲಕ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದಾರೆ.

ಚಿತ್ರಂಗದ ಇತಿಹಾಸವನ್ನು ಸಾರುವಂತಹ ವಸ್ತು ಸಂಗ್ರಹಾಲಯ ಬೇಕು ಎನ್ನುವುದು ಸಿನಿ ಇತಿಹಾಸಕಾರರ ಆಗ್ರಹವಾಗಿತ್ತು. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಇದನ್ನು ಈಡೇರಿಸುವ ಭರವಸೆ ನೀಡಿದ್ದಾರೆ.

ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ವಸ್ತು ಸಂಗ್ರಹಾಲಯದ ಜೊತೆಗೆ ಸುಸಜ್ಜಿತದ ಥಿಯೇಟರ್ ನಿರ್ಮಾಣವಾಗಬೇಕು ಎನ್ನುವುದು ಹಲವರ ಕೋರಿಕೆಯಾಗಿತ್ತು. ಜೊತೆಗೆ ಡಾ.ರಾಜ್ ಕುಮಾರ್ ಅವರ ಕುರಿತಾಗಿಯೇ ವಸ್ತು ಸಂಗ್ರಹಾಲಯ ಇರಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ, ಸಮಗ್ರ ಚಿತ್ರರಂಗವನ್ನು ಒಳಗೊಳ್ಳುವಂತಹ ಸಂಗ್ರಹಾಲಯಕ್ಕೆ ಸಿದ್ದರಾಮಯ್ಯ ಸರಕಾರ ಅಸ್ತು ಎಂದಿದೆ.

ಕರ್ನಾಟಕ ಸರಕಾರ ಕನ್ನಡದ ಸಿನಿಮಾಗಳಿಗೆ ನೀಡುತ್ತಿದ್ದ ಸಹಾಯಧನವನ್ನು ಕಳೆದ ಮೂರು ವರ್ಷಗಳಿಂದ ನೀಡಿರಲಿಲ್ಲ. ನಾನಾ ರೀತಿಯ ಕಾರಣಗಳನ್ನು ಕೊಡುತ್ತಲೇ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿತ್ತು. ಮತ್ತೆ ಸಹಾಯಧನವನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

ಚಿತ್ರಂಗದ ಇತಿಹಾಸವನ್ನು ಸಾರುವಂತಹ ವಸ್ತು ಸಂಗ್ರಹಾಲಯ ಬೇಕು ಎನ್ನುವುದು ಸಿನಿ ಇತಿಹಾಸಕಾರರ ಆಗ್ರಹವಾಗಿತ್ತು. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಇದನ್ನು ಈಡೇರಿಸುವ ಭರವಸೆ ನೀಡಿದ್ದಾರೆ.

ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ವಸ್ತು ಸಂಗ್ರಹಾಲಯದ ಜೊತೆಗೆ ಸುಸಜ್ಜಿತದ ಥಿಯೇಟರ್ ನಿರ್ಮಾಣವಾಗಬೇಕು ಎನ್ನುವುದು ಹಲವರ ಕೋರಿಕೆಯಾಗಿತ್ತು. ಜೊತೆಗೆ ಡಾ.ರಾಜ್ ಕುಮಾರ್ ಅವರ ಕುರಿತಾಗಿಯೇ ವಸ್ತು ಸಂಗ್ರಹಾಲಯ ಇರಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ, ಸಮಗ್ರ ಚಿತ್ರರಂಗವನ್ನು ಒಳಗೊಳ್ಳುವಂತಹ ಸಂಗ್ರಹಾಲಯಕ್ಕೆ ಸಿದ್ದರಾಮಯ್ಯ ಸರಕಾರ ಅಸ್ತು ಎಂದಿದೆ.

ಕರ್ನಾಟಕ ಸರಕಾರ ಕನ್ನಡದ ಸಿನಿಮಾಗಳಿಗೆ ನೀಡುತ್ತಿದ್ದ ಸಹಾಯಧನವನ್ನು ಕಳೆದ ಮೂರು ವರ್ಷಗಳಿಂದ ನೀಡಿರಲಿಲ್ಲ. ನಾನಾ ರೀತಿಯ ಕಾರಣಗಳನ್ನು ಕೊಡುತ್ತಲೇ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿತ್ತು. ಮತ್ತೆ ಸಹಾಯಧನವನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

andolanait

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

8 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

8 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

8 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

8 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

10 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

11 hours ago