BREAKING NEWS

ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ, ಚಿತ್ರರಂಗಕ್ಕೆ ಸಿಎಂ ಕೊಡುಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿಯ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.

ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಚಿತ್ರನಗರಿ ಕುರಿತು ಈ ಬಾರಿಯೂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಮೈಸೂರಿನಲ್ಲಿ ಚಿತ್ರನಗರಿ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.

2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿ ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ, ಇಲ್ಲಿವರೆಗೂ ಅನುಷ್ಠಾನಗೊಂಡಿಲ್ಲ. ಈ ಬಾರಿ ಮೈಸೂರು ಜಿಲ್ಲೆಯಲ್ಲೇ ಚಿತ್ರನಗರಿ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರವೇ ಮೈಸೂರಿನಲ್ಲಿ ಚಿತ್ರನಗರಿ ಮಾಡುವುದಾಗಿ ತಿಳಿಸಿತ್ತು. ಆ ಘೋಷಣೆಯಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲು ಮತ್ತೆ ಮುಂದಾಗಿದೆ. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಈ ಮೂಲಕ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದಾರೆ.

ಚಿತ್ರಂಗದ ಇತಿಹಾಸವನ್ನು ಸಾರುವಂತಹ ವಸ್ತು ಸಂಗ್ರಹಾಲಯ ಬೇಕು ಎನ್ನುವುದು ಸಿನಿ ಇತಿಹಾಸಕಾರರ ಆಗ್ರಹವಾಗಿತ್ತು. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಇದನ್ನು ಈಡೇರಿಸುವ ಭರವಸೆ ನೀಡಿದ್ದಾರೆ.

ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ವಸ್ತು ಸಂಗ್ರಹಾಲಯದ ಜೊತೆಗೆ ಸುಸಜ್ಜಿತದ ಥಿಯೇಟರ್ ನಿರ್ಮಾಣವಾಗಬೇಕು ಎನ್ನುವುದು ಹಲವರ ಕೋರಿಕೆಯಾಗಿತ್ತು. ಜೊತೆಗೆ ಡಾ.ರಾಜ್ ಕುಮಾರ್ ಅವರ ಕುರಿತಾಗಿಯೇ ವಸ್ತು ಸಂಗ್ರಹಾಲಯ ಇರಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ, ಸಮಗ್ರ ಚಿತ್ರರಂಗವನ್ನು ಒಳಗೊಳ್ಳುವಂತಹ ಸಂಗ್ರಹಾಲಯಕ್ಕೆ ಸಿದ್ದರಾಮಯ್ಯ ಸರಕಾರ ಅಸ್ತು ಎಂದಿದೆ.

ಕರ್ನಾಟಕ ಸರಕಾರ ಕನ್ನಡದ ಸಿನಿಮಾಗಳಿಗೆ ನೀಡುತ್ತಿದ್ದ ಸಹಾಯಧನವನ್ನು ಕಳೆದ ಮೂರು ವರ್ಷಗಳಿಂದ ನೀಡಿರಲಿಲ್ಲ. ನಾನಾ ರೀತಿಯ ಕಾರಣಗಳನ್ನು ಕೊಡುತ್ತಲೇ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿತ್ತು. ಮತ್ತೆ ಸಹಾಯಧನವನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

ಚಿತ್ರಂಗದ ಇತಿಹಾಸವನ್ನು ಸಾರುವಂತಹ ವಸ್ತು ಸಂಗ್ರಹಾಲಯ ಬೇಕು ಎನ್ನುವುದು ಸಿನಿ ಇತಿಹಾಸಕಾರರ ಆಗ್ರಹವಾಗಿತ್ತು. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಇದನ್ನು ಈಡೇರಿಸುವ ಭರವಸೆ ನೀಡಿದ್ದಾರೆ.

ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ವಸ್ತು ಸಂಗ್ರಹಾಲಯದ ಜೊತೆಗೆ ಸುಸಜ್ಜಿತದ ಥಿಯೇಟರ್ ನಿರ್ಮಾಣವಾಗಬೇಕು ಎನ್ನುವುದು ಹಲವರ ಕೋರಿಕೆಯಾಗಿತ್ತು. ಜೊತೆಗೆ ಡಾ.ರಾಜ್ ಕುಮಾರ್ ಅವರ ಕುರಿತಾಗಿಯೇ ವಸ್ತು ಸಂಗ್ರಹಾಲಯ ಇರಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ, ಸಮಗ್ರ ಚಿತ್ರರಂಗವನ್ನು ಒಳಗೊಳ್ಳುವಂತಹ ಸಂಗ್ರಹಾಲಯಕ್ಕೆ ಸಿದ್ದರಾಮಯ್ಯ ಸರಕಾರ ಅಸ್ತು ಎಂದಿದೆ.

ಕರ್ನಾಟಕ ಸರಕಾರ ಕನ್ನಡದ ಸಿನಿಮಾಗಳಿಗೆ ನೀಡುತ್ತಿದ್ದ ಸಹಾಯಧನವನ್ನು ಕಳೆದ ಮೂರು ವರ್ಷಗಳಿಂದ ನೀಡಿರಲಿಲ್ಲ. ನಾನಾ ರೀತಿಯ ಕಾರಣಗಳನ್ನು ಕೊಡುತ್ತಲೇ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿತ್ತು. ಮತ್ತೆ ಸಹಾಯಧನವನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago