ಮಾಗಡಿ : ರಾಜ್ಯದಲ್ಲಿ 3,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡುವ ಶಿಕ್ಷಣ ಕ್ರಾಂತಿಗೆ ಕೆಂಪೇಗೌಡರ ಮಾಗಡಿಯಿಂದ ಚಾಲನೆ ದೊರೆತಿದೆ ಎಂದು ಡಿಸಿಎಂ ಡಿ.ಕೆ,ಶಿವಕುಮಾರ್ ಅವರು ಅಭಿಪ್ರಾಯ ಪಟ್ಟರು.
ಕುದೂರಿನಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು “ನಗರ ಪ್ರದೇಶಗಳಿಗೆ ಶಿಕ್ಷಣಕ್ಕಾಗಿ ವಲಸೆ ಹೋಗುವುದು ತಪ್ಪಬೇಕು. ಪ್ರತಿ ಪಂಚಾಯಿತಿಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಕಟ್ಟಬೇಕು ಎಂಬುದು ನನ್ನ ಕನಸಾಗಿದೆ. ಆದಷ್ಟು ಬೇಗ ಇದನ್ನು ಕಾರ್ಯಗತ ಮಾಡಲಿದ್ದೇವೆ” ಎಂದು ಹೇಳಿದರು.
ಕುದೂರಿನಂತಹ ಗ್ರಾಮೀಣ ಭಾಗದಲ್ಲಿ ಸುಮಾರು 16 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಶಾಲೆ ನಿರ್ಮಾಣ ಮಾಡಲು ಹೊರಟಿರುವುದು ಕ್ರಾಂತಿಕಾರಿ ಆಲೋಚನೆ. ಇಂತಹ ಸುಸಜ್ಜಿತ ಶಾಲೆ ನಿರ್ಮಾಣ ಮಾಡಲು ಹೊರಟಿರುವ ಟೊಯೋಟೊ ಕಿರ್ಲೋಸ್ಕರ್ ಸಂಸ್ಥೆಗೆ ನಾವೆಲ್ಲಾ ಅಭಾರಿಯಾಗಿರುತ್ತೇವೆ. ಈ ಸಂಸ್ಥೆಯವರು ರಾಮನಗರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ಒಂದೊಂದು ಶಾಲೆ ನಿರ್ಮಾಣ ಮಾಡುವುದಾಗಿ ಮಾತುಕೊಟ್ಟಿದ್ದಾರೆ ಎಂದರು.
ರಾಮನಗರ ಜಿಲ್ಲೆಯಲ್ಲಿ ಇರುವ ಎಲ್ಲಾ ಕೈಗಾರಿಕೆಗಳ ಸಿಎಸ್ಆರ್ ಹಣವನ್ನು ಶಿಕ್ಷಣಕ್ಕೆ ಮಾತ್ರ ಬಳಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸುಮಾರು 36 ಕೋಟಿಯಷ್ಟು ಹಣ ಈಗಾಗಲೇ ಈ ಅನುದಾನದ ಅಡಿಯಲ್ಲಿ ಬಳಕೆಗೆ ಬಂದಿದೆ ಎಂದು ಹೇಳಿದರು.
https://x.com/DKShivakumar/status/1710246218322849870?s=20
ಕಣ್ಣು ಚೆನಾಗಿದ್ದರೆ ನೋಟ ಚೆನ್ನಾಗಿರುತ್ತದೆ. ನಾಲಿಗೆ, ನಡತೆ ಚೆನ್ನಾಗಿದ್ದರೆ ಇಡೀ ಜಗತ್ತೇ ನಮ್ಮನ್ನು ಹಿಂಬಾಲಿಸುತ್ತದೆ, ಇದಕ್ಕೆ ಶಿಕ್ಷಣ ಅತ್ಯಗತ್ಯ. ಸಮಯ ನಿಲ್ಲುವುದಿಲ್ಲ, ಆಡಿದ ಮಾತು ಮತ್ತೆ ಮರಳಿ ಬರುವುದಿಲ್ಲ, ಆದ ಕಾರಣ ವಿದ್ಯೆ ಕಲಿಯುವ ವಯಸ್ಸು ಕಳೆದು ಹೋದರೆ ಮತ್ತೆ ದೊರೆಯುವುದಿಲ್ಲ. ವಿದ್ಯಾರ್ಥಿ ಜೀವನದಲ್ಲಿ ಎಷ್ಟು ಕಲಿಯಲು ಸಾಧ್ಯವೋ ಅಷ್ಟು ಕಲಿಯಬೇಕು. ನಿಮ್ಮ ತಂದೆ- ತಾಯಿ ಕನಸು ಕಂಡಿರುತ್ತಾರೆ, ಆ ಕನಸಿಗೆ ನೀವು ಸಹಕಾರಿಯಾಗಿ ಬೆಳೆಯಬೇಕು If you forget the route, you will not get the Fruit ಎಂದು ನೆರೆದಿದ್ದ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಶ್ರೀರಂಗ ನೀರಾವರಿ ಯೋಜನೆಗೆ ಮರುಜೀವ:ಜಿಲ್ಲೆಯ ಶ್ರೀರಂಗ ನೀರಾವರಿ ಯೋಜನೆಗೆ ಮತ್ತೆ ಮರುಜೀವ ನೀಡಲಿದ್ದು, ಕೃಷಿ ಹಾಗೂ ಕುಡಿಯುವ ನೀರಿನ ಕೊರತೆಯನ್ನು ಶೀಘ್ರ ಬಗೆಹರಿಸಲಿದ್ದೇವೆ. ಸಂಸದರಾದ ಡಿ.ಕೆ.ಸುರೇಶ್ ಮತ್ತು ಶಾಸಕ ಬಾಲಕೃಷ್ಣ ಅವರು ಕ್ಷೇತ್ರದ ಅನೇಕ ಯೋಜನೆ ಹಾಗೂ ಸಮಸ್ಯೆಗಳ ಗಮನ ಸೆಳೆದಿದ್ದಾರೆ. ಮುಖ್ಯವಾಗಿ ಬಗರ್ಹುಕುಂ ಜಮೀನುಗಳ ಬಗ್ಗೆ ಶೀಘ್ರ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.
ಗೃಹಲಕ್ಷ್ಮೀ ತಾಂತ್ರಿಕ ಸಮಸ್ಯೆ ಶೀಘ್ರ ಪರಿಹಾರ: ಶೇ 88 ರಷ್ಟು ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಹಣ ತಲುಪಿದೆ. ಮಿಕ್ಕ ಅರ್ಜಿದಾರರಿಗೆ ಬ್ಯಾಂಕ್ ಖಾತೆ ಸಮಸ್ಯೆಯಿಂದ ಹಣ ತಲುಪಿಲ್ಲ ಈ ಸಮಸ್ಯೆಯನ್ನು ಬೇಗ ಬಗೆಹರಿಸಲಾಗುವುದು. ಬೆಲೆ ಏರಿಕೆಯಿಂದ ನಮ್ಮ ಗ್ರಾಮೀಣ ಪ್ರದೇಶದ ಜನರು ತತ್ತರಿಸಿ ಹೋಗಿದ್ದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ವಲ್ಪ ಉಸಿರಾಡುವಂತೆ ಮಾಡಿವೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2,58,000 ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯ ಹಣ ತಲುಪಿಸಿದ್ದೇವೆ. ಗೃಹಲಕ್ಷ್ಮೀ ಯೋಜನೆಯ 2,000 ಹಣವನ್ನು ಮಹಿಳೆಯರೇ ನಿಮ್ಮ ಗಂಡಂದಿರಿಗೆ ನೀಡಬೇಡಿ. ಉಳಿತಾಯ ಮಾಡಿ, ಮಕ್ಕಳ ಭವಿಷ್ಯಕ್ಕೆ ಬಳಸಿಕೊಳ್ಳಿ ಎಂದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…