ಬಾಗಲಕೋಟೆ: ಸಾಲ ಪಡೆದು ವಾಹನ ಖರೀದಿಸಿದಾಗ ಕಂತು ಕಟ್ಟಿಲ್ಲ ಎಂದು ನೋಟಿಸ್ ನೀಡದೆ ವಾಹನ ಜಪ್ತಿ ಮಾಡಿದ್ದಕ್ಕೆ ಜಿಲ್ಲಾ ಗಾಹಕರ ಆಯೋಗ ದಂಡ ವಿಧಿಸಿದೆ.
ಪ್ರಕರಣದ ವಿವರ: ಮುಧೋಳ ತಾಲ್ಲೂಕಿನ ಭಂಟನೂರ ಗ್ರಾಮದ ಕಲ್ಲಪ್ಪ ಕುಂಬಾರ ಎಂಬುವರು ಜೀವನೋಪಾಯ ಸಲುವಾಗಿ 2018ರಲ್ಲಿ ಮುಧೋಳ ಐಡಿಎಫ್ಸಿ ಬ್ಯಾಂಕಿನಲ್ಲಿ ₹5,88,703 ಸಾಲ ಮಾಡಿ ಗೂಡ್ಸ್ ಗಾಡಿ ಖರೀದಿಸಿರುತ್ತಾರೆ. ಕಂತುಗಳನ್ನು ಸರಿಯಾಗಿ ಕಟ್ಟುತ್ತಾ ಇರುತ್ತಾರೆ.
ಕೋವಿಡ್ ಸಂದರ್ಭದಲ್ಲಿ ಕಂತು ಕಟ್ಟಲು ಕಷ್ಟವಾಗಿದೆ. ಬ್ಯಾಂಕಿನವರ ಒತ್ತಡದಿಂದಾಗಿ ಅಲ್ಲಿ, ಇಲ್ಲಿ ಹಣ ಹೊಂದಿಸಿ 2021 ನವೆಂಬರ್ವರೆಗೆ ಕಂತುಗಳನ್ನು ಕಟ್ಟುತ್ತಾರೆ. 2021 ಡಿಸೆಂಬರ್ ನಲ್ಲಿ ಬ್ಯಾಂಕಿನವರು ನೋಟಿಸ್ ನೀಡದೆ ವಾಹನ ಜಪ್ತಿ ಮಾಡುತ್ತಾರೆ. ಬಾಕಿ ಮೊತ್ತ ₹3,86,907 ತುಂಬುವಂತೆ ನೋಟಿಸ್ ನೀಡಿದ್ದಾರೆ. 2022 ಫೆಬ್ರವರಿಯಲ್ಲಿ ದೂರುದಾರರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಸರಿಯಾಗಿ ಸ್ಪಂದಿಸದೆ ಬಾಗಲಕೋಟೆ ಪ್ರಧಾನ ಕಚೇರಿಗೆ ಕಳುಹಿಸುತ್ತಾರೆ. ಅಲ್ಲಿಯೂ ಸರಿಯಾಗಿ ಮಾಹಿತಿ ಕೊಡದೆ ಹುಬ್ಬಳ್ಳಿ ಕಚೇರಿಗೆ ಹೋಗಲು ತಿಳಿಸುತ್ತಾರೆ.
ಬ್ಯಾಂಕ್ ಅಧಿಕಾರಿ ಮೌಖಿಕವಾಗಿ ಸದರಿ ವಾಹನವನ್ನು ಬೇರೆಯವರಿಗೆ ಮಾರಾಟ ಮಾಡಿದ್ದಾಗಿ ತಿಳಿಸುತ್ತಾರೆ. ಬೇರೆಯವರಿಗೆ ಮಾರಾಟ ಮಾಡಿದ್ದರೂ ಮಾಲೀಕತ್ವ ವರ್ಗಾವಣೆ ಮಾಡದೆ ವಾಹನ ಇನ್ನೂ ತನ್ನ ಹೆಸರಿನಲ್ಲಿ ಓಡಾಡುತ್ತಿರುವುದು ಗಮನಕ್ಕೆ ಬರುತ್ತದೆ. ಈ ನಡುವೆ ಮಾಲೀಕತ್ವ ವರ್ಗಾವಣೆ ಸಲುವಾಗಿ ಜಮಖಂಡಿ ಆರ್.ಟಿ.ಒ ನೋಟಿಸ್ ನೀಡುತ್ತಾರೆ.
ವಾಹನವನ್ನು ತನಗೆ ನೋಟಿಸ್ ನೀಡದೆ ಜಪ್ತಿ ಮಾಡಿದ್ದು ಅಲ್ಲದೆ ಬೇರೆಯವರಿಗೆ ಮಾರಾಟ ಮಾಡಿದ್ದೀರಿ. ಹೆಸರು ವರ್ಗಾವಣೆ ತಕಾರು ಸಲ್ಲಿಸಿ, ವಾಹನ ತನಗೆ ಕೊಡಬೇಕು ಎಂದು ಬ್ಯಾಂಕಿನವರಿಗೆ ಕೇಳುತ್ತಾರೆ. ಬ್ಯಾಂಕಿನವರು ಸರಿಯಾಗ ಸ್ಪಂದಿಸದ ಕಾರಣ ಜಿಲ್ಲಾ ಗಾಹಕರ ಆಯೋಗಕ್ಕೆ ದೂರು ನೀಡುತ್ತಾರೆ.
ದೂರುದಾರರಿಗೆ ಸಾಲ ತೀರಿದ ಪ್ರಮಾಣ ಪತ್ರ ಕೊಡಬೇಕು. ದೂರುದಾರರು ಹೆಸರು ವರ್ಗಾವಣೆಗೆ ನಿರಾಪೇಕ್ಷಣ ಪತ್ರ ಕೊಡಬೇಕು ಎಂದೂ ಆದೇಶದಲ್ಲಿ ತಿಳಿಸಿದೆ.
ದಾವಾ ವೆಚ್ಚ ₹2 ಸಾವಿರ
ನೋಟಿಸ್ ನೀಡದೆ ವಾಹನ ಜಪ್ತಿ ಮಾಡಿ, ವಾಹನ ಮಾಲೀಕರಿಗೆ ತಿಳಿಸದೆ ಮಾರಾಟ ಮಾಡಿದ್ದು ಅನುಚಿತ ವ್ಯಾಪಾರ ಪದ್ಧತಿ ಎಂದು ತೀರ್ಮಾನಿಸಿ ಅಧ್ಯಕ್ಷ ವಿಜಯಕುಮಾರ ಪಾವಲೆ, ಸದಸ್ಯರುಗಳಾದ ರಂಗನಗೌಡ ದಂಡಣ್ಣವರ ಹಾಗೂ ಸಮಿವುನ್ನೀಸಾ ಅಬ್ರಾರ ಅವರಿದ್ದ ನ್ಯಾಯಪೀಠವು ದೂರುದಾರರಿಗೆ ದೂರು ದಾಖಲಿಸಿದ ದಿನದಿಂದ ಶೇ6ರ ಬಡ್ಡಿ ಸಮೇತ ₹50 ಸಾವಿರ ಪರಿಹಾರವನ್ನು 45 ದಿನಗಳಲ್ಲಿ ನೀಡಬೇಕು. ತಪ್ಪಿದಲ್ಲಿ ಶೇ9ರಂತೆ ಬಡ್ಡಿ ಸಮೇತ ಕೊಡಬೇಕು. ಅಲ್ಲೆ ಮಾನಸಿಕ ವ್ಯಥೆಗೆ ₹5 ಸಾವಿರ, ದಾವಾ ವೆಚ್ಚ ₹2 ಸಾವಿರ ನೀಡಬೇಕು ಎಂದು ಆದೇಶ ಹೊರಡಿಸಿದೆ.
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…
ಮೈಸೂರು: ಬೇಸಿಗೆ ಕಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ…
ಬೆಂಗಳೂರು: ಕೆ.ಆರ್.ಪುರಂ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ. ಬಿಕ್ಲು…
ಬೆಂಗಳೂರು: ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್…