BREAKING NEWS

ನೋಟಿಸ್ ನೀಡದೆ ವಾಹನ ಜಪ್ತಿ ಮಾಡಿ ಬ್ಯಾಂಕ್‌ಗೆ ದಂಡ ವಿಧಿಸಿದ ಗ್ರಾಹಕರ ಆಯೋಗ

ಬಾಗಲಕೋಟೆ: ಸಾಲ ಪಡೆದು ವಾಹನ ಖರೀದಿಸಿದಾಗ ಕಂತು ಕಟ್ಟಿಲ್ಲ ಎಂದು ನೋಟಿಸ್‌ ನೀಡದೆ ವಾಹನ ಜಪ್ತಿ ಮಾಡಿದ್ದಕ್ಕೆ ಜಿಲ್ಲಾ ಗಾಹಕರ ಆಯೋಗ ದಂಡ ವಿಧಿಸಿದೆ.

ಪ್ರಕರಣದ ವಿವರ: ಮುಧೋಳ ತಾಲ್ಲೂಕಿನ ಭಂಟನೂರ ಗ್ರಾಮದ ಕಲ್ಲಪ್ಪ ಕುಂಬಾರ ಎಂಬುವರು ಜೀವನೋಪಾಯ ಸಲುವಾಗಿ 2018ರಲ್ಲಿ ಮುಧೋಳ ಐಡಿಎಫ್‌ಸಿ ಬ್ಯಾಂಕಿನಲ್ಲಿ ₹5,88,703 ಸಾಲ ಮಾಡಿ ಗೂಡ್ಸ್ ಗಾಡಿ ಖರೀದಿಸಿರುತ್ತಾರೆ. ಕಂತುಗಳನ್ನು ಸರಿಯಾಗಿ ಕಟ್ಟುತ್ತಾ ಇರುತ್ತಾರೆ.

ಕೋವಿಡ್ ಸಂದರ್ಭದಲ್ಲಿ ಕಂತು ಕಟ್ಟಲು ಕಷ್ಟವಾಗಿದೆ. ಬ್ಯಾಂಕಿನವರ ಒತ್ತಡದಿಂದಾಗಿ ಅಲ್ಲಿ, ಇಲ್ಲಿ ಹಣ ಹೊಂದಿಸಿ 2021 ನವೆಂಬರ್‌ವರೆಗೆ ಕಂತುಗಳನ್ನು ಕಟ್ಟುತ್ತಾರೆ. 2021 ಡಿಸೆಂಬರ್ ನಲ್ಲಿ ಬ್ಯಾಂಕಿನವರು ನೋಟಿಸ್‌ ನೀಡದೆ ವಾಹನ ಜಪ್ತಿ ಮಾಡುತ್ತಾರೆ. ಬಾಕಿ ಮೊತ್ತ ₹3,86,907 ತುಂಬುವಂತೆ ನೋಟಿಸ್‌ ನೀಡಿದ್ದಾರೆ. 2022 ಫೆಬ್ರವರಿಯಲ್ಲಿ ದೂರುದಾರರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಸರಿಯಾಗಿ ಸ್ಪಂದಿಸದೆ ಬಾಗಲಕೋಟೆ ಪ್ರಧಾನ ಕಚೇರಿಗೆ ಕಳುಹಿಸುತ್ತಾರೆ. ಅಲ್ಲಿಯೂ ಸರಿಯಾಗಿ ಮಾಹಿತಿ ಕೊಡದೆ ಹುಬ್ಬಳ್ಳಿ ಕಚೇರಿಗೆ ಹೋಗಲು ತಿಳಿಸುತ್ತಾರೆ.

ಬ್ಯಾಂಕ್ ಅಧಿಕಾರಿ ಮೌಖಿಕವಾಗಿ ಸದರಿ ವಾಹನವನ್ನು ಬೇರೆಯವರಿಗೆ ಮಾರಾಟ ಮಾಡಿದ್ದಾಗಿ ತಿಳಿಸುತ್ತಾರೆ. ಬೇರೆಯವರಿಗೆ ಮಾರಾಟ ಮಾಡಿದ್ದರೂ ಮಾಲೀಕತ್ವ ವರ್ಗಾವಣೆ ಮಾಡದೆ ವಾಹನ ಇನ್ನೂ ತನ್ನ ಹೆಸರಿನಲ್ಲಿ ಓಡಾಡುತ್ತಿರುವುದು ಗಮನಕ್ಕೆ ಬರುತ್ತದೆ. ಈ ನಡುವೆ ಮಾಲೀಕತ್ವ ವರ್ಗಾವಣೆ ಸಲುವಾಗಿ ಜಮಖಂಡಿ ಆರ್.ಟಿ.ಒ ನೋಟಿಸ್ ನೀಡುತ್ತಾರೆ.

ವಾಹನವನ್ನು ತನಗೆ ನೋಟಿಸ್ ನೀಡದೆ ಜಪ್ತಿ ಮಾಡಿದ್ದು ಅಲ್ಲದೆ ಬೇರೆಯವರಿಗೆ ಮಾರಾಟ ಮಾಡಿದ್ದೀರಿ. ಹೆಸರು ವರ್ಗಾವಣೆ ತಕಾರು ಸಲ್ಲಿಸಿ, ವಾಹನ ತನಗೆ ಕೊಡಬೇಕು ಎಂದು ಬ್ಯಾಂಕಿನವರಿಗೆ ಕೇಳುತ್ತಾರೆ. ಬ್ಯಾಂಕಿನವರು ಸರಿಯಾಗ ಸ್ಪಂದಿಸದ ಕಾರಣ ಜಿಲ್ಲಾ ಗಾಹಕರ ಆಯೋಗಕ್ಕೆ ದೂರು ನೀಡುತ್ತಾರೆ‌.

ದೂರುದಾರರಿಗೆ ಸಾಲ ತೀರಿದ ಪ್ರಮಾಣ ಪತ್ರ ಕೊಡಬೇಕು. ದೂರುದಾರರು ಹೆಸರು ವರ್ಗಾವಣೆಗೆ ನಿರಾಪೇಕ್ಷಣ ಪತ್ರ ಕೊಡಬೇಕು ಎಂದೂ ಆದೇಶದಲ್ಲಿ ತಿಳಿಸಿದೆ.

ದಾವಾ ವೆಚ್ಚ ₹2 ಸಾವಿರ

ನೋಟಿಸ್‌ ನೀಡದೆ ವಾಹನ ಜಪ್ತಿ ಮಾಡಿ, ವಾಹನ ಮಾಲೀಕರಿಗೆ ತಿಳಿಸದೆ ಮಾರಾಟ ಮಾಡಿದ್ದು ಅನುಚಿತ ವ್ಯಾಪಾರ ಪದ್ಧತಿ ಎಂದು ತೀರ್ಮಾನಿಸಿ ಅಧ್ಯಕ್ಷ ವಿಜಯಕುಮಾರ ಪಾವಲೆ, ಸದಸ್ಯರುಗಳಾದ ರಂಗನಗೌಡ ದಂಡಣ್ಣವರ ಹಾಗೂ ಸಮಿವುನ್ನೀಸಾ ಅಬ್ರಾರ ಅವರಿದ್ದ ನ್ಯಾಯಪೀಠವು ದೂರುದಾರರಿಗೆ ದೂರು ದಾಖಲಿಸಿದ ದಿನದಿಂದ ಶೇ6ರ ಬಡ್ಡಿ ಸಮೇತ ₹50 ಸಾವಿರ ಪರಿಹಾರವನ್ನು 45 ದಿನಗಳಲ್ಲಿ ನೀಡಬೇಕು. ತಪ್ಪಿದಲ್ಲಿ ಶೇ9ರಂತೆ ಬಡ್ಡಿ ಸಮೇತ ಕೊಡಬೇಕು. ಅಲ್ಲೆ ಮಾನಸಿಕ ವ್ಯಥೆಗೆ ₹5 ಸಾವಿರ, ದಾವಾ ವೆಚ್ಚ ₹2 ಸಾವಿರ ನೀಡಬೇಕು ಎಂದು ಆದೇಶ ಹೊರಡಿಸಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago