BREAKING NEWS

ನೋಟಿಸ್ ನೀಡದೆ ವಾಹನ ಜಪ್ತಿ ಮಾಡಿ ಬ್ಯಾಂಕ್‌ಗೆ ದಂಡ ವಿಧಿಸಿದ ಗ್ರಾಹಕರ ಆಯೋಗ

ಬಾಗಲಕೋಟೆ: ಸಾಲ ಪಡೆದು ವಾಹನ ಖರೀದಿಸಿದಾಗ ಕಂತು ಕಟ್ಟಿಲ್ಲ ಎಂದು ನೋಟಿಸ್‌ ನೀಡದೆ ವಾಹನ ಜಪ್ತಿ ಮಾಡಿದ್ದಕ್ಕೆ ಜಿಲ್ಲಾ ಗಾಹಕರ ಆಯೋಗ ದಂಡ ವಿಧಿಸಿದೆ.

ಪ್ರಕರಣದ ವಿವರ: ಮುಧೋಳ ತಾಲ್ಲೂಕಿನ ಭಂಟನೂರ ಗ್ರಾಮದ ಕಲ್ಲಪ್ಪ ಕುಂಬಾರ ಎಂಬುವರು ಜೀವನೋಪಾಯ ಸಲುವಾಗಿ 2018ರಲ್ಲಿ ಮುಧೋಳ ಐಡಿಎಫ್‌ಸಿ ಬ್ಯಾಂಕಿನಲ್ಲಿ ₹5,88,703 ಸಾಲ ಮಾಡಿ ಗೂಡ್ಸ್ ಗಾಡಿ ಖರೀದಿಸಿರುತ್ತಾರೆ. ಕಂತುಗಳನ್ನು ಸರಿಯಾಗಿ ಕಟ್ಟುತ್ತಾ ಇರುತ್ತಾರೆ.

ಕೋವಿಡ್ ಸಂದರ್ಭದಲ್ಲಿ ಕಂತು ಕಟ್ಟಲು ಕಷ್ಟವಾಗಿದೆ. ಬ್ಯಾಂಕಿನವರ ಒತ್ತಡದಿಂದಾಗಿ ಅಲ್ಲಿ, ಇಲ್ಲಿ ಹಣ ಹೊಂದಿಸಿ 2021 ನವೆಂಬರ್‌ವರೆಗೆ ಕಂತುಗಳನ್ನು ಕಟ್ಟುತ್ತಾರೆ. 2021 ಡಿಸೆಂಬರ್ ನಲ್ಲಿ ಬ್ಯಾಂಕಿನವರು ನೋಟಿಸ್‌ ನೀಡದೆ ವಾಹನ ಜಪ್ತಿ ಮಾಡುತ್ತಾರೆ. ಬಾಕಿ ಮೊತ್ತ ₹3,86,907 ತುಂಬುವಂತೆ ನೋಟಿಸ್‌ ನೀಡಿದ್ದಾರೆ. 2022 ಫೆಬ್ರವರಿಯಲ್ಲಿ ದೂರುದಾರರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಸರಿಯಾಗಿ ಸ್ಪಂದಿಸದೆ ಬಾಗಲಕೋಟೆ ಪ್ರಧಾನ ಕಚೇರಿಗೆ ಕಳುಹಿಸುತ್ತಾರೆ. ಅಲ್ಲಿಯೂ ಸರಿಯಾಗಿ ಮಾಹಿತಿ ಕೊಡದೆ ಹುಬ್ಬಳ್ಳಿ ಕಚೇರಿಗೆ ಹೋಗಲು ತಿಳಿಸುತ್ತಾರೆ.

ಬ್ಯಾಂಕ್ ಅಧಿಕಾರಿ ಮೌಖಿಕವಾಗಿ ಸದರಿ ವಾಹನವನ್ನು ಬೇರೆಯವರಿಗೆ ಮಾರಾಟ ಮಾಡಿದ್ದಾಗಿ ತಿಳಿಸುತ್ತಾರೆ. ಬೇರೆಯವರಿಗೆ ಮಾರಾಟ ಮಾಡಿದ್ದರೂ ಮಾಲೀಕತ್ವ ವರ್ಗಾವಣೆ ಮಾಡದೆ ವಾಹನ ಇನ್ನೂ ತನ್ನ ಹೆಸರಿನಲ್ಲಿ ಓಡಾಡುತ್ತಿರುವುದು ಗಮನಕ್ಕೆ ಬರುತ್ತದೆ. ಈ ನಡುವೆ ಮಾಲೀಕತ್ವ ವರ್ಗಾವಣೆ ಸಲುವಾಗಿ ಜಮಖಂಡಿ ಆರ್.ಟಿ.ಒ ನೋಟಿಸ್ ನೀಡುತ್ತಾರೆ.

ವಾಹನವನ್ನು ತನಗೆ ನೋಟಿಸ್ ನೀಡದೆ ಜಪ್ತಿ ಮಾಡಿದ್ದು ಅಲ್ಲದೆ ಬೇರೆಯವರಿಗೆ ಮಾರಾಟ ಮಾಡಿದ್ದೀರಿ. ಹೆಸರು ವರ್ಗಾವಣೆ ತಕಾರು ಸಲ್ಲಿಸಿ, ವಾಹನ ತನಗೆ ಕೊಡಬೇಕು ಎಂದು ಬ್ಯಾಂಕಿನವರಿಗೆ ಕೇಳುತ್ತಾರೆ. ಬ್ಯಾಂಕಿನವರು ಸರಿಯಾಗ ಸ್ಪಂದಿಸದ ಕಾರಣ ಜಿಲ್ಲಾ ಗಾಹಕರ ಆಯೋಗಕ್ಕೆ ದೂರು ನೀಡುತ್ತಾರೆ‌.

ದೂರುದಾರರಿಗೆ ಸಾಲ ತೀರಿದ ಪ್ರಮಾಣ ಪತ್ರ ಕೊಡಬೇಕು. ದೂರುದಾರರು ಹೆಸರು ವರ್ಗಾವಣೆಗೆ ನಿರಾಪೇಕ್ಷಣ ಪತ್ರ ಕೊಡಬೇಕು ಎಂದೂ ಆದೇಶದಲ್ಲಿ ತಿಳಿಸಿದೆ.

ದಾವಾ ವೆಚ್ಚ ₹2 ಸಾವಿರ

ನೋಟಿಸ್‌ ನೀಡದೆ ವಾಹನ ಜಪ್ತಿ ಮಾಡಿ, ವಾಹನ ಮಾಲೀಕರಿಗೆ ತಿಳಿಸದೆ ಮಾರಾಟ ಮಾಡಿದ್ದು ಅನುಚಿತ ವ್ಯಾಪಾರ ಪದ್ಧತಿ ಎಂದು ತೀರ್ಮಾನಿಸಿ ಅಧ್ಯಕ್ಷ ವಿಜಯಕುಮಾರ ಪಾವಲೆ, ಸದಸ್ಯರುಗಳಾದ ರಂಗನಗೌಡ ದಂಡಣ್ಣವರ ಹಾಗೂ ಸಮಿವುನ್ನೀಸಾ ಅಬ್ರಾರ ಅವರಿದ್ದ ನ್ಯಾಯಪೀಠವು ದೂರುದಾರರಿಗೆ ದೂರು ದಾಖಲಿಸಿದ ದಿನದಿಂದ ಶೇ6ರ ಬಡ್ಡಿ ಸಮೇತ ₹50 ಸಾವಿರ ಪರಿಹಾರವನ್ನು 45 ದಿನಗಳಲ್ಲಿ ನೀಡಬೇಕು. ತಪ್ಪಿದಲ್ಲಿ ಶೇ9ರಂತೆ ಬಡ್ಡಿ ಸಮೇತ ಕೊಡಬೇಕು. ಅಲ್ಲೆ ಮಾನಸಿಕ ವ್ಯಥೆಗೆ ₹5 ಸಾವಿರ, ದಾವಾ ವೆಚ್ಚ ₹2 ಸಾವಿರ ನೀಡಬೇಕು ಎಂದು ಆದೇಶ ಹೊರಡಿಸಿದೆ.

andolanait

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

3 hours ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

3 hours ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

3 hours ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

3 hours ago