BREAKING NEWS

ನೋಟಿಸ್ ನೀಡದೆ ವಾಹನ ಜಪ್ತಿ ಮಾಡಿ ಬ್ಯಾಂಕ್‌ಗೆ ದಂಡ ವಿಧಿಸಿದ ಗ್ರಾಹಕರ ಆಯೋಗ

ಬಾಗಲಕೋಟೆ: ಸಾಲ ಪಡೆದು ವಾಹನ ಖರೀದಿಸಿದಾಗ ಕಂತು ಕಟ್ಟಿಲ್ಲ ಎಂದು ನೋಟಿಸ್‌ ನೀಡದೆ ವಾಹನ ಜಪ್ತಿ ಮಾಡಿದ್ದಕ್ಕೆ ಜಿಲ್ಲಾ ಗಾಹಕರ ಆಯೋಗ ದಂಡ ವಿಧಿಸಿದೆ.

ಪ್ರಕರಣದ ವಿವರ: ಮುಧೋಳ ತಾಲ್ಲೂಕಿನ ಭಂಟನೂರ ಗ್ರಾಮದ ಕಲ್ಲಪ್ಪ ಕುಂಬಾರ ಎಂಬುವರು ಜೀವನೋಪಾಯ ಸಲುವಾಗಿ 2018ರಲ್ಲಿ ಮುಧೋಳ ಐಡಿಎಫ್‌ಸಿ ಬ್ಯಾಂಕಿನಲ್ಲಿ ₹5,88,703 ಸಾಲ ಮಾಡಿ ಗೂಡ್ಸ್ ಗಾಡಿ ಖರೀದಿಸಿರುತ್ತಾರೆ. ಕಂತುಗಳನ್ನು ಸರಿಯಾಗಿ ಕಟ್ಟುತ್ತಾ ಇರುತ್ತಾರೆ.

ಕೋವಿಡ್ ಸಂದರ್ಭದಲ್ಲಿ ಕಂತು ಕಟ್ಟಲು ಕಷ್ಟವಾಗಿದೆ. ಬ್ಯಾಂಕಿನವರ ಒತ್ತಡದಿಂದಾಗಿ ಅಲ್ಲಿ, ಇಲ್ಲಿ ಹಣ ಹೊಂದಿಸಿ 2021 ನವೆಂಬರ್‌ವರೆಗೆ ಕಂತುಗಳನ್ನು ಕಟ್ಟುತ್ತಾರೆ. 2021 ಡಿಸೆಂಬರ್ ನಲ್ಲಿ ಬ್ಯಾಂಕಿನವರು ನೋಟಿಸ್‌ ನೀಡದೆ ವಾಹನ ಜಪ್ತಿ ಮಾಡುತ್ತಾರೆ. ಬಾಕಿ ಮೊತ್ತ ₹3,86,907 ತುಂಬುವಂತೆ ನೋಟಿಸ್‌ ನೀಡಿದ್ದಾರೆ. 2022 ಫೆಬ್ರವರಿಯಲ್ಲಿ ದೂರುದಾರರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಸರಿಯಾಗಿ ಸ್ಪಂದಿಸದೆ ಬಾಗಲಕೋಟೆ ಪ್ರಧಾನ ಕಚೇರಿಗೆ ಕಳುಹಿಸುತ್ತಾರೆ. ಅಲ್ಲಿಯೂ ಸರಿಯಾಗಿ ಮಾಹಿತಿ ಕೊಡದೆ ಹುಬ್ಬಳ್ಳಿ ಕಚೇರಿಗೆ ಹೋಗಲು ತಿಳಿಸುತ್ತಾರೆ.

ಬ್ಯಾಂಕ್ ಅಧಿಕಾರಿ ಮೌಖಿಕವಾಗಿ ಸದರಿ ವಾಹನವನ್ನು ಬೇರೆಯವರಿಗೆ ಮಾರಾಟ ಮಾಡಿದ್ದಾಗಿ ತಿಳಿಸುತ್ತಾರೆ. ಬೇರೆಯವರಿಗೆ ಮಾರಾಟ ಮಾಡಿದ್ದರೂ ಮಾಲೀಕತ್ವ ವರ್ಗಾವಣೆ ಮಾಡದೆ ವಾಹನ ಇನ್ನೂ ತನ್ನ ಹೆಸರಿನಲ್ಲಿ ಓಡಾಡುತ್ತಿರುವುದು ಗಮನಕ್ಕೆ ಬರುತ್ತದೆ. ಈ ನಡುವೆ ಮಾಲೀಕತ್ವ ವರ್ಗಾವಣೆ ಸಲುವಾಗಿ ಜಮಖಂಡಿ ಆರ್.ಟಿ.ಒ ನೋಟಿಸ್ ನೀಡುತ್ತಾರೆ.

ವಾಹನವನ್ನು ತನಗೆ ನೋಟಿಸ್ ನೀಡದೆ ಜಪ್ತಿ ಮಾಡಿದ್ದು ಅಲ್ಲದೆ ಬೇರೆಯವರಿಗೆ ಮಾರಾಟ ಮಾಡಿದ್ದೀರಿ. ಹೆಸರು ವರ್ಗಾವಣೆ ತಕಾರು ಸಲ್ಲಿಸಿ, ವಾಹನ ತನಗೆ ಕೊಡಬೇಕು ಎಂದು ಬ್ಯಾಂಕಿನವರಿಗೆ ಕೇಳುತ್ತಾರೆ. ಬ್ಯಾಂಕಿನವರು ಸರಿಯಾಗ ಸ್ಪಂದಿಸದ ಕಾರಣ ಜಿಲ್ಲಾ ಗಾಹಕರ ಆಯೋಗಕ್ಕೆ ದೂರು ನೀಡುತ್ತಾರೆ‌.

ದೂರುದಾರರಿಗೆ ಸಾಲ ತೀರಿದ ಪ್ರಮಾಣ ಪತ್ರ ಕೊಡಬೇಕು. ದೂರುದಾರರು ಹೆಸರು ವರ್ಗಾವಣೆಗೆ ನಿರಾಪೇಕ್ಷಣ ಪತ್ರ ಕೊಡಬೇಕು ಎಂದೂ ಆದೇಶದಲ್ಲಿ ತಿಳಿಸಿದೆ.

ದಾವಾ ವೆಚ್ಚ ₹2 ಸಾವಿರ

ನೋಟಿಸ್‌ ನೀಡದೆ ವಾಹನ ಜಪ್ತಿ ಮಾಡಿ, ವಾಹನ ಮಾಲೀಕರಿಗೆ ತಿಳಿಸದೆ ಮಾರಾಟ ಮಾಡಿದ್ದು ಅನುಚಿತ ವ್ಯಾಪಾರ ಪದ್ಧತಿ ಎಂದು ತೀರ್ಮಾನಿಸಿ ಅಧ್ಯಕ್ಷ ವಿಜಯಕುಮಾರ ಪಾವಲೆ, ಸದಸ್ಯರುಗಳಾದ ರಂಗನಗೌಡ ದಂಡಣ್ಣವರ ಹಾಗೂ ಸಮಿವುನ್ನೀಸಾ ಅಬ್ರಾರ ಅವರಿದ್ದ ನ್ಯಾಯಪೀಠವು ದೂರುದಾರರಿಗೆ ದೂರು ದಾಖಲಿಸಿದ ದಿನದಿಂದ ಶೇ6ರ ಬಡ್ಡಿ ಸಮೇತ ₹50 ಸಾವಿರ ಪರಿಹಾರವನ್ನು 45 ದಿನಗಳಲ್ಲಿ ನೀಡಬೇಕು. ತಪ್ಪಿದಲ್ಲಿ ಶೇ9ರಂತೆ ಬಡ್ಡಿ ಸಮೇತ ಕೊಡಬೇಕು. ಅಲ್ಲೆ ಮಾನಸಿಕ ವ್ಯಥೆಗೆ ₹5 ಸಾವಿರ, ದಾವಾ ವೆಚ್ಚ ₹2 ಸಾವಿರ ನೀಡಬೇಕು ಎಂದು ಆದೇಶ ಹೊರಡಿಸಿದೆ.

andolanait

Recent Posts

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

57 seconds ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

5 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

21 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

22 hours ago