BREAKING NEWS

ಹಲಾಲ್ ಮಾಂಸ ಬಳಕೆ: ದೇಶಾದ್ಯಂತ ‘ಸ್ಟಾರ್ ಬಕ್ಸ್’ ಬಹಿಷ್ಕಾರಕ್ಕೆ ಹಿಂದುತ್ವ ಸಂಘಟನೆ ಕರೆ

ಮುಂಬೈ: ಹಿಂದುತ್ವ ಸಂಘಟನೆಯಾದ ಹಿಂದೂ ಜನಜಾಗೃತಿ ಸಮಿತಿಯು ದೇಶಾದ್ಯಂತ ಸ್ಟಾರ್ ಬಕ್ಸ್ ಅನ್ನು ಬಹಿಷ್ಕರಿಸುವಂತೆ ಕರೆ ನೀಡಿದೆ ಎಂದು freepressjournal.in ವರದಿ ಮಾಡಿದೆ.

ಈ ಕುರಿತು Free Press Journal ಸಂಸ್ಥೆಗೆ ಪ್ರತಿಕ್ರಿಯಿಸಿರುವ ಹಿಂದೂ ಜನಜಾಗೃತಿ ಸಮಿತಿಯ ವಕ್ತಾರ ರಮೇಶ್ ಶಿಂದೆ, ಸ್ಟಾರ್ ಬಕ್ಸ್ ತನ್ನ ಉತ್ಪನ್ನಗಳಲ್ಲಿ ಕೇವಲ ಹಲಾಲ್ ಮಾಂಸವನ್ನು ಮಾತ್ರ ಬಳಸುತ್ತಿರುವುದರಿಂದ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ. ಹಿಂದೂ ಜನಜಾಗೃತಿ ಸಮಿತಿಯು ಸ್ಟಾರ್ ಬಕ್ಸ್ ಮಳಿಗೆಗಳಿಗೆ ತನ್ನ ಸ್ವಯಂಸೇವಕರನ್ನು ಕಳಿಸಿದ್ದು, ಅವರು ಅಲ್ಲಿ ಅಂತಾರಾಷ್ಟ್ರೀಯ ಜಾಲದ ಮಾರಾಟ ಸಿಬ್ಬಂದಿಗಳು ನಾವು ಹಲಾಲ್ ಮಾಂಸವನ್ನು ಮಾತ್ರ ಬಳಸುತ್ತೇವೆ ಎಂದು ದೃಢಪಡಿಸುತ್ತಿರುವ ದೃಶ್ಯಗಳ ವಿಡಿಯೊವನ್ನು ಚಿತ್ರೀಕರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಯಾವುದೇ ಸಂಸ್ಥೆಯು ಹಲಾಲ್ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕೂ ಮುನ್ನ ಹಲಾಲ್ ಪ್ರಮಾಣ ಪತ್ರವನ್ನು ಪಡೆಯಬೇಕಿದೆ. ಇದರಿಂದ ಬರುವ ನಿಧಿಯನ್ನು ಪ್ರಶ್ನಾರ್ಹ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ಶಿಂದೆ ಆರೋಪಿಸಿದ್ದಾರೆ.

ಯಾವುದೇ ಕಾರಣಕ್ಕಾದರೂ ಮುಸ್ಲಿಮೇತರ ಜನರ ಮೇಲೆ ಹಲಾಲ್ ಮಾಂಸವನ್ನು ಹೇರುವುದು ಅನ್ಯಾಯಕರ. ಹಿಂದೂ ಜನಜಾಗೃತಿ ಸಮಿತಿಯು ಹಲಾಲ್ ಆರ್ಥಿಕತೆಯ ವಿರುದ್ಧ ಹಲವಾರು ತಿಂಗಳಿನಿಂದ ಅಭಿಯಾನವನ್ನು ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

andolanait

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

2 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

2 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

3 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

3 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

3 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

3 hours ago