BREAKING NEWS

ಹಲಾಲ್ ಮಾಂಸ ಬಳಕೆ: ದೇಶಾದ್ಯಂತ ‘ಸ್ಟಾರ್ ಬಕ್ಸ್’ ಬಹಿಷ್ಕಾರಕ್ಕೆ ಹಿಂದುತ್ವ ಸಂಘಟನೆ ಕರೆ

ಮುಂಬೈ: ಹಿಂದುತ್ವ ಸಂಘಟನೆಯಾದ ಹಿಂದೂ ಜನಜಾಗೃತಿ ಸಮಿತಿಯು ದೇಶಾದ್ಯಂತ ಸ್ಟಾರ್ ಬಕ್ಸ್ ಅನ್ನು ಬಹಿಷ್ಕರಿಸುವಂತೆ ಕರೆ ನೀಡಿದೆ ಎಂದು freepressjournal.in ವರದಿ ಮಾಡಿದೆ.

ಈ ಕುರಿತು Free Press Journal ಸಂಸ್ಥೆಗೆ ಪ್ರತಿಕ್ರಿಯಿಸಿರುವ ಹಿಂದೂ ಜನಜಾಗೃತಿ ಸಮಿತಿಯ ವಕ್ತಾರ ರಮೇಶ್ ಶಿಂದೆ, ಸ್ಟಾರ್ ಬಕ್ಸ್ ತನ್ನ ಉತ್ಪನ್ನಗಳಲ್ಲಿ ಕೇವಲ ಹಲಾಲ್ ಮಾಂಸವನ್ನು ಮಾತ್ರ ಬಳಸುತ್ತಿರುವುದರಿಂದ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ. ಹಿಂದೂ ಜನಜಾಗೃತಿ ಸಮಿತಿಯು ಸ್ಟಾರ್ ಬಕ್ಸ್ ಮಳಿಗೆಗಳಿಗೆ ತನ್ನ ಸ್ವಯಂಸೇವಕರನ್ನು ಕಳಿಸಿದ್ದು, ಅವರು ಅಲ್ಲಿ ಅಂತಾರಾಷ್ಟ್ರೀಯ ಜಾಲದ ಮಾರಾಟ ಸಿಬ್ಬಂದಿಗಳು ನಾವು ಹಲಾಲ್ ಮಾಂಸವನ್ನು ಮಾತ್ರ ಬಳಸುತ್ತೇವೆ ಎಂದು ದೃಢಪಡಿಸುತ್ತಿರುವ ದೃಶ್ಯಗಳ ವಿಡಿಯೊವನ್ನು ಚಿತ್ರೀಕರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಯಾವುದೇ ಸಂಸ್ಥೆಯು ಹಲಾಲ್ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕೂ ಮುನ್ನ ಹಲಾಲ್ ಪ್ರಮಾಣ ಪತ್ರವನ್ನು ಪಡೆಯಬೇಕಿದೆ. ಇದರಿಂದ ಬರುವ ನಿಧಿಯನ್ನು ಪ್ರಶ್ನಾರ್ಹ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ಶಿಂದೆ ಆರೋಪಿಸಿದ್ದಾರೆ.

ಯಾವುದೇ ಕಾರಣಕ್ಕಾದರೂ ಮುಸ್ಲಿಮೇತರ ಜನರ ಮೇಲೆ ಹಲಾಲ್ ಮಾಂಸವನ್ನು ಹೇರುವುದು ಅನ್ಯಾಯಕರ. ಹಿಂದೂ ಜನಜಾಗೃತಿ ಸಮಿತಿಯು ಹಲಾಲ್ ಆರ್ಥಿಕತೆಯ ವಿರುದ್ಧ ಹಲವಾರು ತಿಂಗಳಿನಿಂದ ಅಭಿಯಾನವನ್ನು ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

andolanait

Recent Posts

ಸಂಪಾದನೆ ಎಂಬ ಧರ್ಮ ಸಂಕಟಕ್ಕೆ ಸಿಲುಕಿ…

ದೇವನೂರ ಮಹಾದೇವ ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಟಿ.ಎಸ್.ರಾಮಸ್ವಾಮಿಯವರು ನೆಲಗನ್ನಡಕ್ಕೆ ಅನುವಾದಿಸಿರುವ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿಯ ಲೋಕಾರ್ಪಣೆ ಶನಿವಾರ ಸಂಜೆ…

3 hours ago

ಪ್ರವಾಸಿಗರಿಗೆ ಮುಕ್ತವಾದ ಮಾಂದಲ್‌ಪಟ್ಟಿ

ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…

3 hours ago

ಯತೀಂದ್ರಗೆ ನಗರಾಭಿವೃದ್ಧಿ; ಮೈಸೂರಿಗೆ ಯೋಜನೆಗಳ ಸಮೃದ್ಧಿ?

ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…

3 hours ago

ಬೀದಿ ದೀಪಗಳ ನಿರ್ವಹಣೆ ಕೊರತೆ; ಸಾರ್ವಜನಿಕರ ವ್ಯಥೆ

ಕೆ.ಪಿ.ಮದನ್ ಮೈಸೂರು: ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ವರದಿಗಳು ಪ್ರಕಟವಾಗುತ್ತಿವೆ. ಇತ್ತ ನಗರದ ಆಸುಪಾಸಿನಲ್ಲಿರುವ ಕೆಲ ಬಡಾವಣೆಗಳ…

4 hours ago

ಶಿಕ್ಷಕರ ಜೇಬಿಗೆ ಹೊರೆಯಾದ ಬಿಸಿಯೂಟ

ಎಸ್.ಎಸ್.ಭಟ್ ಬೇಳೆ, ಎಣ್ಣೆಗೆ ಶಿಕ್ಷಣ ಇಲಾಖೆ ವಿಧಿಸಿರುವ ದರವೇ ಶಿಕ್ಷಕರಿಗೆ ಹೊರೆ ನಂಜನಗೂಡು: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟ…

4 hours ago