BREAKING NEWS

ಹಲಾಲ್ ಮಾಂಸ ಬಳಕೆ: ದೇಶಾದ್ಯಂತ ‘ಸ್ಟಾರ್ ಬಕ್ಸ್’ ಬಹಿಷ್ಕಾರಕ್ಕೆ ಹಿಂದುತ್ವ ಸಂಘಟನೆ ಕರೆ

ಮುಂಬೈ: ಹಿಂದುತ್ವ ಸಂಘಟನೆಯಾದ ಹಿಂದೂ ಜನಜಾಗೃತಿ ಸಮಿತಿಯು ದೇಶಾದ್ಯಂತ ಸ್ಟಾರ್ ಬಕ್ಸ್ ಅನ್ನು ಬಹಿಷ್ಕರಿಸುವಂತೆ ಕರೆ ನೀಡಿದೆ ಎಂದು freepressjournal.in ವರದಿ ಮಾಡಿದೆ.

ಈ ಕುರಿತು Free Press Journal ಸಂಸ್ಥೆಗೆ ಪ್ರತಿಕ್ರಿಯಿಸಿರುವ ಹಿಂದೂ ಜನಜಾಗೃತಿ ಸಮಿತಿಯ ವಕ್ತಾರ ರಮೇಶ್ ಶಿಂದೆ, ಸ್ಟಾರ್ ಬಕ್ಸ್ ತನ್ನ ಉತ್ಪನ್ನಗಳಲ್ಲಿ ಕೇವಲ ಹಲಾಲ್ ಮಾಂಸವನ್ನು ಮಾತ್ರ ಬಳಸುತ್ತಿರುವುದರಿಂದ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ. ಹಿಂದೂ ಜನಜಾಗೃತಿ ಸಮಿತಿಯು ಸ್ಟಾರ್ ಬಕ್ಸ್ ಮಳಿಗೆಗಳಿಗೆ ತನ್ನ ಸ್ವಯಂಸೇವಕರನ್ನು ಕಳಿಸಿದ್ದು, ಅವರು ಅಲ್ಲಿ ಅಂತಾರಾಷ್ಟ್ರೀಯ ಜಾಲದ ಮಾರಾಟ ಸಿಬ್ಬಂದಿಗಳು ನಾವು ಹಲಾಲ್ ಮಾಂಸವನ್ನು ಮಾತ್ರ ಬಳಸುತ್ತೇವೆ ಎಂದು ದೃಢಪಡಿಸುತ್ತಿರುವ ದೃಶ್ಯಗಳ ವಿಡಿಯೊವನ್ನು ಚಿತ್ರೀಕರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಯಾವುದೇ ಸಂಸ್ಥೆಯು ಹಲಾಲ್ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕೂ ಮುನ್ನ ಹಲಾಲ್ ಪ್ರಮಾಣ ಪತ್ರವನ್ನು ಪಡೆಯಬೇಕಿದೆ. ಇದರಿಂದ ಬರುವ ನಿಧಿಯನ್ನು ಪ್ರಶ್ನಾರ್ಹ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ಶಿಂದೆ ಆರೋಪಿಸಿದ್ದಾರೆ.

ಯಾವುದೇ ಕಾರಣಕ್ಕಾದರೂ ಮುಸ್ಲಿಮೇತರ ಜನರ ಮೇಲೆ ಹಲಾಲ್ ಮಾಂಸವನ್ನು ಹೇರುವುದು ಅನ್ಯಾಯಕರ. ಹಿಂದೂ ಜನಜಾಗೃತಿ ಸಮಿತಿಯು ಹಲಾಲ್ ಆರ್ಥಿಕತೆಯ ವಿರುದ್ಧ ಹಲವಾರು ತಿಂಗಳಿನಿಂದ ಅಭಿಯಾನವನ್ನು ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

22 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago