BREAKING NEWS

ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ ಸಿಎನ್​​ ಮಂಜುನಾಥ್​ ಮುಂದುವರಿಕೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಜಯದೇವ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್ ಅವರು ಇನ್ನೂ 6 ತಿಂಗಳು ಸೇವಾವಧಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜುಲೈ 19ಕ್ಕೆ ಡಾ.ಸಿ.ಎನ್​.ಮಂಜುನಾಥ್ ಸೇವಾವಧಿ ಮುಕ್ತಾಯ ಆಗಬೇಕಿತ್ತು. ಆದರೆ ಕಲಬುರಗಿ ಜಯದೇವ ಆಸ್ಪತ್ರೆಯ ಕೆಲಸ ಜವಾಬ್ದಾರಿ ಹಿನ್ನಲೆ ಜನವರಿ ತಿಂಗಳವರೆಗೆ ನಿರ್ದೇಶಕರಾಗಿ ಮುಂದುವರಿಯುವಂತೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ 2007 ರಿಂದ ಡಾ.ಮಂಜುನಾಥ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷವೇ ಡಾ.ಮಂಜುನಾಥ್ ಅಧಿಕಾರಾವಧಿ ಮುಕ್ತಾಯವಾಗಿತ್ತು. ಆದರೆ ರೋಗಿಗಳು ಮತ್ತು ಸಿಬ್ಬಂದಿ ಒತ್ತಾಯದ ಮೇರೆಗೆ 1 ವರ್ಷ ಮುಂದುವರಿಸಲಾಗಿತ್ತು. ಸದ್ಯ ಅದರಂತೆಯೇ ಇನ್ನೂ 6 ತಿಂಗಳು ನಿರ್ದೇಶಕರಾಗಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಜಯದೇವ ಸಂಸ್ಥೆಯ ಆಡಳಿತ ಮಂಡಳಿ ಜತೆ ಸಿಎಂ ಸಿದ್ಧರಾಮಯ್ಯ ಇಂದು ಮಹತ್ವದ ಸಭೆ ನಡೆಸಿದ್ದರು. ಜಯದೇವ ಆಸ್ಪತ್ರೆಯ ಅಭಿವೃದ್ಧಿ ಹಾಗೂ ನಿರ್ವಹಣೆ ಬಗ್ಗೆ ಮತ್ತು ಜಯದೇವ ಆಸ್ಪತ್ರೆ ನಿರ್ದೇಶಕರ ಆಯ್ಕೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ಜುಲೈ 19ರಂದು ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್ ಅವಧಿ ಪೂರ್ಣಗೊಳ್ಳುವ ಹಿನ್ನೆಲೆ ಅವರ ಸೇವಾವಧಿ ಮುಂದುವರಿಸಬೇಕಾ? ಅಥವಾ ಹೊಸ ನಿರ್ದೇಶಕರ ಆಯ್ಕೆ ಮಾಡಬೇಕಾ ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

3 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

3 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

4 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

13 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

13 hours ago