BREAKING NEWS

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಕಳೆದ ಬಿಜೆಪಿ ಸರ್ಕಾರದ ಅವಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಕುರಿತು ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಜಿಲ್ಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರನ್ನು ಸಂತೋಷ್ ಪಾಟೀಲ್ ಅವರ ತಾಯಿ ಮತ್ತು ಪತ್ನಿ ಭೇಟಿ ಮಾಡಿ ಮನವಿ ಮಾಡಿದ್ದು, ಪೊಲೀಸ್ ತನಿಖೆಯಿಂದ ನ್ಯಾಯ ಸಿಕ್ಕಿಲ್ಲ. ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯಿಸಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು, ಕಾನೂನು ತಜ್ಞರು ಹಾಗೂ ಪೊಲೀಸರ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂತೋಷ್ ಪಾಟೀಲ್ ಅವರ ತಾಯಿ, ನನ್ನ ಮಗ ಸಚಿವ ಈಶ್ವರಪ್ಪ ಅವರ ವಿಶ್ವಾಸದ ಮೇಲೆ ಕೆಲಸ ಮಾಡಿದ್ದ. ಆತ ಮಾಡಿದ ಕೆಲಸಕ್ಕೆ ಬಿಲ್ ಪಾವತಿ ಮಾಡಲಿಲ್ಲ. ಒಂದು ವೇಳೆ ಹಣ ಕೊಟ್ಟಿದ್ದರೆ ನನ್ನ ಮಗ ಉಳಿಯುತ್ತಿದ್ದ. ಇವರು ನನ್ನ ಮಗನನ್ನು ಉಳಿಸಬೇಕಿತ್ತು ಎಂದು ಅಳಲು ತೋಡಿಕೊಂಡರು.

ತನಿಖೆ ನಡೆಸಿದ ಪೊಲೀಸರು ಸತ್ಯವನ್ನು ಮುಚ್ಚಿಟ್ಟು ಪ್ರಕರಣದಲ್ಲಿ ಬಿ ವರದಿ ನೀಡಿದ್ದರು. ಅದು ಬಂದ ತಕ್ಷಣ ಈಶ್ವರಪ್ಪ ಸಿಹಿ ತಿಂದರು. ಅವರ ಮನೆಯಲ್ಲಿ ಈ ರೀತಿಯಾಗಿದ್ದರೆ ಸಿಹಿ ತಿನ್ನುತ್ತಿದ್ದರೆ? ನಾನು ಹುಲಿಯಂತಹ ಮಗನನ್ನು ಕಳೆದುಕೊಂಡಿದ್ದೇನೆ. ಜೀವನ ಪರ್ಯಂತ ಪುತ್ರ ಶೋಕದಲ್ಲಿ ಕೊರಗಬೇಕಿದೆ ಎಂದು ಶೋಕಿಸಿದರು.

ಯಡಿಯೂರಪ್ಪ ಅವರನ್ನು ನನ್ನ ಮಗ ಅಪ್ಪಾಜಿ ಎನ್ನುತ್ತಿದ್ದ. ಅವರು ಏನಾದರೂ ಕೊಡಬೇಕಿತ್ತು. ಮಗನ ಜೀವ ಉಳಿಸಬೇಕಿತ್ತು. ಆತ ಮಾಡಿದ್ದ ಕಾಮಗಾರಿಗಳಿಗೆ ಸಹಿ ಹಾಕಿದ್ದರೆ ಆತ ಜೀವ ಕಳೆದುಕೊಳ್ಳುತ್ತಿರಲಿಲ್ಲ ಎಂದ ಅವರು, ಸರ್ಕಾರ ತಮಗೆ ಈವರೆಗೂ ಬಾಕಿ ನೀಡಿಲ್ಲ. ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಅದು ಕೂಡ ಈಡೇರಲಿಲ್ಲ ಎಂದರು.

andolanait

Recent Posts

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

7 mins ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

22 mins ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

52 mins ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

1 hour ago

ಓದುಗರ ಪತ್ರ: ಗಾಳಿ… ತಂಗಾಳಿ !

ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…

1 hour ago

ಓದುಗರ ಪತ್ರ:  ದ್ವೇಷ ಭಾಷಣ ಮಸೂದೆ ದುರ್ಬಳಕೆಯಾಗದಿರಲಿ

ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…

2 hours ago