ಬೆಳಗಾವಿ : ಕಳೆದ ಬಿಜೆಪಿ ಸರ್ಕಾರದ ಅವಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಕುರಿತು ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಜಿಲ್ಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರನ್ನು ಸಂತೋಷ್ ಪಾಟೀಲ್ ಅವರ ತಾಯಿ ಮತ್ತು ಪತ್ನಿ ಭೇಟಿ ಮಾಡಿ ಮನವಿ ಮಾಡಿದ್ದು, ಪೊಲೀಸ್ ತನಿಖೆಯಿಂದ ನ್ಯಾಯ ಸಿಕ್ಕಿಲ್ಲ. ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯಿಸಿದರು.
ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು, ಕಾನೂನು ತಜ್ಞರು ಹಾಗೂ ಪೊಲೀಸರ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂತೋಷ್ ಪಾಟೀಲ್ ಅವರ ತಾಯಿ, ನನ್ನ ಮಗ ಸಚಿವ ಈಶ್ವರಪ್ಪ ಅವರ ವಿಶ್ವಾಸದ ಮೇಲೆ ಕೆಲಸ ಮಾಡಿದ್ದ. ಆತ ಮಾಡಿದ ಕೆಲಸಕ್ಕೆ ಬಿಲ್ ಪಾವತಿ ಮಾಡಲಿಲ್ಲ. ಒಂದು ವೇಳೆ ಹಣ ಕೊಟ್ಟಿದ್ದರೆ ನನ್ನ ಮಗ ಉಳಿಯುತ್ತಿದ್ದ. ಇವರು ನನ್ನ ಮಗನನ್ನು ಉಳಿಸಬೇಕಿತ್ತು ಎಂದು ಅಳಲು ತೋಡಿಕೊಂಡರು.
ತನಿಖೆ ನಡೆಸಿದ ಪೊಲೀಸರು ಸತ್ಯವನ್ನು ಮುಚ್ಚಿಟ್ಟು ಪ್ರಕರಣದಲ್ಲಿ ಬಿ ವರದಿ ನೀಡಿದ್ದರು. ಅದು ಬಂದ ತಕ್ಷಣ ಈಶ್ವರಪ್ಪ ಸಿಹಿ ತಿಂದರು. ಅವರ ಮನೆಯಲ್ಲಿ ಈ ರೀತಿಯಾಗಿದ್ದರೆ ಸಿಹಿ ತಿನ್ನುತ್ತಿದ್ದರೆ? ನಾನು ಹುಲಿಯಂತಹ ಮಗನನ್ನು ಕಳೆದುಕೊಂಡಿದ್ದೇನೆ. ಜೀವನ ಪರ್ಯಂತ ಪುತ್ರ ಶೋಕದಲ್ಲಿ ಕೊರಗಬೇಕಿದೆ ಎಂದು ಶೋಕಿಸಿದರು.
ಯಡಿಯೂರಪ್ಪ ಅವರನ್ನು ನನ್ನ ಮಗ ಅಪ್ಪಾಜಿ ಎನ್ನುತ್ತಿದ್ದ. ಅವರು ಏನಾದರೂ ಕೊಡಬೇಕಿತ್ತು. ಮಗನ ಜೀವ ಉಳಿಸಬೇಕಿತ್ತು. ಆತ ಮಾಡಿದ್ದ ಕಾಮಗಾರಿಗಳಿಗೆ ಸಹಿ ಹಾಕಿದ್ದರೆ ಆತ ಜೀವ ಕಳೆದುಕೊಳ್ಳುತ್ತಿರಲಿಲ್ಲ ಎಂದ ಅವರು, ಸರ್ಕಾರ ತಮಗೆ ಈವರೆಗೂ ಬಾಕಿ ನೀಡಿಲ್ಲ. ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಅದು ಕೂಡ ಈಡೇರಲಿಲ್ಲ ಎಂದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…