ಬೆಳಗಾವಿ : ಕಳೆದ ಬಿಜೆಪಿ ಸರ್ಕಾರದ ಅವಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಕುರಿತು ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಜಿಲ್ಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರನ್ನು ಸಂತೋಷ್ ಪಾಟೀಲ್ ಅವರ ತಾಯಿ ಮತ್ತು ಪತ್ನಿ ಭೇಟಿ ಮಾಡಿ ಮನವಿ ಮಾಡಿದ್ದು, ಪೊಲೀಸ್ ತನಿಖೆಯಿಂದ ನ್ಯಾಯ ಸಿಕ್ಕಿಲ್ಲ. ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯಿಸಿದರು.
ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು, ಕಾನೂನು ತಜ್ಞರು ಹಾಗೂ ಪೊಲೀಸರ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂತೋಷ್ ಪಾಟೀಲ್ ಅವರ ತಾಯಿ, ನನ್ನ ಮಗ ಸಚಿವ ಈಶ್ವರಪ್ಪ ಅವರ ವಿಶ್ವಾಸದ ಮೇಲೆ ಕೆಲಸ ಮಾಡಿದ್ದ. ಆತ ಮಾಡಿದ ಕೆಲಸಕ್ಕೆ ಬಿಲ್ ಪಾವತಿ ಮಾಡಲಿಲ್ಲ. ಒಂದು ವೇಳೆ ಹಣ ಕೊಟ್ಟಿದ್ದರೆ ನನ್ನ ಮಗ ಉಳಿಯುತ್ತಿದ್ದ. ಇವರು ನನ್ನ ಮಗನನ್ನು ಉಳಿಸಬೇಕಿತ್ತು ಎಂದು ಅಳಲು ತೋಡಿಕೊಂಡರು.
ತನಿಖೆ ನಡೆಸಿದ ಪೊಲೀಸರು ಸತ್ಯವನ್ನು ಮುಚ್ಚಿಟ್ಟು ಪ್ರಕರಣದಲ್ಲಿ ಬಿ ವರದಿ ನೀಡಿದ್ದರು. ಅದು ಬಂದ ತಕ್ಷಣ ಈಶ್ವರಪ್ಪ ಸಿಹಿ ತಿಂದರು. ಅವರ ಮನೆಯಲ್ಲಿ ಈ ರೀತಿಯಾಗಿದ್ದರೆ ಸಿಹಿ ತಿನ್ನುತ್ತಿದ್ದರೆ? ನಾನು ಹುಲಿಯಂತಹ ಮಗನನ್ನು ಕಳೆದುಕೊಂಡಿದ್ದೇನೆ. ಜೀವನ ಪರ್ಯಂತ ಪುತ್ರ ಶೋಕದಲ್ಲಿ ಕೊರಗಬೇಕಿದೆ ಎಂದು ಶೋಕಿಸಿದರು.
ಯಡಿಯೂರಪ್ಪ ಅವರನ್ನು ನನ್ನ ಮಗ ಅಪ್ಪಾಜಿ ಎನ್ನುತ್ತಿದ್ದ. ಅವರು ಏನಾದರೂ ಕೊಡಬೇಕಿತ್ತು. ಮಗನ ಜೀವ ಉಳಿಸಬೇಕಿತ್ತು. ಆತ ಮಾಡಿದ್ದ ಕಾಮಗಾರಿಗಳಿಗೆ ಸಹಿ ಹಾಕಿದ್ದರೆ ಆತ ಜೀವ ಕಳೆದುಕೊಳ್ಳುತ್ತಿರಲಿಲ್ಲ ಎಂದ ಅವರು, ಸರ್ಕಾರ ತಮಗೆ ಈವರೆಗೂ ಬಾಕಿ ನೀಡಿಲ್ಲ. ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಅದು ಕೂಡ ಈಡೇರಲಿಲ್ಲ ಎಂದರು.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…