ಬೆಳಗಾವಿ : ಕಳೆದ ಬಿಜೆಪಿ ಸರ್ಕಾರದ ಅವಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಕುರಿತು ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಜಿಲ್ಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರನ್ನು ಸಂತೋಷ್ ಪಾಟೀಲ್ ಅವರ ತಾಯಿ ಮತ್ತು ಪತ್ನಿ ಭೇಟಿ ಮಾಡಿ ಮನವಿ ಮಾಡಿದ್ದು, ಪೊಲೀಸ್ ತನಿಖೆಯಿಂದ ನ್ಯಾಯ ಸಿಕ್ಕಿಲ್ಲ. ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯಿಸಿದರು.
ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು, ಕಾನೂನು ತಜ್ಞರು ಹಾಗೂ ಪೊಲೀಸರ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂತೋಷ್ ಪಾಟೀಲ್ ಅವರ ತಾಯಿ, ನನ್ನ ಮಗ ಸಚಿವ ಈಶ್ವರಪ್ಪ ಅವರ ವಿಶ್ವಾಸದ ಮೇಲೆ ಕೆಲಸ ಮಾಡಿದ್ದ. ಆತ ಮಾಡಿದ ಕೆಲಸಕ್ಕೆ ಬಿಲ್ ಪಾವತಿ ಮಾಡಲಿಲ್ಲ. ಒಂದು ವೇಳೆ ಹಣ ಕೊಟ್ಟಿದ್ದರೆ ನನ್ನ ಮಗ ಉಳಿಯುತ್ತಿದ್ದ. ಇವರು ನನ್ನ ಮಗನನ್ನು ಉಳಿಸಬೇಕಿತ್ತು ಎಂದು ಅಳಲು ತೋಡಿಕೊಂಡರು.
ತನಿಖೆ ನಡೆಸಿದ ಪೊಲೀಸರು ಸತ್ಯವನ್ನು ಮುಚ್ಚಿಟ್ಟು ಪ್ರಕರಣದಲ್ಲಿ ಬಿ ವರದಿ ನೀಡಿದ್ದರು. ಅದು ಬಂದ ತಕ್ಷಣ ಈಶ್ವರಪ್ಪ ಸಿಹಿ ತಿಂದರು. ಅವರ ಮನೆಯಲ್ಲಿ ಈ ರೀತಿಯಾಗಿದ್ದರೆ ಸಿಹಿ ತಿನ್ನುತ್ತಿದ್ದರೆ? ನಾನು ಹುಲಿಯಂತಹ ಮಗನನ್ನು ಕಳೆದುಕೊಂಡಿದ್ದೇನೆ. ಜೀವನ ಪರ್ಯಂತ ಪುತ್ರ ಶೋಕದಲ್ಲಿ ಕೊರಗಬೇಕಿದೆ ಎಂದು ಶೋಕಿಸಿದರು.
ಯಡಿಯೂರಪ್ಪ ಅವರನ್ನು ನನ್ನ ಮಗ ಅಪ್ಪಾಜಿ ಎನ್ನುತ್ತಿದ್ದ. ಅವರು ಏನಾದರೂ ಕೊಡಬೇಕಿತ್ತು. ಮಗನ ಜೀವ ಉಳಿಸಬೇಕಿತ್ತು. ಆತ ಮಾಡಿದ್ದ ಕಾಮಗಾರಿಗಳಿಗೆ ಸಹಿ ಹಾಕಿದ್ದರೆ ಆತ ಜೀವ ಕಳೆದುಕೊಳ್ಳುತ್ತಿರಲಿಲ್ಲ ಎಂದ ಅವರು, ಸರ್ಕಾರ ತಮಗೆ ಈವರೆಗೂ ಬಾಕಿ ನೀಡಿಲ್ಲ. ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಅದು ಕೂಡ ಈಡೇರಲಿಲ್ಲ ಎಂದರು.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…