ತುಮಕೂರು : ಹಿಂದೂ ಧರ್ಮದ ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು,ನಾನು ಧರ್ಮಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದೆ. ಜೈನ ಧರ್ಮ, ಬೌದ್ಧ ಧರ್ಮ, ಹಿಂದೂ ಧರ್ಮದ ಬಗ್ಗೆ ಹೇಳಿದ್ದೆ. ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ.
ಹಿಂದೂ ಧರ್ಮದ ಬಗ್ಗೆ ನಮಗಿರುವಷ್ಟು ಅಭಿಮಾನ ಅವರಿಗೆ ಇಲ್ಲ. ಕೇವಲ ತೋರಿಕೆ, ಪ್ರಚಾರಕ್ಕಾಗಿ ಮಾತ್ರ ಹಿಂದೂ ಎನ್ನುತ್ತಾರೆ. ನಮ್ಮ ಹೇಳಿಕೆಯಲ್ಲಿ ಯಾವುದೇ ವಿವಾದವಿಲ್ಲ, ತಪ್ಪು ಹೇಳಿಕೆ ನೀಡಿಲ್ಲ. ರಾಜಕೀಯ ಕಾರಣಕ್ಕೆ ವಿರೋಧಿಸಿದರೆ ಉತ್ತರ ನೀಡುತ್ತೇನೆ. ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ನನ್ನ ಪ್ರಕಾರ, ನಾನು ನೀಡಿರುವ ಹೇಳಿಕೆಯಲ್ಲಿ ಯಾವುದೇ ವಿವಾದಾತ್ಮಕ ಅಂಶವಿಲ್ಲ. ಅವರು ರಾಜಕೀಯ ಕಾರಣಕ್ಕೆ ವಿವಾದ ಮಾಡಿದರೆ ಸಂದರ್ಭ ಬಂದಾಗ ಉತ್ತರ ಕೊಡುತ್ತೇನೆ. ಭಗವದ್ಗೀತೆ ಶ್ಲೋಕ ಯಾಕೆ ಹೇಳಿದೆ ನಾನು? ನನಗೆ ಹಿಂದೂ ಧರ್ಮದಲ್ಲಿ ಇರುವಷ್ಟು ನಂಬಿಕೆ, ನಾನು ಮಾಡುವಷ್ಟು ಆಚರಣೆ ಅವರಿಗಂತೂ ಇಲ್ಲ. ನನಗಿಂತ ಹೆಚ್ಚೇನೂ ಬಿಜೆಪಿಯವರು ಆಚರಣೆ ಮಾಡುವುದಿಲ್ಲ. ನಾನು ಕೇವಲ ಹೋಲಿಕೆ ಮಾಡಿ ಮಾತನಾಡಿದ್ದೇನೆ ಅಷ್ಟೇ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…