ತುಮಕೂರು : ಹಿಂದೂ ಧರ್ಮದ ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು,ನಾನು ಧರ್ಮಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದೆ. ಜೈನ ಧರ್ಮ, ಬೌದ್ಧ ಧರ್ಮ, ಹಿಂದೂ ಧರ್ಮದ ಬಗ್ಗೆ ಹೇಳಿದ್ದೆ. ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ.
ಹಿಂದೂ ಧರ್ಮದ ಬಗ್ಗೆ ನಮಗಿರುವಷ್ಟು ಅಭಿಮಾನ ಅವರಿಗೆ ಇಲ್ಲ. ಕೇವಲ ತೋರಿಕೆ, ಪ್ರಚಾರಕ್ಕಾಗಿ ಮಾತ್ರ ಹಿಂದೂ ಎನ್ನುತ್ತಾರೆ. ನಮ್ಮ ಹೇಳಿಕೆಯಲ್ಲಿ ಯಾವುದೇ ವಿವಾದವಿಲ್ಲ, ತಪ್ಪು ಹೇಳಿಕೆ ನೀಡಿಲ್ಲ. ರಾಜಕೀಯ ಕಾರಣಕ್ಕೆ ವಿರೋಧಿಸಿದರೆ ಉತ್ತರ ನೀಡುತ್ತೇನೆ. ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ನನ್ನ ಪ್ರಕಾರ, ನಾನು ನೀಡಿರುವ ಹೇಳಿಕೆಯಲ್ಲಿ ಯಾವುದೇ ವಿವಾದಾತ್ಮಕ ಅಂಶವಿಲ್ಲ. ಅವರು ರಾಜಕೀಯ ಕಾರಣಕ್ಕೆ ವಿವಾದ ಮಾಡಿದರೆ ಸಂದರ್ಭ ಬಂದಾಗ ಉತ್ತರ ಕೊಡುತ್ತೇನೆ. ಭಗವದ್ಗೀತೆ ಶ್ಲೋಕ ಯಾಕೆ ಹೇಳಿದೆ ನಾನು? ನನಗೆ ಹಿಂದೂ ಧರ್ಮದಲ್ಲಿ ಇರುವಷ್ಟು ನಂಬಿಕೆ, ನಾನು ಮಾಡುವಷ್ಟು ಆಚರಣೆ ಅವರಿಗಂತೂ ಇಲ್ಲ. ನನಗಿಂತ ಹೆಚ್ಚೇನೂ ಬಿಜೆಪಿಯವರು ಆಚರಣೆ ಮಾಡುವುದಿಲ್ಲ. ನಾನು ಕೇವಲ ಹೋಲಿಕೆ ಮಾಡಿ ಮಾತನಾಡಿದ್ದೇನೆ ಅಷ್ಟೇ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…