ತುಮಕೂರು : ಹಿಂದೂ ಧರ್ಮದ ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು,ನಾನು ಧರ್ಮಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದೆ. ಜೈನ ಧರ್ಮ, ಬೌದ್ಧ ಧರ್ಮ, ಹಿಂದೂ ಧರ್ಮದ ಬಗ್ಗೆ ಹೇಳಿದ್ದೆ. ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ.
ಹಿಂದೂ ಧರ್ಮದ ಬಗ್ಗೆ ನಮಗಿರುವಷ್ಟು ಅಭಿಮಾನ ಅವರಿಗೆ ಇಲ್ಲ. ಕೇವಲ ತೋರಿಕೆ, ಪ್ರಚಾರಕ್ಕಾಗಿ ಮಾತ್ರ ಹಿಂದೂ ಎನ್ನುತ್ತಾರೆ. ನಮ್ಮ ಹೇಳಿಕೆಯಲ್ಲಿ ಯಾವುದೇ ವಿವಾದವಿಲ್ಲ, ತಪ್ಪು ಹೇಳಿಕೆ ನೀಡಿಲ್ಲ. ರಾಜಕೀಯ ಕಾರಣಕ್ಕೆ ವಿರೋಧಿಸಿದರೆ ಉತ್ತರ ನೀಡುತ್ತೇನೆ. ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ನನ್ನ ಪ್ರಕಾರ, ನಾನು ನೀಡಿರುವ ಹೇಳಿಕೆಯಲ್ಲಿ ಯಾವುದೇ ವಿವಾದಾತ್ಮಕ ಅಂಶವಿಲ್ಲ. ಅವರು ರಾಜಕೀಯ ಕಾರಣಕ್ಕೆ ವಿವಾದ ಮಾಡಿದರೆ ಸಂದರ್ಭ ಬಂದಾಗ ಉತ್ತರ ಕೊಡುತ್ತೇನೆ. ಭಗವದ್ಗೀತೆ ಶ್ಲೋಕ ಯಾಕೆ ಹೇಳಿದೆ ನಾನು? ನನಗೆ ಹಿಂದೂ ಧರ್ಮದಲ್ಲಿ ಇರುವಷ್ಟು ನಂಬಿಕೆ, ನಾನು ಮಾಡುವಷ್ಟು ಆಚರಣೆ ಅವರಿಗಂತೂ ಇಲ್ಲ. ನನಗಿಂತ ಹೆಚ್ಚೇನೂ ಬಿಜೆಪಿಯವರು ಆಚರಣೆ ಮಾಡುವುದಿಲ್ಲ. ನಾನು ಕೇವಲ ಹೋಲಿಕೆ ಮಾಡಿ ಮಾತನಾಡಿದ್ದೇನೆ ಅಷ್ಟೇ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…